ವಿಜಯಪುರ: ಜಿಲ್ಲೆಯ ತಿಕೋಟಾ ತಾಲೂಕಿನ ಕಳ್ಳಕವಟಗಿ ಗ್ರಾಮದ ತೋಟವೊಂದರ ಬಾವಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾದ ಘಟನೆ ನಡೆದಿದೆ.
ನಾಗಪ್ಪ ಗಗನಮಾಲಿ ಎಂಬುವವರಿಗೆ ಸೇರಿದ ಬಾವಿಯಲ್ಲಿ ಶವ ಪತ್ಎಯಾಗಿದ್ದು, ಸುಮಾರು 30 ವರ್ಷ ವಯಸ್ಸಿನ ಪುರುಷನ ಶವ ಎಂದು ಅಂದಾಜಿಸಲಾಗಿದೆ. ಈತ ಈಜಲು ಹೋಗಿ ಅಥವಾ ಆತ್ಮಹತ್ಯೆ ಮಾಡಿಕೊಳ್ಳಲು ಬಾವಿಗೆ ಹಾರಿರುವ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ.
ಇನ್ನೂ ಈತ ಎರಡು ದಿನಗಳ ಹಿಂದೆ ಬಾವಿಗೆ ಹಾರಿರಬಹುದು ಎಂದು ಅಂದಾಜಿಸಲಾಗಿದೆ. ಇಂದು ಶವ ಬಾವಿಯಲ್ಲಿ ತೇಲುತ್ತಿರುವಾಗ ತೋಟದ ಮಾಲೀಕರು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಿಕೋಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.