ವಿಜಯಪುರ: ಬೈಕ್ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯಲ್ಲಿನ ರಾಷ್ಟ್ರೀಯ ಹೆದ್ದಾರಿ 13ರ ತಿಡಗುಂದಿ ಬಳಿ ಸಂಭವಿಸಿದೆ.
ಬಾಳು ಪಾಂಡ್ರೆ (45), ಪತ್ನಿ ದುರ್ಗಾ ಪಾಂಡ್ರೆ (38) ಹಾಗೂ ಸೀತಾಬಾಯಿ ಪಾಂಡ್ರೆ ಮೃತಪಟ್ಟವರು. ಇವರು ವಿಜಯಪುರದಿಂದ ತಿಡಗುಂದಿಗೆ ಬೈಕ್ನಲ್ಲಿ ತೆರಳುತ್ತಿದ್ದಾಗ ಅವಘಡ ಸಂಭವಿಸಿದೆ.
ತಿಡಗುಂದಿ ಬಳಿ ವೇಗವಾಗಿ ಬಂದ ಲಾರಿ ಬೈಕ್ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಮೂವರೂ ಸಾವಿಗೀಡಾಗಿದ್ದಾರೆ. ಅಪಘಾತದ ಬಳಿಕ ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ.
ವಿಜಯಪುರ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.