ETV Bharat / state

ಶಾಲಾ ವಾಹನ ಅಪಘಾತ, ತಪ್ಪಿದ ದೊಡ್ಡ ಅನಾಹುತ - ಅಪಘಾತ ಸುದ್ದಿ

ಮುದ್ದೇಬಿಹಾಳದಿಂದ ವಿಜಯಪುರಕ್ಕೆ ಹೊರಟಿದ್ದ ವೇಳೆ ಲಾರಿಗೆ ಹಿಂಬದಿಯಿಂದ ಶಾಲಾ ವಾಹನ ಡಿಕ್ಕಿಯಾಗಿ ಶಾಲಾ ವಾಹನದಲ್ಲಿದ್ದ ಹತ್ತಕ್ಕೂ ಹೆಚ್ಚು ಜನ ಗಾಯಗೊಂಡ ಘಟನೆ ನಿಡಗುಂದಿ ತಾಲೂಕಿನ ಉಣ್ಣಿಬಾವಿ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

school-bus-accident-in-vijaypur
ಶಾಲಾ ವಾಹನ ಡಿಕ್ಕಿ
author img

By

Published : Feb 1, 2020, 10:39 AM IST

ವಿಜಯಪುರ: ಲಾರಿಗೆ ಹಿಂಬದಿಯಿಂದ ಶಾಲಾ ವಾಹನ ಡಿಕ್ಕಿಯಾಗಿ ಶಾಲಾ ವಾಹನದಲ್ಲಿದ್ದ ಹತ್ತಕ್ಕೂ ಹೆಚ್ಚು ಜನರಿಗೆ ಗಾಯವಾದ ಘಟನೆ ನಿಡಗುಂದಿ ತಾಲೂಕಿನ ಉಣ್ಣಿಬಾವಿ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಮುದ್ದೇಬಿಹಾಳದ ಜ್ಞಾನಭಾರತಿ ಶಾಲೆಗೆ ಸೇರಿದ ಶಾಲಾ ವಾಹನ ಇದಾಗಿದ್ದು, ವಿಜಯಪುರಕ್ಕೆ ಹೊರಟಿತ್ತು ಎಂಬ ಮಾಹಿತಿ ದೊರೆತಿದೆ.

ಶಾಲಾ ವಾಹನ ಡಿಕ್ಕಿ
ವಿಜಯಪುರದಲ್ಲಿ ಕಾರ್ಯಕ್ರಮವೊಂದಕ್ಕೆ ವಿದ್ಯಾರ್ಥಿಗಳ ಪೋಷಕರನ್ನು ಕರೆ ತರುತ್ತಿದ್ದ ವೇಳೆ ಘಟನೆ ನಡೆದಿದ್ದು ಗಾಯಾಳುಗಳನ್ನು ನಿಡಗುಂದಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ನಿಡಗುಂದಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯಪುರ: ಲಾರಿಗೆ ಹಿಂಬದಿಯಿಂದ ಶಾಲಾ ವಾಹನ ಡಿಕ್ಕಿಯಾಗಿ ಶಾಲಾ ವಾಹನದಲ್ಲಿದ್ದ ಹತ್ತಕ್ಕೂ ಹೆಚ್ಚು ಜನರಿಗೆ ಗಾಯವಾದ ಘಟನೆ ನಿಡಗುಂದಿ ತಾಲೂಕಿನ ಉಣ್ಣಿಬಾವಿ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಮುದ್ದೇಬಿಹಾಳದ ಜ್ಞಾನಭಾರತಿ ಶಾಲೆಗೆ ಸೇರಿದ ಶಾಲಾ ವಾಹನ ಇದಾಗಿದ್ದು, ವಿಜಯಪುರಕ್ಕೆ ಹೊರಟಿತ್ತು ಎಂಬ ಮಾಹಿತಿ ದೊರೆತಿದೆ.

ಶಾಲಾ ವಾಹನ ಡಿಕ್ಕಿ
ವಿಜಯಪುರದಲ್ಲಿ ಕಾರ್ಯಕ್ರಮವೊಂದಕ್ಕೆ ವಿದ್ಯಾರ್ಥಿಗಳ ಪೋಷಕರನ್ನು ಕರೆ ತರುತ್ತಿದ್ದ ವೇಳೆ ಘಟನೆ ನಡೆದಿದ್ದು ಗಾಯಾಳುಗಳನ್ನು ನಿಡಗುಂದಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ನಿಡಗುಂದಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.