ETV Bharat / state

ವಿಜಯಪುರ ಮಾರುಕಟ್ಟೆಯ ಅಂಗಡಿಗಳ ತೆರವು: ವ್ಯಾಪಾರಸ್ಥರ ಕಣ್ಣೀರು, ಜಿಲ್ಲಾಧಿಕಾರಿಗಳಿಗೆ‌ ಮನವಿ

ಲಾಲ್ ಬಹಾದ್ದೂರ್ ಶಾಸ್ತ್ರಿ ಮಾರುಕಟ್ಟೆಯ ಅಂಗಡಿಗಳನ್ನು ಇಂದು ಬೆಳಗ್ಗಿನಿಂದ ಮಹಾನಗರ ಪಾಲಿಕೆ ಹಾಗೂ ಪೊಲೀಸ್ ಇಲಾಖೆ ನೇತೃತ್ವದಲ್ಲಿ ತೆರವುಗೊಳಿಸಲಾಗುತ್ತಿದೆ.

author img

By

Published : Nov 21, 2019, 1:23 PM IST

ವಿಜಯಪುರ ಮಾರುಕಟ್ಟೆಯ ಅಂಗಡಿ ಮುಕ್ಕಟ್ಟು ತೆರವು

ವಿಜಯಪುರ: ಅಭಿವೃದ್ಧಿ ಕಾರ್ಯಗಳಿಗೆ ಅಡತಡೆ ಉಂಟಾದ ಕಾರಣ‌ ಲಾಲ್ ಬಹದ್ದೂರ್ ಶಾಸ್ತ್ರಿ ಮಾರುಕಟ್ಟೆಯ ಅಂಗಡಿಗಳನ್ನು ಇಂದು ಬೆಳಗ್ಗೆನಿಂದ ಮಹಾನಗರ ಪಾಲಿಕೆ ಹಾಗೂ ಪೊಲೀಸ್ ಇಲಾಖೆ ನೇತೃತ್ವದಲ್ಲಿ ತೆರವುಗೊಳಿಸಲಾಗುತ್ತಿದೆ. ಈ ವೇಳೆ ಕಾರ್ಯಾಚರಣೆ ಸ್ಥಗಿತಗೊಳಿಸುವಂತೆ ಮಾರುಕಟ್ಟೆ ಬೀದಿಬದಿ ವ್ಯಾಪಾರಸ್ಥರು ಜಿಲ್ಲಾಧಿಕಾರಿಗಳಿಗೆ ಮನವಿ‌ ಸಲ್ಲಿಸಿದರು.

ಮಾರುಕಟ್ಟೆಯಲ್ಲಿ ಸುಮಾರು 400ಕ್ಕೂ ಅಧಿಕ ಕುಟುಂಬಗಳು ತರಕಾರಿ ವ್ಯಾಪಾರ ಮಾಡುತ್ತಾ ಜೀವನ ನಡೆಸುತ್ತಿವೆ. ಪಾಲಿಕೆ ಅಂಗಡಿ ಮುಂಗಟ್ಟುಗಳನ್ನು ತೆರವು ಮಾಡುತ್ತಿರೋದ್ರಿಂದ ನಮ್ಮ ಬದುಕು ಬೀದಿ ಬಂದಿದೆ ಎಂದು ವ್ಯಾಪಾರಸ್ಥ ಮಹಿಳೆಯರು ಕಣ್ಣೀರು ಹಾಕುತ್ತಿದ್ದರು.

ಘಟನಾ ಸ್ಥಳಕ್ಕೆ ಬಂದಿದ್ದ ಜಿಲ್ಲಾಧಿಕಾರಿ ವೈ. ಎಸ್. ಪಾಟೀಲ್ ಮುಂದೆ ಅಳಲು ತೋಡಿಕೊಂಡ ವ್ಯಾಪಾರಿಗಳು ಯಾವುದೇ ಕಾರಣಕ್ಕೂ ನಾವು ಮಾರುಕಟ್ಟೆಯನ್ನು ಖಾಲಿ‌‌ ಮಾಡುವುದಿಲ್ಲ ಎಂದು ಪಟ್ಟು ಹಿಡಿದು ಕುಳಿತರು.

ವಿಜಯಪುರ ಮಾರುಕಟ್ಟೆಯ ಅಂಗಡಿಗಳ ತೆರವು, ವ್ಯಾಪಾರಿಗಳ ಅಳಲು

ಶಾಸ್ತ್ರಿ ಮಾರುಕಟ್ಟೆಯಲ್ಲಿ ಈಗಾಗಲೇ ಅಂಗಡಿಯನ್ನು ಜೆಸಿಬಿ‌ ಮೂಲಕ ತೆರವು ಮಾಡಲಾಗಿದೆ. ಪುನಃ ಅಂಗಡಿಗಳನ್ನು ನಿರ್ಮಿಸಿ ವ್ಯಾಪಾರಕ್ಕೆ ಅನುವು ಮಾಡಿಕೊಡುವಂತೆ ಜಿಲ್ಲಾಧಿಕಾರಿಗೆ ಮನವಿ ನೀಡಿ ಒತ್ತಾಯಿಸಿದ್ರು. ವ್ಯಾಪಾರಸ್ಥರ ಬೇಡಿಕೆಗಳಿಗೆ ಶೀಘ್ರವಾಗಿ ಸ್ಪಂದಿಸುವುದಾಗಿ ಜಿಲ್ಲಾಧಿಕಾರಿ ಭರವಸೆ ನೀಡಿದ್ರು.

