ETV Bharat / state

ಲಾರಿ - ಬೈಕ್ ನಡುವೆ ಅಪಘಾತ: ಇಬ್ಬರು ಶಿಕ್ಷಕರು ಸ್ಥಳದಲ್ಲೇ ದುರ್ಮರಣ

author img

By

Published : Jul 17, 2021, 6:57 PM IST

ನಗರದ ಹೊರ ಭಾಗದ ರಾಷ್ಟ್ರೀಯ ಹೆದ್ದಾರಿ-50 ರಲ್ಲಿ ಲಾರಿ ಹಾಗೂ ಬೈಕ್ ಮಧ್ಯೆ ರಸ್ತೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಇಬ್ಬರು ಶಿಕ್ಷಕರು ಸಾವನ್ನಪ್ಪಿದ್ದಾರೆ.

ಲಾರಿ ಹಾಗೂ ಬೈಕ್ ಮಧ್ಯೆ ರಸ್ತೆ ಅಪಘಾತ
ಲಾರಿ ಹಾಗೂ ಬೈಕ್ ಮಧ್ಯೆ ರಸ್ತೆ ಅಪಘಾತ

ವಿಜಯಪುರ: ಲಾರಿ ಹಾಗೂ ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್​​​​ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ‌ತಾಲೂಕಿನ ಬರಟಗಿಯಲ್ಲಿ ನಡೆದಿದೆ. ಬರಟಗಿಯ ಎಲ್​​ಟಿ ಸರ್ಕಾರಿ ಮಾಧ್ಯಮಿಕ ಶಾಲೆಯ ಮುಖ್ಯ ಶಿಕ್ಷಕಕೆ ಎಚ್ ಹುದ್ದಾರ (58) ಹಾಗೂ ಸಹ ಶಿಕ್ಷಕ ಸಂಗನಗೌಡ ಪಾಟೀಲ್ ಮೃತರು ಎಂದು ಗುರುತಿಸಲಾಗಿದೆ.

ನಗರದ ಹೊರ ಭಾಗದ ರಾಷ್ಟ್ರೀಯ ಹೆದ್ದಾರಿ-50 ರಲ್ಲಿ ಘಟನೆ ನಡೆದಿದೆ. ಅಪಘಾತದ ಬಳಿಕ ಲಾರಿ ಬಿಟ್ಟು ಲಾರಿ ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಸಂಚಾರಿ ಪೊಲೀಸ್ ಠಾಣೆಯ ಪಿಎಸ್​​ಐ ಸಂಜಯ ಕಲ್ಲೂರು ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯಪುರ: ಲಾರಿ ಹಾಗೂ ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್​​​​ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ‌ತಾಲೂಕಿನ ಬರಟಗಿಯಲ್ಲಿ ನಡೆದಿದೆ. ಬರಟಗಿಯ ಎಲ್​​ಟಿ ಸರ್ಕಾರಿ ಮಾಧ್ಯಮಿಕ ಶಾಲೆಯ ಮುಖ್ಯ ಶಿಕ್ಷಕಕೆ ಎಚ್ ಹುದ್ದಾರ (58) ಹಾಗೂ ಸಹ ಶಿಕ್ಷಕ ಸಂಗನಗೌಡ ಪಾಟೀಲ್ ಮೃತರು ಎಂದು ಗುರುತಿಸಲಾಗಿದೆ.

ನಗರದ ಹೊರ ಭಾಗದ ರಾಷ್ಟ್ರೀಯ ಹೆದ್ದಾರಿ-50 ರಲ್ಲಿ ಘಟನೆ ನಡೆದಿದೆ. ಅಪಘಾತದ ಬಳಿಕ ಲಾರಿ ಬಿಟ್ಟು ಲಾರಿ ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಸಂಚಾರಿ ಪೊಲೀಸ್ ಠಾಣೆಯ ಪಿಎಸ್​​ಐ ಸಂಜಯ ಕಲ್ಲೂರು ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ತಾಕತ್ತಿದ್ದರೆ ನನ್ನ Voice Record ಬಿಡುಗಡೆ ಮಾಡ್ಲಿ; ಇಂದ್ರಜಿತ್ ಲಂಕೇಶ್​​​ಗೆ ದರ್ಶನ್ ಸವಾಲು!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.