ETV Bharat / state

ಕ್ವಾರಂಟೈನ್ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು, ಅಧಿಕಾರಿಗಳಿಗೆ ಸೂಚನೆ ನೀಡಿದ ಶಶಿಕಲಾ ಜೊಲ್ಲೆ..

ಕೋವಿಡ್-19 ಸಾಂಕ್ರಾಮಿಕ ರೋಗ ನಿಯಂತ್ರಣಕ್ಕಾಗಿ ಹೊರ ರಾಜ್ಯಗಳಿಂದ ಆಗಮಿಸಿದವರನ್ನು ಸಾಂಸ್ಥಿಕ ಹಾಗೂ ಹೋಮ್ ಕ್ವಾರಂಟೈನ್ ನಿಯಮ ಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಸೂಚಿಸಿದರು.

author img

By

Published : Jun 3, 2020, 8:36 PM IST

Shashikala Jolle advised authorities follow Quarantine Rule
ಕ್ವಾರಂಟೈನ್ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು, ಅಧಿಕಾರಿಗಳಿಗೆ ಸೂಚನೆ ನೀಡಿದ ಶಶಿಕಲಾ ಜೊಲ್ಲೆ

ವಿಜಯಪುರ: ಕೋವಿಡ್-19 ಸೋಂಕಿನ ಕಾರ್ಯ ನಿರ್ವಹಣೆ ಕುರಿತಾಗಿ ಸಚಿವೆ ಶಶಿಕಲಾ ಜೊಲ್ಲೆ ಅಧಿಕಾರಿಗಳೊಂದಿಗೆ ಇಂದು ಸಭೆ ನಡೆಸಿದರು.

ನಗರದ ನೂತನ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಹೊರ ರಾಜ್ಯದಿಂದ ಬರುವವರಿಗೆ ಜಿಲ್ಲೆಯ ಗಡಿಭಾಗದಲ್ಲಿ ಚೆಕ್‍ಪೋಸ್ಟ್‌ಗಳನ್ನು ಮತ್ತಷ್ಟು ಬಿಗಿಗೊಳಿಸಬೇಕು. ಕ್ವಾರಂಟೈನ್ ಕೇಂದ್ರಗಳ ಹಾಗೂ ಹೋಮ್ ಕ್ವಾರಂಟೈನ್ ನಿಯಮಗಳು ಕಟ್ಟುನಿಟ್ಟಾಗಿ ಪಾಲನೆಯಾಗಬೇಕು. ಕಂಟೇನ್ಮೆಂಟ್ ವಲಯಗಳ ಸೂಕ್ತ ನಿರ್ವಹಣೆಯಾಗಬೇಕು. ಎನ್‌ಆರ್‌ಇಜಿಎ ಯೋಜನೆಯಡಿ ಹೊರ ರಾಜ್ಯದಿಂದ ಜಿಲ್ಲೆಗೆ ಆಗಮಿಸಿದ ಕಾರ್ಮಿಕರಿಗೆ ಉದ್ಯೋಗಕಲ್ಪಿಸುವ ಹಿನ್ನೆಲೆಯಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು. ರೈತರಿಗೆ ಮುಂಗಾರು ಸಂದರ್ಭದಲ್ಲಿ ಬಿತ್ತನೆಬೀಜ, ರಸಗೊಬ್ಬರದ ಕೊರತೆಯಾಗದಂತೆ ನೋಡಿಕೊಳ್ಳಬೇಕು.

