ETV Bharat / state

ಟೆಂಡರ್​ಗೂ ಮುನ್ನವೇ ತರಾತುರಿಯಲ್ಲಿ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ..!

ವಿಜಯಪುರ ಜಿಲ್ಲಾಸ್ಪತ್ರೆಯ ಆವರಣದಲ್ಲಿ ಮುಖ್ಯ ರಸ್ತೆಗೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿಯನ್ನು ಟೆಂಡರ್​ ಕರೆಯುವ ಮುನ್ನವೇ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಈ ಕ್ರಮವನ್ನು ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಸಮರ್ಥಿಸಿಕೊಂಡಿದ್ದಾರೆ.

author img

By

Published : Jun 28, 2019, 7:42 AM IST

Updated : Jun 28, 2019, 1:21 PM IST

ಟೆಂಡರ್​ಗೂ ಮುನ್ನವೇ ಕಾಮಗಾರಿಗೆ ಶಂಕುಸ್ಥಾಪನೆ

ವಿಜಯಪುರ: ಜಿಲ್ಲಾಸ್ಪತ್ರೆಯ ಆವರಣದಲ್ಲಿ ಮುಖ್ಯ ರಸ್ತೆಗೆ ಸಂಪರ್ಕ ಕಲ್ಪಿಸುವ ಲಿಂಕ್ ರಸ್ತೆ ನಿರ್ಮಾಣದಲ್ಲಿ ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಜಿಲ್ಲೆಯಲ್ಲಿ ಅಧಿಕಾರಿಗಳು ಮತ್ತು ಗುತ್ತಿಗೆದಾರರು ಆಡಿದ್ದೇ ಆಟವಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ಟೆಂಡರ್​ಗೂ ಮುನ್ನವೇ ಕಾಮಗಾರಿಗೆ ಶಂಕುಸ್ಥಾಪನೆ

ಮಹಾನಗರ ಪಾಲಿಕೆ ಇ-ಪ್ರೊಕ್ಯೂರ್​ಮೆಂಟ್ ಮುಖಾಂತರ ಆನ್​ಲೈನ್​ನಲ್ಲಿ ಬರೋಬ್ಬರಿ ಐದು ಕೋಟಿ ರೂಪಾಯಿಗಳ ಆರು ಕಾಮಗಾರಿಗಳಿಗೆ ಟೆಂಡರ್ ಕರೆಯಲಾಗಿತ್ತು. ಇವೆಲ್ಲವೂ ವಿಜಯಪುರ ಜಿಲ್ಲಾಸ್ಪತ್ರೆಯ ಆವರಣದಲ್ಲಿ ಮುಖ್ಯ ರಸ್ತೆಗೆ ಸಂಪರ್ಕ ಕಲ್ಪಿಸುವ ಲಿಂಕ್ ರಸ್ತೆಗಳಾಗಿವೆ. ಈ ಟೆಂಡರ್​​ ಸಲ್ಲಿಸುವ ಅವಧಿ ಮುನ್ನವೇ ಗುತ್ತಿಗೆದಾರರು ಕಾಮಗಾರಿ ಆರಂಭಿಸಿ ತರಾತುರಿಯಲ್ಲಿ ನಗರ ಶಾಸಕರಿಂದ ಶಂಕುಸ್ಥಾಪನೆ ಸಹ ಮಾಡಿಸಿದ್ದಾರೆ.