ವಿಜಯಪುರ: ಅಭಿವೃದ್ಧಿ ಕಾರ್ಯಗಳಿಗೆ ಅಡತಡೆ ಉಂಟಾದ ಕಾರಣ‌ ಲಾಲ್ ಬಹದ್ದೂರ್ ಶಾಸ್ತ್ರಿ ಮಾರುಕಟ್ಟೆಯ ಅಂಗಡಿಗಳನ್ನು ಇಂದು ಬೆಳಗ್ಗೆನಿಂದ ಮಹಾನಗರ ಪಾಲಿಕೆ ಹಾಗೂ ಪೊಲೀಸ್ ಇಲಾಖೆ ನೇತೃತ್ವದಲ್ಲಿ ತೆರವುಗೊಳಿಸಲಾಗುತ್ತಿದೆ. ಈ ವೇಳೆ ಕಾರ್ಯಾಚರಣೆ ಸ್ಥಗಿತಗೊಳಿಸುವಂತೆ ಮಾರುಕಟ್ಟೆ ಬೀದಿಬದಿ ವ್ಯಾಪಾರಸ್ಥರು ಜಿಲ್ಲಾಧಿಕಾರಿಗಳಿಗೆ ಮನವಿ‌ ಸಲ್ಲಿಸಿದರು.

ಮಾರುಕಟ್ಟೆಯಲ್ಲಿ ಸುಮಾರು 400ಕ್ಕೂ ಅಧಿಕ ಕುಟುಂಬಗಳು ತರಕಾರಿ ವ್ಯಾಪಾರ ಮಾಡುತ್ತಾ ಜೀವನ ನಡೆಸುತ್ತಿವೆ. ಪಾಲಿಕೆ ಅಂಗಡಿ ಮುಂಗಟ್ಟುಗಳನ್ನು ತೆರವು ಮಾಡುತ್ತಿರೋದ್ರಿಂದ ನಮ್ಮ ಬದುಕು ಬೀದಿ ಬಂದಿದೆ ಎಂದು ವ್ಯಾಪಾರಸ್ಥ ಮಹಿಳೆಯರು ಕಣ್ಣೀರು ಹಾಕುತ್ತಿದ್ದರು.

ಘಟನಾ ಸ್ಥಳಕ್ಕೆ ಬಂದಿದ್ದ ಜಿಲ್ಲಾಧಿಕಾರಿ ವೈ. ಎಸ್. ಪಾಟೀಲ್ ಮುಂದೆ ಅಳಲು ತೋಡಿಕೊಂಡ ವ್ಯಾಪಾರಿಗಳು ಯಾವುದೇ ಕಾರಣಕ್ಕೂ ನಾವು ಮಾರುಕಟ್ಟೆಯನ್ನು ಖಾಲಿ‌‌ ಮಾಡುವುದಿಲ್ಲ ಎಂದು ಪಟ್ಟು ಹಿಡಿದು ಕುಳಿತರು.

ವಿಜಯಪುರ ಮಾರುಕಟ್ಟೆಯ ಅಂಗಡಿಗಳ ತೆರವು, ವ್ಯಾಪಾರಿಗಳ ಅಳಲು

ಶಾಸ್ತ್ರಿ ಮಾರುಕಟ್ಟೆಯಲ್ಲಿ ಈಗಾಗಲೇ ಅಂಗಡಿಯನ್ನು ಜೆಸಿಬಿ‌ ಮೂಲಕ ತೆರವು ಮಾಡಲಾಗಿದೆ. ಪುನಃ ಅಂಗಡಿಗಳನ್ನು ನಿರ್ಮಿಸಿ ವ್ಯಾಪಾರಕ್ಕೆ ಅನುವು ಮಾಡಿಕೊಡುವಂತೆ ಜಿಲ್ಲಾಧಿಕಾರಿಗೆ ಮನವಿ ನೀಡಿ ಒತ್ತಾಯಿಸಿದ್ರು. ವ್ಯಾಪಾರಸ್ಥರ ಬೇಡಿಕೆಗಳಿಗೆ ಶೀಘ್ರವಾಗಿ ಸ್ಪಂದಿಸುವುದಾಗಿ ಜಿಲ್ಲಾಧಿಕಾರಿ ಭರವಸೆ ನೀಡಿದ್ರು.