ರೈತರಿಗೆ ರೈತಸಂಪರ್ಕ ಕೇಂದ್ರಗಳ ಮೂಲಕ ಡಿಎಪಿ, ರಸಗೊಬ್ಬರ ಹಾಗೂ ಬಿತ್ತನೆ ಬೀಜಗಳ ಸಮರ್ಪಕ ವಿತರಣೆಯಾಗಬೇಕು. ರೈತರಿಗೆ ಯಾವುದೇ ತೊಂದರೆಗಳಾಗದಂತೆ ಕಾರ್ಯನಿರ್ವಹಿಸಬೇಕು. ತೋಟಗಾರಿಕೆಯ ಹೂವು ಬೆಳೆಗಾರರು, ಹಣ್ಣುತರಕಾರಿ ಬೆಳೆಗಾರರಿಗೆ ಸರ್ಕಾರಿ ಮಾರ್ಗಸೂಚಿಯಂತೆ ಬೆಳೆಹಾನಿ ಪರಿಹಾರ ಧನ ಕಲ್ಪಿಸಬೇಕು. ಮದುವೆಗಳಿಗಾಗಿ ಮಂಗಲ ಕಾರ್ಯಾಲಯಗಳನ್ನು ಕಾಯ್ದಿರಿಸಿ, ಲಾಕ್‍ಡೌನ್‌ನಿಂದ ಸಮಸ್ಯೆ ಎದುರಿಸುತ್ತಿರುವ ಮತ್ತು ಠೇವಣಿ ಹಣ ನೀಡಿರುವವರಿಗೆ ಮರಳಿ ಹಣ ದೊರಕಿಸಿಕೊಡುವುದರ ಬಗ್ಗೆ ಸೂಕ್ತ ಕ್ರಮಗಳನ್ನುಕೈಗೊಳ್ಳಬೇಕು ಎಂದರು.

ಜಿಲ್ಲಾಧಿಕಾರಿ ವೈ ಎಸ್ ಪಾಟೀಲ ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 22 ಕಂಟೇನ್ಮೆಂಟ್ ವಲಯಗಳನ್ನು ನಿರ್ಮಿಸಲಾಗಿದೆ. 5 ಕಂಟೇನ್ಮೆಂಟ್ ವಲಯಗಳು ರದ್ಧತಿಯಾಗಿವೆ. ಸದ್ಯಕ್ಕೆ 17 ಕಂಟೇನ್ಮೆಂಟ್ ವಲಯಗಳು ಚಾಲ್ತಿಯಲ್ಲಿದ್ದು, ಇವುಗಳ ಮೇಲೆ ಪೂರ್ತಿ ನಿಗಾ ಇಡಲಾಗಿದೆ. ಹೊರ ರಾಜ್ಯಗಳಿಂದ ಜಿಲ್ಲೆಗೆ ಆಗಮಿಸಿರುವ ವಲಸೆ ಕಾರ್ಮಿಕರನ್ನು ಸಾಂಸ್ಥಿಕ ಕ್ವಾರಂಟೈನ್‍ನಲ್ಲಿರಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು 576 ಸಾಂಸ್ಥಿಕ ಕ್ವಾರಂಟೈನ್ ಕೇಂದ್ರಗಳಿವೆ. ಈ ಕ್ವಾರಂಟೈನ್ ಕೇಂದ್ರಗಳಲ್ಲಿ ಒಟ್ಟು 26,324 ಜನರನ್ನು ಕ್ವಾರಂಟೈನ್ ಮಾಡಲಾಗಿದೆ. 23,834 ಜನರು ಸಾಂಸ್ಥಿಕ ಕ್ವಾರಂಟೈನ್ ಅವಧಿ ಪೂರ್ಣಗೊಳಿಸಿದ್ದಾರೆ. ಹೋಮ್‌ ಕ್ವಾರಂಟೈನ್ ಮಾಡಿ ಅವರ ಮೇಲೆ ನಿಗಾ ಇಡಲಾಗಿದೆ. ಜಿಲ್ಲೆಯಲ್ಲಿ ಸದ್ಯಕ್ಕೆ 133 ಸಾಂಸ್ಥಿಕ ಕ್ವಾರಂಟೈನ್ ಕೇಂದ್ರಗಳು ಚಾಲ್ತಿಯಲ್ಲಿವೆ. ಈ ಕ್ವಾರಂಟೈನ್ ಕೇಂದ್ರಗಳಲ್ಲಿ 2503 ಜನರ ಮೇಲೆ ನಿಗಾ ಇಡಲಾಗಿದೆ ಎಂದರು.