ಕೋಟ್ಯಂತರ ರೂಪಾಯಿ ಕಾಮಗಾರಿಗಳನ್ನು ಟೆಂಡರ್ ಪ್ರಕ್ರಿಯೆಗೂ ಮುನ್ನವೇ ಅಷ್ಟೊಂದು ತರಾತುರಿಯಲ್ಲಿ ನಗರ ಶಾಸಕರು ಯಾಕೆ ಶಂಕುಸ್ಥಾಪನೆ ನೆರವೇರಿಸಿದ್ರು ಎಂಬ ಸಂಶಯವೂ ಸಹ ಕಾಡುತ್ತಿದೆ. ಇದರಲ್ಲೇನಾದ್ರೂ ರಹಸ್ಯ ಅಡಗಿದೆಯೇ ಎಂಬ ಪ್ರಶ್ನೆ ಪ್ರಜ್ಞಾವಂತರಲ್ಲಿ ಮೂಡಿದೆ. ಇನ್ನು ಈ ಕುರಿತು ಸ್ವತಃ ನಗರ ಶಾಸಕರನ್ನೇ ಪ್ರಶ್ನಿಸಿದ್ರೆ ಅವರು ತಮ್ಮದೇ ರೀತಿಯಲ್ಲಿ ಇದನ್ನು ಸಮರ್ಥಿಸಿಕೊಂಡಿದ್ದಾರೆ. ನನ್ನ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿ ಆಗುತ್ತಿರುವುದರಿಂದ ನಾನು ತಕರಾರು ಮಾಡುವುದಿಲ್ಲ ಎಂದಿದ್ದಾರೆ. ಹೀಗಾಗಿ ಜನಪ್ರತಿನಿಧಿ, ಅಧಿಕಾರಿ ಹಾಗೂ ಗುತ್ತಿಗೆದಾರರ ಮಧ್ಯೆ ಹೊಂದಾಣಿಕೆ ಏನಾದ್ರು ನಡೀತಿದ್ಯಾ ಅನ್ನೋ ಅನುಮಾನ ಸಾರ್ವಜನಿಕರಲ್ಲಿ ಮೂಡಿದೆ.

ವಿಜಯಪುರ: ಜಿಲ್ಲಾಸ್ಪತ್ರೆಯ ಆವರಣದಲ್ಲಿ ಮುಖ್ಯ ರಸ್ತೆಗೆ ಸಂಪರ್ಕ ಕಲ್ಪಿಸುವ ಲಿಂಕ್ ರಸ್ತೆ ನಿರ್ಮಾಣದಲ್ಲಿ ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಜಿಲ್ಲೆಯಲ್ಲಿ ಅಧಿಕಾರಿಗಳು ಮತ್ತು ಗುತ್ತಿಗೆದಾರರು ಆಡಿದ್ದೇ ಆಟವಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ಟೆಂಡರ್​ಗೂ ಮುನ್ನವೇ ಕಾಮಗಾರಿಗೆ ಶಂಕುಸ್ಥಾಪನೆ

ಮಹಾನಗರ ಪಾಲಿಕೆ ಇ-ಪ್ರೊಕ್ಯೂರ್​ಮೆಂಟ್ ಮುಖಾಂತರ ಆನ್​ಲೈನ್​ನಲ್ಲಿ ಬರೋಬ್ಬರಿ ಐದು ಕೋಟಿ ರೂಪಾಯಿಗಳ ಆರು ಕಾಮಗಾರಿಗಳಿಗೆ ಟೆಂಡರ್ ಕರೆಯಲಾಗಿತ್ತು. ಇವೆಲ್ಲವೂ ವಿಜಯಪುರ ಜಿಲ್ಲಾಸ್ಪತ್ರೆಯ ಆವರಣದಲ್ಲಿ ಮುಖ್ಯ ರಸ್ತೆಗೆ ಸಂಪರ್ಕ ಕಲ್ಪಿಸುವ ಲಿಂಕ್ ರಸ್ತೆಗಳಾಗಿವೆ. ಈ ಟೆಂಡರ್​​ ಸಲ್ಲಿಸುವ ಅವಧಿ ಮುನ್ನವೇ ಗುತ್ತಿಗೆದಾರರು ಕಾಮಗಾರಿ ಆರಂಭಿಸಿ ತರಾತುರಿಯಲ್ಲಿ ನಗರ ಶಾಸಕರಿಂದ ಶಂಕುಸ್ಥಾಪನೆ ಸಹ ಮಾಡಿಸಿದ್ದಾರೆ.