Intro:ವಿಜಯಪುರ: ಅಭಿವೃದ್ಧಿ ಕಾರ್ಯಗಳಿಗೆ ಅಡತಡೆ ಉಂಟಾದ ಕಾರಣ‌ ಲಾಲ್ ಬಹಾದ್ದೂರ್ ಶಾಸ್ತ್ರಿ ಮಾರುಕಟ್ಟೆ ತರಕಾರಿ ಹಣ್ಣು ಹಂಪಲು ಅಂಗಡಿ ಮುಂಗಟುಗಳನ್ನು ಇಂದು ಬೆಳಿಗ್ಗೆಯಿಂದ‌ ಮಹಾನಗರ ಪಾಲಿಕೆ ಹಾಗೂ ಪೋಲಿಸ್ ಇಲಾಖೆ ನೇತೃತ್ವದಲ್ಲಿ ತೆರವು ಕಾರ್ಯಾಚರಣೆ ಮಾಡಲಾಗುತ್ತಿರುವ ಬೆನ್ನಲ್ಲೇ ಮಾರುಕಟ್ಟೆಯ ಬೀದಿ ವ್ಯಾಪಾರಸ್ಥರು ಜಿಲ್ಲಾಧಿಕಾರಿಗಳಿಗೆ ಮನವಿ‌ ಸಲ್ಲಿಸಿದರು.
Body:ಶಾಸ್ತ್ರೀಯ ಮಾರುಕಟ್ಟೆಯಲ್ಲಿ ಸುಮಾರು 400 ಅಧಿಕ ಕುಟುಂಬಗಳು ತರಕಾರಿ ವ್ಯಾಪಾರಗಳನ್ನು ನಂಬಿಕೊಂಡು ಜೀವನ ನಡೆಸುತ್ತಿದ್ದಾರೆ. ಪಾಲಿಕೆ ಅಂಗಡಿ ಮುಂಗಟ್ಟುಗಳನ್ನು ತೆರವು ಮಾಡುತ್ತಿರೋದು ನಮ್ಮ ಬದಕು ಬೀದಿ ಬಂದಿದೆ ಎಂದು ವ್ಯಾಪಾರ ಮಹಿಳೆಯರು ಕಣ್ಣೀರು ಹಾಕುತ್ತಾ ಜಿಲ್ಲಾಧಿಕಾರಿ ವೈ ಎಸ್ ಪಾಟೀಲ ಮುಂದೆ ತಮ್ಮ ಅಳಲನ್ನು ತೊಡಿಕೊಂಡರು.‌ಇನ್ನೂ ಜಿಲ್ಲಾಧಿಕಾರಿಗಳಿಗೆ ವ್ಯಾಪಾರಿಗಳು ಯಾವುದೆ ಕಾರಣಕ್ಕೂ ನಾವು ಮಾರುಕಟ್ಟೆಯನ್ನು ಖಾಲಿ‌‌ಮಾಡುವುದಿಲ್ಲ ಎಂದು ಕೆಲ ಕಾಲ ಪಟ್ಟು ಹಿಡಿದರು ಅಲ್ಲದೆ ಶಾಸ್ತ್ರೀಯ ಮಾರುಕಟ್ಟೆಯಲ್ಲಿ ಈಗಾಗಲೇ ಅಂಗಡಿಯನ್ನು ಜೆಸಿಬಿ‌ ಮೂಲಕ ತೆರವು ಮಾಡಲಾಗಿದೆ. ಪುನಃ ಅಂಗಡಿಗಳನ್ನು ನಿರ್ಮಿಸಿ ವ್ಯಾಪಾರ ಅನುವು ಮಾಡಿಕೊಡುವಂತೆ ಜಿಲ್ಲಾಧಿಕಾರಿಗೆ ತರಕಾರಿ ಹಾಗೂ ಹಣ್ಣು ವ್ಯಾಪಾರಸ್ಥರು ಮನವಿ ಸಲ್ಲಿಸಿದರು.
Conclusion:ಇನ್ನೂ ಜಿಲ್ಲಾಧಿಕಾರಿಗಳು ಆದೇಶ ಆದೇಶವನ್ನು ನೋಡಿದ ನಂತರದಲ್ಲಿ ತಮ್ಮ ಬೇಡಿಕೆಗಳಿಗೆ ಶೀಘ್ರವಾಗಿ ಸ್ಪಂದಿಸುವುದಾಗಿ ಬೀದಿ ವ್ಯಾಪಾರಸ್ಥರನ್ನು ಮನವೂಲಿಸುವ ಪ್ರಯತ್ನ ಜಿಲ್ಲಾಧಿಕಾರಿ ವೈ ಎಸ್ ಪಾಟೀಲ ಮಾಡಿದರು..

ಶಿವಾನಂದ‌ ಮದಿಹಳ್ಳಿ
ವಿಜಯಪುರ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.