ವಿಜಯಪುರ: ದಿನೇ ದಿನೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆ ಮಹಾನಗರ ಪಾಲಿಕೆ ಸಿಬ್ಬಂದಿ ಜಿಲ್ಲಾಧಿಕಾರಿ ಕಚೇರಿಗೆ ಸೋಂಕು ನಿವಾರಕ ದ್ರಾವಣ ಸಿಂಪಡಣೆ ಮಾಡಿದರು.
ಜಿಲ್ಲೆಯ ಹಲವು ಮಂದಿ ಕೆಲಸ ಕಾರ್ಯಗಳ ನಿಮಿತ್ತ ಪ್ರತಿದಿನ ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡುತ್ತಿರುತ್ತಾರೆ. ಹಾಗಾಗಿ ಸೋಂಕು ಹರಡುವ ಭೀತಿ ಹಿನ್ನೆಲೆ ಕಟ್ಟಡದ ಒಳಗೆ ಮತ್ತು ಹೊರಗೆ ಸೋಂಕು ನಿವಾರಕ ದ್ರಾವಣ ಸಿಂಪಡಣೆ ಮಾಡಲಾಯಿತು. ಅಲ್ಲದೆ ಇತರ ಸಾರ್ವಜನಿಕ ಕಚೇರಿಗಳನ್ನೂ ಸ್ಯಾನಿಟೈಸ್ ಮಾಡಲಾಗಿದೆ.