ಜಿಲ್ಲೆಗೆ ಮಹಾರಾಷ್ಟ್ರ ರಾಜ್ಯದಿಂದ ಈವರೆಗೆ 21,113 ಜನ ವಲಸಿಗರು ಆಗಮಿಸಿದ್ದಾರೆ. ಈವರೆಗೆ 21,015 ಜನರ ಗಂಟಲುದ್ರವ ಮಾದರಿ ಸಂಗ್ರಹಿಸಿ ಪರೀಕ್ಷೆಗಾಗಿ ಕಳುಹಿಸಲಾಗಿದೆ. ಇವುಗಳಲ್ಲಿ 16,514 ಜನರ ವರದಿ ನೆಗೆಟಿವ್‌ ಬಂದಿವೆ. 69 ಪಾಸಿಟಿವ್‌ ಬಂದಿದ್ದು, ಇನ್ನೂ 4,432 ಜನರ ಗಂಟಲು ದ್ರವ ಮಾದರಿ ಪರೀಕ್ಷಾ ವರದಿ ಬರಬೇಕಾಗಿದೆ. ಜಿಲ್ಲೆಗೆ ಮಹಾರಾಷ್ಟ್ರದಿಂದ 21,113 ಹಾಗೂ ಗೋವಾ ರಾಜ್ಯದಿಂದ 2,982 ಜತೆಗೆ ಅನ್ಯರಾಜ್ಯಗಳಿಂದ 6,676 ಜನರು ಆಗಮಿಸಿದ್ದಾರೆ.

ಈವರೆಗೆ ವಿದೇಶ ಸೇರಿ ಇತರ ಪ್ರದೇಶಗಳಿಂದ ಆಗಮಿಸಿದ 27,384 ಜನರ ಮೇಲೆ ತೀವ್ರ ನಿಗಾ ಇಡಲಾಗಿದೆ. ಒಟ್ಟು 127 ಕೋವಿಡ್ -19 ಪಾಸಿಟಿವ್ ಪ್ರಕರಣ ದೃಢಪಟ್ಟಿವೆ. 7,458 ಜನರು 28 ದಿನಗಳ ಐಸೋಲೇಷನ್ ಅವಧಿ ಪೂರ್ಣಗೊಳಿಸಿದ್ದಾರೆ. 19,863 ಜನರು (1 ರಿಂದ 28 ದಿನಗಳ) ರಿಪೋರ್ಟಿಂಗ್ ಅವಧಿಯಲ್ಲಿದ್ದು, ಈವರೆಗೆ ಒಟ್ಟು 5 ಜನ ಕೋವಿಡ್-19 ರೋಗಿಗಳು ಮೃತಪಟ್ಟಿದ್ದಾರೆ. 58 ಜನ ಕೋವಿಡ್-19 ರೋಗದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಆಸ್ಪತ್ರೆಯಲ್ಲಿ 64 ಜನ ಕೋವಿಡ್-19 ಸಕ್ರಿಯ ರೋಗಿಗಳಾಗಿದ್ದಾರೆ. ಈವರೆಗೆ 24,511 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಲಾಗಿದೆ. 19,952 ಜನರ ನೆಗೆಟಿವ್ ವರದಿ ಬಂದಿದೆ. ಇನ್ನೂ 4,432 ಜನರ ಗಂಟಲು ದ್ರವ ಮಾದರಿ ಪರೀಕ್ಷಾ ವರದಿ ಬರಬೇಕಾಗಿದೆ ಎಂದರು.

