ETV Bharat / state

ಸಿಂದಗಿ ಅತ್ಯಾಚಾರ ಪ್ರಕರಣಕ್ಕೆ​ ಟ್ವಿಸ್ಟ್: ತನಿಖಾಧಿಕಾರಿ ನ್ಯಾಮಗೌಡ ವರ್ಗಾವಣೆ

ವಿಜಯಪುರ ಜಿಲ್ಲೆಯಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣ ದಿನಕ್ಕೊಂದು ಟ್ವಿಸ್ಟ್​ ಪಡೆಯುತ್ತಿದ್ದು, ಇದೀಗ ದಕ್ಷ ಅಧಿಕಾರಿ ನ್ಯಾಮಗೌಡರನ್ನು ಏಕಾಏಕಿ ವರ್ಗಾವಣೆ ಮಾಡಿರುವುದು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ.‌

author img

By

Published : Sep 5, 2021, 12:49 PM IST

ವರ್ಗಾವಣೆ
Vidhana Soudha

ವಿಜಯಪುರ: ಜಿಲ್ಲೆಯ ಸಿಂದಗಿ ಬಳಿ ನಡೆದ 13 ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣ ಇದೀಗ ಬಿಗ್​ ಟ್ವಿಸ್ಟ್​ ಪಡೆದುಕೊಂಡಿದೆ.

ಕಳೆದ ಎರಡು ದಿನ‌ಗಳ ಹಿಂದೆ ಅತ್ಯಾಚಾರ ಆರೋಪಿ ಠಾಣೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದ. ಈ ಹಿನ್ನೆಲೆ ಕರ್ತವ್ಯ ಲೋಪ ಆರೋಪದ ಮೇರೆಗೆ ಐವರು ಪೊಲೀಸ್ ಸಿಬ್ಬಂದಿ ಅಮಾನತು ಮಾಡಲಾಗಿತ್ತು. ‌ನಂತರ ಪ್ರಕರಣದ ತನಿಖೆ ನಡೆಸುತ್ತಿದ್ದ ಅಧಿಕಾರಿಯನ್ನು ಸಹ ರಾಜ್ಯ ಪೊಲೀಸ್​ ಮಹಾನಿರ್ದೇಶಕರು ಆದೇಶ ಹೊರಡಿಸಿ, ವರ್ಗಾವಣೆ ಮಾಡಿದ್ದರು. ಇದೀಗ ಮತ್ತೆ ದಕ್ಷ ಅಧಿಕಾರಿ ನ್ಯಾಮಗೌಡರನ್ನು ಏಕಾಏಕಿ ಎತ್ತಂಗಡಿ ಮಾಡಿರುವುದು ಹಲವು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ.‌

ಇದನ್ನೂ ಓದಿ: ಸಿಂದಗಿಯಲ್ಲಿ ಅತ್ಯಾಚಾರ ಆರೋಪಿ ಆತ್ಮಹತ್ಯೆ ಕೇಸ್​.. PSI ಸೇರಿ ಐವರು ಸಿಬ್ಬಂದಿ ಅಮಾನತು

ನ್ಯಾಮಗೌಡ ಅವರಿಗೆ ಡಿವೈಎಸ್​ಪಿಯಾಗಿ ಪದೋನ್ನತಿ ನೀಡಿ ವರ್ಗಾವಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ವಿಜಯಪುರ: ಜಿಲ್ಲೆಯ ಸಿಂದಗಿ ಬಳಿ ನಡೆದ 13 ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣ ಇದೀಗ ಬಿಗ್​ ಟ್ವಿಸ್ಟ್​ ಪಡೆದುಕೊಂಡಿದೆ.

ಕಳೆದ ಎರಡು ದಿನ‌ಗಳ ಹಿಂದೆ ಅತ್ಯಾಚಾರ ಆರೋಪಿ ಠಾಣೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದ. ಈ ಹಿನ್ನೆಲೆ ಕರ್ತವ್ಯ ಲೋಪ ಆರೋಪದ ಮೇರೆಗೆ ಐವರು ಪೊಲೀಸ್ ಸಿಬ್ಬಂದಿ ಅಮಾನತು ಮಾಡಲಾಗಿತ್ತು. ‌ನಂತರ ಪ್ರಕರಣದ ತನಿಖೆ ನಡೆಸುತ್ತಿದ್ದ ಅಧಿಕಾರಿಯನ್ನು ಸಹ ರಾಜ್ಯ ಪೊಲೀಸ್​ ಮಹಾನಿರ್ದೇಶಕರು ಆದೇಶ ಹೊರಡಿಸಿ, ವರ್ಗಾವಣೆ ಮಾಡಿದ್ದರು. ಇದೀಗ ಮತ್ತೆ ದಕ್ಷ ಅಧಿಕಾರಿ ನ್ಯಾಮಗೌಡರನ್ನು ಏಕಾಏಕಿ ಎತ್ತಂಗಡಿ ಮಾಡಿರುವುದು ಹಲವು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ.‌

ಇದನ್ನೂ ಓದಿ: ಸಿಂದಗಿಯಲ್ಲಿ ಅತ್ಯಾಚಾರ ಆರೋಪಿ ಆತ್ಮಹತ್ಯೆ ಕೇಸ್​.. PSI ಸೇರಿ ಐವರು ಸಿಬ್ಬಂದಿ ಅಮಾನತು

ನ್ಯಾಮಗೌಡ ಅವರಿಗೆ ಡಿವೈಎಸ್​ಪಿಯಾಗಿ ಪದೋನ್ನತಿ ನೀಡಿ ವರ್ಗಾವಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.