ETV Bharat / state

ಗ್ರಾಪಂ ಅಧ್ಯಕ್ಷೆಯ ಮನೆಗೆ ನುಗ್ಗಿ ಕುಟುಂಬಸ್ಥರ ಮೇಲೆ ಹಲ್ಲೆಗೈದ ತಾಪಂ ಉಪಾಧ್ಯಕ್ಷ!?

author img

By

Published : Dec 31, 2019, 5:25 PM IST

ತಾಲೂಕು ಪಂಚಾಯತ್‌ ಉಪಾಧ್ಯಕ್ಷ ಹಾಗೂ ಆತನ ಬೆಂಬಲಿಗರ ಗುಂಪು ಗ್ರಾಮ ಪಂಚಾಯತ್ ಮಹಿಳಾ ಅಧ್ಯಕ್ಷರ ಮನೆಗೆ ನುಗ್ಗಿ ಕುಟುಂಬ ಸದಸ್ಯರ ಮೇಲೆ ಹಲ್ಲೆ ಮಾಡಿದ್ದಾರೆಂಬ ಆರೋಪ ಕೇಳಿ ಬಂದಿದೆ.

tp voice precident attack on gp president in vijayapur
ಬಸರಕೋಡ ಗ್ರಾಮದಲ್ಲಿ ನಡೆದ ಗಲಾಟೆ

ವಿಜಯಪುರ: ತಾಲೂಕು ಪಂಚಾಯತ್‌ ಉಪಾಧ್ಯಕ್ಷ ಹಾಗೂ ಆತನ ಬೆಂಬಲಿಗರು ಮಹಿಳಾ ಗ್ರಾಮ ಪಂಚಾಯತ್ ಅಧ್ಯಕ್ಷರ ಮನೆಗೆ ನುಗ್ಗಿ ಕುಟುಂಬ ಸದಸ್ಯರ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ. ಬಸರಕೋಡ ಹಳ್ಳಿಯ ಗ್ರಾಮ ಪಂಚಾಯತ್ ಅಧ್ಯಕ್ಷೆಯಾದ ಸುನಂದಾ ಮಾದರ ಹಾಗೂ ಅವರ ಕುಟುಂಬಸ್ಥರ ಮೇಲೆ ಹಲ್ಲೆ ನಡೆದಿದೆ.

ಮುದ್ದೇಬಿಹಾಳ ತಾಲೂಕು ಪಂಚಾಯತ್ ಉಪಾಧ್ಯಕ್ಷ ಮಂಜುನಾಥಗೌಡ ಪಾಟೀಲ್ ಮತ್ತು ಸಹೋದರ ರವಿಗೌಡ ಪಾಟೀಲ್‌ ಗುಂಪು ಕಟ್ಟಿಕೊಂಡು ಹೋಗಿ ಸುನಂದಾರ ಮನೆ ಮುಂದೆ ಗಲಾಟೆ ಮಾಡಿದೆಯಂತೆ. ಅಷ್ಟೇ ಅಲ್ಲ, ಅವಾಚ್ಯ ಶಬ್ದಗಳಿಂದ ಸುನಂದಾರನ್ನ ನಿಂದಿಸಿ ಆವಾಜ್ ಹಾಕಿದ್ದಾರೆಂದು ಆರೋಪಿಸಲಾಗಿದೆ.

ಬಸರಕೋಡ ಗ್ರಾಮದಲ್ಲಿ ಗಲಾಟೆ..

ಎಂಟತ್ತು ಜನರೊಂದಿಗೆ ತೆರಳಿ, ಏಕಾಏಕಿ ಹಲ್ಲೆ ಮಾಡಿದ್ದು, ಮನೆಯಲ್ಲಿದ್ದ ಮಕ್ಕಳ‌ ಮೇಲೂ ದಬ್ಬಾಳಿಕೆ ಮಾಡಿದ್ದಾರೆ. ಕ್ಷುಲ್ಲಕ ಕಾರಣಕ್ಕೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಆದರೆ, ಈ ಕುರಿತು ಯಾವುದೇ ದೂರನ್ನ ಪೊಲೀಸ್‌ ಠಾಣೆಯಲ್ಲಿ ದಾಖಲಿಸಲಾಗಿಲ್ಲ.

ವಿಜಯಪುರ: ತಾಲೂಕು ಪಂಚಾಯತ್‌ ಉಪಾಧ್ಯಕ್ಷ ಹಾಗೂ ಆತನ ಬೆಂಬಲಿಗರು ಮಹಿಳಾ ಗ್ರಾಮ ಪಂಚಾಯತ್ ಅಧ್ಯಕ್ಷರ ಮನೆಗೆ ನುಗ್ಗಿ ಕುಟುಂಬ ಸದಸ್ಯರ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ. ಬಸರಕೋಡ ಹಳ್ಳಿಯ ಗ್ರಾಮ ಪಂಚಾಯತ್ ಅಧ್ಯಕ್ಷೆಯಾದ ಸುನಂದಾ ಮಾದರ ಹಾಗೂ ಅವರ ಕುಟುಂಬಸ್ಥರ ಮೇಲೆ ಹಲ್ಲೆ ನಡೆದಿದೆ.