ಸಭೆಯಲ್ಲಿ ಸಂಸದ ರಮೇಶ ಜಿಗಜಿಣಗಿ, ಶಾಸಕ ಸೋಮನಗೌಡ ಸಾಸನೂರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್, ಮಹಾನಗರ ಪಾಲಿಕೆ ಆಯುಕ್ತ ಹರ್ಷಾ ಶೆಟ್ಟಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಮಹೇಂದ್ರ ಕಾಪ್ಸೆ, ಕೃಷಿ ಜಂಟಿ ನಿರ್ದೇಶಕ ಶಿವಕುಮಾರ್, ಉಪ ವಿಭಾಗಾಧಿಕಾರಿ ಸೋಮಲಿಂಗ ಗೆಣ್ಣೂರ, ತಹಶೀಲ್ದಾರ್ ಮೋಹನ್‍ಕುಮಾರಿ ಸೇರಿ ಇತರರಿದ್ದರು.

ವಿಜಯಪುರ: ಕೋವಿಡ್-19 ಸೋಂಕಿನ ಕಾರ್ಯ ನಿರ್ವಹಣೆ ಕುರಿತಾಗಿ ಸಚಿವೆ ಶಶಿಕಲಾ ಜೊಲ್ಲೆ ಅಧಿಕಾರಿಗಳೊಂದಿಗೆ ಇಂದು ಸಭೆ ನಡೆಸಿದರು.

ನಗರದ ನೂತನ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಹೊರ ರಾಜ್ಯದಿಂದ ಬರುವವರಿಗೆ ಜಿಲ್ಲೆಯ ಗಡಿಭಾಗದಲ್ಲಿ ಚೆಕ್‍ಪೋಸ್ಟ್‌ಗಳನ್ನು ಮತ್ತಷ್ಟು ಬಿಗಿಗೊಳಿಸಬೇಕು. ಕ್ವಾರಂಟೈನ್ ಕೇಂದ್ರಗಳ ಹಾಗೂ ಹೋಮ್ ಕ್ವಾರಂಟೈನ್ ನಿಯಮಗಳು ಕಟ್ಟುನಿಟ್ಟಾಗಿ ಪಾಲನೆಯಾಗಬೇಕು. ಕಂಟೇನ್ಮೆಂಟ್ ವಲಯಗಳ ಸೂಕ್ತ ನಿರ್ವಹಣೆಯಾಗಬೇಕು. ಎನ್‌ಆರ್‌ಇಜಿಎ ಯೋಜನೆಯಡಿ ಹೊರ ರಾಜ್ಯದಿಂದ ಜಿಲ್ಲೆಗೆ ಆಗಮಿಸಿದ ಕಾರ್ಮಿಕರಿಗೆ ಉದ್ಯೋಗಕಲ್ಪಿಸುವ ಹಿನ್ನೆಲೆಯಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು. ರೈತರಿಗೆ ಮುಂಗಾರು ಸಂದರ್ಭದಲ್ಲಿ ಬಿತ್ತನೆಬೀಜ, ರಸಗೊಬ್ಬರದ ಕೊರತೆಯಾಗದಂತೆ ನೋಡಿಕೊಳ್ಳಬೇಕು.

ರೈತರಿಗೆ ರೈತಸಂಪರ್ಕ ಕೇಂದ್ರಗಳ ಮೂಲಕ ಡಿಎಪಿ, ರಸಗೊಬ್ಬರ ಹಾಗೂ ಬಿತ್ತನೆ ಬೀಜಗಳ ಸಮರ್ಪಕ ವಿತರಣೆಯಾಗಬೇಕು. ರೈತರಿಗೆ ಯಾವುದೇ ತೊಂದರೆಗಳಾಗದಂತೆ ಕಾರ್ಯನಿರ್ವಹಿಸಬೇಕು. ತೋಟಗಾರಿಕೆಯ ಹೂವು ಬೆಳೆಗಾರರು, ಹಣ್ಣುತರಕಾರಿ ಬೆಳೆಗಾರರಿಗೆ ಸರ್ಕಾರಿ ಮಾರ್ಗಸೂಚಿಯಂತೆ ಬೆಳೆಹಾನಿ ಪರಿಹಾರ ಧನ ಕಲ್ಪಿಸಬೇಕು. ಮದುವೆಗಳಿಗಾಗಿ ಮಂಗಲ ಕಾರ್ಯಾಲಯಗಳನ್ನು ಕಾಯ್ದಿರಿಸಿ, ಲಾಕ್‍ಡೌನ್‌ನಿಂದ ಸಮಸ್ಯೆ ಎದುರಿಸುತ್ತಿರುವ ಮತ್ತು ಠೇವಣಿ ಹಣ ನೀಡಿರುವವರಿಗೆ ಮರಳಿ ಹಣ ದೊರಕಿಸಿಕೊಡುವುದರ ಬಗ್ಗೆ ಸೂಕ್ತ ಕ್ರಮಗಳನ್ನುಕೈಗೊಳ್ಳಬೇಕು ಎಂದರು.