ಕೋಟ್ಯಂತರ ರೂಪಾಯಿ ಕಾಮಗಾರಿಗಳನ್ನು ಟೆಂಡರ್ ಪ್ರಕ್ರಿಯೆಗೂ ಮುನ್ನವೇ ಅಷ್ಟೊಂದು ತರಾತುರಿಯಲ್ಲಿ ನಗರ ಶಾಸಕರು ಯಾಕೆ ಶಂಕುಸ್ಥಾಪನೆ ನೆರವೇರಿಸಿದ್ರು ಎಂಬ ಸಂಶಯವೂ ಸಹ ಕಾಡುತ್ತಿದೆ. ಇದರಲ್ಲೇನಾದ್ರೂ ರಹಸ್ಯ ಅಡಗಿದೆಯೇ ಎಂಬ ಪ್ರಶ್ನೆ ಪ್ರಜ್ಞಾವಂತರಲ್ಲಿ ಮೂಡಿದೆ. ಇನ್ನು ಈ ಕುರಿತು ಸ್ವತಃ ನಗರ ಶಾಸಕರನ್ನೇ ಪ್ರಶ್ನಿಸಿದ್ರೆ ಅವರು ತಮ್ಮದೇ ರೀತಿಯಲ್ಲಿ ಇದನ್ನು ಸಮರ್ಥಿಸಿಕೊಂಡಿದ್ದಾರೆ. ನನ್ನ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿ ಆಗುತ್ತಿರುವುದರಿಂದ ನಾನು ತಕರಾರು ಮಾಡುವುದಿಲ್ಲ ಎಂದಿದ್ದಾರೆ. ಹೀಗಾಗಿ ಜನಪ್ರತಿನಿಧಿ, ಅಧಿಕಾರಿ ಹಾಗೂ ಗುತ್ತಿಗೆದಾರರ ಮಧ್ಯೆ ಹೊಂದಾಣಿಕೆ ಏನಾದ್ರು ನಡೀತಿದ್ಯಾ ಅನ್ನೋ ಅನುಮಾನ ಸಾರ್ವಜನಿಕರಲ್ಲಿ ಮೂಡಿದೆ.