ಮುದ್ದೇಬಿಹಾಳ ತಾಲೂಕು ಪಂಚಾಯತ್ ಉಪಾಧ್ಯಕ್ಷ ಮಂಜುನಾಥಗೌಡ ಪಾಟೀಲ್ ಮತ್ತು ಸಹೋದರ ರವಿಗೌಡ ಪಾಟೀಲ್‌ ಗುಂಪು ಕಟ್ಟಿಕೊಂಡು ಹೋಗಿ ಸುನಂದಾರ ಮನೆ ಮುಂದೆ ಗಲಾಟೆ ಮಾಡಿದೆಯಂತೆ. ಅಷ್ಟೇ ಅಲ್ಲ, ಅವಾಚ್ಯ ಶಬ್ದಗಳಿಂದ ಸುನಂದಾರನ್ನ ನಿಂದಿಸಿ ಆವಾಜ್ ಹಾಕಿದ್ದಾರೆಂದು ಆರೋಪಿಸಲಾಗಿದೆ.

ಬಸರಕೋಡ ಗ್ರಾಮದಲ್ಲಿ ಗಲಾಟೆ..

ಎಂಟತ್ತು ಜನರೊಂದಿಗೆ ತೆರಳಿ, ಏಕಾಏಕಿ ಹಲ್ಲೆ ಮಾಡಿದ್ದು, ಮನೆಯಲ್ಲಿದ್ದ ಮಕ್ಕಳ‌ ಮೇಲೂ ದಬ್ಬಾಳಿಕೆ ಮಾಡಿದ್ದಾರೆ. ಕ್ಷುಲ್ಲಕ ಕಾರಣಕ್ಕೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಆದರೆ, ಈ ಕುರಿತು ಯಾವುದೇ ದೂರನ್ನ ಪೊಲೀಸ್‌ ಠಾಣೆಯಲ್ಲಿ ದಾಖಲಿಸಲಾಗಿಲ್ಲ.

Intro:ವಿಜಯಪುರ Body:ವಿಜಯಪುರ:
ತಾಲೂಕು ಪಂಚಾಯತಿ ಉಪಾಧ್ಯಕ್ಷ ಹಾಗೂ ಅವರ ಬೆಂಬಲಿಗರ ಪುಂಡಾಟಿಕೆ ನಡೆಸಿರುವ ಘಟನೆ ನಡೆದಿದೆ.
ಗುಂಪು ಕಟ್ಟಿಕೊಂಡು ಬಂದು ಗ್ರಾಮ‌ ಪಂಚಾಯತಿ ಅಧ್ಯಕ್ಷೆ ಮನೆಮುಂದೆ ಗಲಾಟೆ ಮಾಡಿದ್ದಾರೆ.
ಗ್ರಾಮ‌ ಪಂಚಾಯತಿ ಅಧ್ಯಕ್ಷೆ ಹಾಗೂ ಅವರ ಕುಟುಂಬದವರ ಮೇಲೆ ಹಲ್ಲೆ ನಡೆಸಲಾಗಿದೆ.
ಮುದ್ದೇಬಿಹಾಳ ತಾಲೂಕು ಪಂಚಾಯತಿ ಉಪಾಧ್ಯಕ್ಷ ಮಂಜುನಾಥಗೌಡ ಪಾಟೀಲ್ ಮತ್ತು ಸಹೋದರ ರವಿಗೌಡ ಪಾಟೀಲ್ ರಿಂದ ಹಲ್ಲೆ ನಡೆಸಲಾಗಿದೆ.
ಬಸರಕೋಡ ಗ್ರಾಮ ಪಂಚಾಯತಿ ಅಧ್ಯಕ್ಷೆ ಸುನಂದಾ ಮಾದರ ಹಾಗೂ ಅವರ ಕುಟುಂಬಸ್ಥರ ಮೇಲೆ ಹಲ್ಲೆಯಾಗಿದೆ.
ಅಧ್ಯಕ್ಷೆ ಮನೆ ಮುಂದೆ ಬಂದು ಅವಾಚ್ಯ ಶಬ್ದಗಳಿಂದ ನಿಂದಿಸಿ ಆವಾಜ್ ಹಾಕಿದ ಉಪಾಧ್ಯಕ್ಷನ ಸಹೋದರ.
ಎಂಟತ್ತು ಜನರ ಗುಂಪು ಕಟ್ಟಿಕೊಂಡು ಬಂದು ಏಕಾಏಕಿ ಹಲ್ಲೆ ಮಾಡಲಾಗಿದೆ.
ಮನೆಯಲ್ಲಿದ್ದ ಮಕ್ಕಳ‌ ಮೇಲೂ ಹಲ್ಲೆ‌ ನಡೆಸಿದ ದುರುಳರು.
ಕ್ಷುಲ್ಲಕ ಕಾರಣಕ್ಕೆ ವೈಷಮ್ಯ ಬೆಳೆಸಿಕೊಂಡು ಹಲ್ಲೆ ನಡೆಸಿದ್ದಾರೆ ಎನ್ನಲಾಗುತ್ತಿದೆ.
ಸುಖಾಸುಮ್ಮನೆ ಮನೆಗೆ ನುಗ್ಗಿ ಮನೆಯಲ್ಲಿದ್ದವರನ್ನೆಲ್ಲ ಕಟ್ಟಿಗೆಯಿಂದ ಥಳಿಸಿದ ಬೆಂಬಲಿಗರು.
ಈ ಕುರಿತು ದೂರು ದಾಖಲಿಸದೆ ಸುಮ್ಮನಾಗಿರುವ ಕುಟುಂಬ.Conclusion:ವಿಜಯಪುರ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.