ಜಿಲ್ಲಾಧಿಕಾರಿ ವೈ ಎಸ್ ಪಾಟೀಲ ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 22 ಕಂಟೇನ್ಮೆಂಟ್ ವಲಯಗಳನ್ನು ನಿರ್ಮಿಸಲಾಗಿದೆ. 5 ಕಂಟೇನ್ಮೆಂಟ್ ವಲಯಗಳು ರದ್ಧತಿಯಾಗಿವೆ. ಸದ್ಯಕ್ಕೆ 17 ಕಂಟೇನ್ಮೆಂಟ್ ವಲಯಗಳು ಚಾಲ್ತಿಯಲ್ಲಿದ್ದು, ಇವುಗಳ ಮೇಲೆ ಪೂರ್ತಿ ನಿಗಾ ಇಡಲಾಗಿದೆ. ಹೊರ ರಾಜ್ಯಗಳಿಂದ ಜಿಲ್ಲೆಗೆ ಆಗಮಿಸಿರುವ ವಲಸೆ ಕಾರ್ಮಿಕರನ್ನು ಸಾಂಸ್ಥಿಕ ಕ್ವಾರಂಟೈನ್‍ನಲ್ಲಿರಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು 576 ಸಾಂಸ್ಥಿಕ ಕ್ವಾರಂಟೈನ್ ಕೇಂದ್ರಗಳಿವೆ. ಈ ಕ್ವಾರಂಟೈನ್ ಕೇಂದ್ರಗಳಲ್ಲಿ ಒಟ್ಟು 26,324 ಜನರನ್ನು ಕ್ವಾರಂಟೈನ್ ಮಾಡಲಾಗಿದೆ. 23,834 ಜನರು ಸಾಂಸ್ಥಿಕ ಕ್ವಾರಂಟೈನ್ ಅವಧಿ ಪೂರ್ಣಗೊಳಿಸಿದ್ದಾರೆ. ಹೋಮ್‌ ಕ್ವಾರಂಟೈನ್ ಮಾಡಿ ಅವರ ಮೇಲೆ ನಿಗಾ ಇಡಲಾಗಿದೆ. ಜಿಲ್ಲೆಯಲ್ಲಿ ಸದ್ಯಕ್ಕೆ 133 ಸಾಂಸ್ಥಿಕ ಕ್ವಾರಂಟೈನ್ ಕೇಂದ್ರಗಳು ಚಾಲ್ತಿಯಲ್ಲಿವೆ. ಈ ಕ್ವಾರಂಟೈನ್ ಕೇಂದ್ರಗಳಲ್ಲಿ 2503 ಜನರ ಮೇಲೆ ನಿಗಾ ಇಡಲಾಗಿದೆ ಎಂದರು.