Intro:ವಿಜಯಪುರ Body:ವಿಜಯಪುರ : ಜನಪ್ರತಿನಿಧಿಗಳ ನಿರ್ಲಕ್ಷದಿಂದ ಜಿಲ್ಲೆಯಲ್ಲಿ ಅಧಿಕಾರಿಗಳು ಗುತ್ತಿಗೆದಾರರು ಆಡಿದ್ದೇ ಆಟವಾಗಿದೆ. ಅದಕ್ಕೆ ಒಂದು ತಾಜಾ ಉದಾಹರಣೆ ಇಲ್ಲಿದೆ ನೋಡಿ.
ಮಹಾನಗರ ಪಾಲಿಕೆ ಇ-ಪ್ರೊಕ್ಯೂರಮೆಂಟ್ ಮುಖಾಂತರ ಆನಲೈನ್ ನಲ್ಲಿ ಬರೋಬ್ಬರಿ ಐದು ಕೋಟಿ ರೂಪಾಯಿಗಳ ಆರು ಕಾಮಗಾರಿಗಳಿಗೆ ಟೆಂಡರ್ ಕರೆಯಲಾಗಿತ್ತು. ಇವೆಲ್ಲವೂ ವಿಜಯಪುರ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಮುಖ್ಯ ರಸ್ತೆಗೆ ಸಂಪರ್ಕ ಕಲ್ಪಿಸುವ ಲಿಂಕ್ ರಸ್ತೆಗಳಾಗಿವೆ. ಈ ಟೆಂಡರ್ ಸಲ್ಲಿಸುವ ಅವಧಿ ಮುನ್ನವೇ ಗುತ್ತಿಗೆದಾರರು ಕಾಮಗಾರಿ ಆರಂಭಿಸಿ ತರಾತುರಿಯಲ್ಲಿ ನಗರ ಶಾಸಕರಿಂದ ಶಂಕುಸ್ಥಾಪನೆ ಸಹ ಮಾಡಿಸಿ ಬಿಟ್ಟಿದ್ದಾರೆ.
ಜನಪ್ರತಿನಿಧಿಗಳು ಹಾಗೂ ಗುತ್ತಿಗೆದಾರರು ಸೇರಿ ಇಲ್ಲಿ ಡಬಲ್ ಗೇಮ್ ಆಡುತ್ತಿದ್ದಾರಾ ಎಂಬ ಸಂಶಯ ಮೂಡಿದೆ. ಹೀಗಾಗಿ ಸರ್ಕಾರಿ ಆಡಳಿತದ ಕುರಿತು ಇದೇನಾ ಟೆಂಡರ್ ರೀತಿ-ನೀತಿ. ಇದೇನಾ ಟೆಂಡರ್ ಕಾನೂನು ಎಂದು ಸಾರ್ವಜನಿಕರು ಪ್ರಶ್ನಿಸುವಂತಾಗಿದೆ.
 ಕೋಟ್ಯಾಂತರ ರೂಪಾಯಿ ಕಾಮಗಾರಿಗಳನ್ನು ಟೆಂಡರ್ ಪ್ರಕ್ರಿಯೆಗೂ ಮುನ್ನವೇ ಅಷ್ಟೊಂದು ತರಾತುರಿಯಲ್ಲಿ ನಗರ ಶಾಸಕರು ಯಾಕೆ ಶಂಕುಸ್ಥಾಪನೆ ನೆರವೇರಿಸಿದ್ರು ಎಂಬ ಸಂಶಯವೂ ಸಹ ಕಾಡುತ್ತಿದೆ.ಇದರಲ್ಲೇನಾದ್ರೂ ರಹಸ್ಯ ಅಡಗಿದೆಯೆ ಎಂಬ ಪ್ರಶ್ನೆ ಪ್ರಜ್ಞಾವಂತರಲ್ಲಿ ಮೂಡಿದೆ. ಇನ್ನು ಈ ಕುರಿತು ಸ್ವತಹ ನಗರ ಶಾಸಕರನ್ನೇ ಪ್ರಶ್ನಿಸಿದ್ರೆ ಅವರು ತಮ್ಮದೇ ರೀತಿಯಲ್ಲಿ ಸಮರ್ಥಿಸಿಕೊಂಡಿದ್ದಾರೆ. ನನ್ನ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿ ಆಗುತ್ತಿರುವುದರಿಂದ ನಾನು ತಕರಾರು ಮಾಡುವುದಿಲ್ಲ ಎನ್ನುವ ಮೂಲಕ ತಮ್ಮ ಕೃಪಾಶಿರ್ವಾದ ಗುತ್ತಿಗೆದಾರರ ಮೇಲಿದೆಯಾ ಎಂದು ಸಂಶಯ ಮೂಡುವಂತೆ ಮಾಡಿದ್ದಾರೆ.
  ಒಟ್ಟಿನಲ್ಲಿ ಜನಪ್ರತಿನಿಧಿ, ಅಧಿಕಾರಿ ಹಾಗೂ ಗುತ್ತಿಗೆದಾರರ ಮಧ್ಯೆ ಹೊಂದಾಣಿಕೆ ಇದ್ರೆ ಏನುಬೇಕಾದ್ರೂ ಮಾಡಬಹುದು ಎಂಬುದಕ್ಕೆ ಇದೆ ಸಾಕ್ಷಿಯಾಗಿದೆ.
ಬೈಟ್: ಬಸನಗೌಡ ಪಾಟೀಲ, ವಿಜಯಪುರ ನಗರ ಶಾಸಕರುConclusion:ವಿಜಯಪುರ
Last Updated : Jun 28, 2019, 1:21 PM IST

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.