ಜಿಲ್ಲೆಗೆ ಮಹಾರಾಷ್ಟ್ರ ರಾಜ್ಯದಿಂದ ಈವರೆಗೆ 21,113 ಜನ ವಲಸಿಗರು ಆಗಮಿಸಿದ್ದಾರೆ. ಈವರೆಗೆ 21,015 ಜನರ ಗಂಟಲುದ್ರವ ಮಾದರಿ ಸಂಗ್ರಹಿಸಿ ಪರೀಕ್ಷೆಗಾಗಿ ಕಳುಹಿಸಲಾಗಿದೆ. ಇವುಗಳಲ್ಲಿ 16,514 ಜನರ ವರದಿ ನೆಗೆಟಿವ್‌ ಬಂದಿವೆ. 69 ಪಾಸಿಟಿವ್‌ ಬಂದಿದ್ದು, ಇನ್ನೂ 4,432 ಜನರ ಗಂಟಲು ದ್ರವ ಮಾದರಿ ಪರೀಕ್ಷಾ ವರದಿ ಬರಬೇಕಾಗಿದೆ. ಜಿಲ್ಲೆಗೆ ಮಹಾರಾಷ್ಟ್ರದಿಂದ 21,113 ಹಾಗೂ ಗೋವಾ ರಾಜ್ಯದಿಂದ 2,982 ಜತೆಗೆ ಅನ್ಯರಾಜ್ಯಗಳಿಂದ 6,676 ಜನರು ಆಗಮಿಸಿದ್ದಾರೆ.

ಈವರೆಗೆ ವಿದೇಶ ಸೇರಿ ಇತರ ಪ್ರದೇಶಗಳಿಂದ ಆಗಮಿಸಿದ 27,384 ಜನರ ಮೇಲೆ ತೀವ್ರ ನಿಗಾ ಇಡಲಾಗಿದೆ. ಒಟ್ಟು 127 ಕೋವಿಡ್ -19 ಪಾಸಿಟಿವ್ ಪ್ರಕರಣ ದೃಢಪಟ್ಟಿವೆ. 7,458 ಜನರು 28 ದಿನಗಳ ಐಸೋಲೇಷನ್ ಅವಧಿ ಪೂರ್ಣಗೊಳಿಸಿದ್ದಾರೆ. 19,863 ಜನರು (1 ರಿಂದ 28 ದಿನಗಳ) ರಿಪೋರ್ಟಿಂಗ್ ಅವಧಿಯಲ್ಲಿದ್ದು, ಈವರೆಗೆ ಒಟ್ಟು 5 ಜನ ಕೋವಿಡ್-19 ರೋಗಿಗಳು ಮೃತಪಟ್ಟಿದ್ದಾರೆ. 58 ಜನ ಕೋವಿಡ್-19 ರೋಗದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಆಸ್ಪತ್ರೆಯಲ್ಲಿ 64 ಜನ ಕೋವಿಡ್-19 ಸಕ್ರಿಯ ರೋಗಿಗಳಾಗಿದ್ದಾರೆ. ಈವರೆಗೆ 24,511 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಲಾಗಿದೆ. 19,952 ಜನರ ನೆಗೆಟಿವ್ ವರದಿ ಬಂದಿದೆ. ಇನ್ನೂ 4,432 ಜನರ ಗಂಟಲು ದ್ರವ ಮಾದರಿ ಪರೀಕ್ಷಾ ವರದಿ ಬರಬೇಕಾಗಿದೆ ಎಂದರು.

ಸಭೆಯಲ್ಲಿ ಸಂಸದ ರಮೇಶ ಜಿಗಜಿಣಗಿ, ಶಾಸಕ ಸೋಮನಗೌಡ ಸಾಸನೂರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್, ಮಹಾನಗರ ಪಾಲಿಕೆ ಆಯುಕ್ತ ಹರ್ಷಾ ಶೆಟ್ಟಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಮಹೇಂದ್ರ ಕಾಪ್ಸೆ, ಕೃಷಿ ಜಂಟಿ ನಿರ್ದೇಶಕ ಶಿವಕುಮಾರ್, ಉಪ ವಿಭಾಗಾಧಿಕಾರಿ ಸೋಮಲಿಂಗ ಗೆಣ್ಣೂರ, ತಹಶೀಲ್ದಾರ್ ಮೋಹನ್‍ಕುಮಾರಿ ಸೇರಿ ಇತರರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.