ETV Bharat / state

ವಿಜಯಪುರ: ಕಳಪೆ ಕೀಟನಾಶ‌ಕ ಮಾರಿದರೆ ಲೈಸನ್ಸ್ ರದ್ದು ಮಾಡಲು ಜಿಪಂ ಅಧ್ಯಕ್ಷೆ ಸೂಚನೆ

author img

By

Published : Oct 6, 2020, 11:18 AM IST

ಕಳಪೆ ಮಟ್ಟದ ಕೃಷಿ ಬೆಳೆ ಔಷಧಿ (ಕೀಟನಾಶಕ) ಮಾರಾಟದ ಬಗ್ಗೆ ಸೂಕ್ತ ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಜಿಲ್ಲಾ ಪಂಚಾಯತ್​​ ಅಧ್ಯಕ್ಷೆ ಸುಜಾತಾ ಕಳ್ಳಿಮನಿ, ಕೃಷಿ ಜಂಟಿ ನಿರ್ದೇಶಕರಿಗೆ ಸೂಚನೆ ನೀಡಿದರು.

vijayapura: ZP meeting held at yesterday
ವಿಜಯಪುರ: ಕಳಪೆ ಮಟ್ಟದ ಕೀಟನಾಶ‌ಕ ಮಾರಿದರೆ ಲೈಸೆನ್ಸ್ ರದ್ದು, ಜಿಪಂ ಅಧ್ಯಕ್ಷೆ ಸೂಚನೆ

ವಿಜಯಪುರ: ಜಿಲ್ಲೆಯಾದ್ಯಂತ ಕಳಪೆ ಮಟ್ಟದ ಕೃಷಿ ಬೆಳೆ ಔಷಧಿ (ಕೀಟನಾಶಕ) ಮಾರಾಟದ ಬಗ್ಗೆ ಸೂಕ್ತ ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಜಿಲ್ಲಾ ಪಂಚಾಯತ್​​ ಅಧ್ಯಕ್ಷೆ ಸುಜಾತಾ ಕಳ್ಳಿಮನಿ, ಕೃಷಿ ಜಂಟಿ ನಿರ್ದೇಶಕರಿಗೆ ಸೂಚನೆ ನೀಡಿದರು.

ನಿನ್ನೆ ಜಿಲ್ಲಾ ಪಂಚಾಯತ್​ ಸಭಾಂಗಣದಲ್ಲಿ ನಡೆದ 17ನೇ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸುಜಾತಾ ಕಳ್ಳಿಮನಿ, ಜಿಲ್ಲಾದ್ಯಂತ ಉತ್ತಮ ಮಳೆಯಾಗಿದ್ದು ರೈತರಿಗೆ ಸಕಾಲಕ್ಕೆ ನೆರವಾಗಬೇಕು. ಅದರಂತೆ ರಾಸಾಯನಿಕ ಮಿಶ್ರಿತ ಕೀಟನಾಶಕಗಳನ್ನು ವಿವಿಧ ಮಾರಾಟಗಾರರು ಮಾರಾಟ ಮಾಡುತ್ತಿರುವ ಬಗ್ಗೆ ಜಿಪಂ ಸದಸ್ಯರಿಂದ ದೂರುಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ತಾಲೂಕು ವ್ಯಾಪ್ತಿಯಲ್ಲಿ ಜಾಗೃತ ದಳಗಳು ಮತ್ತು ಸಹಾಯಕ ನಿರ್ದೇಶಕರುಗಳನ್ನು ಚುರುಕುಗೊಳಿಸಿ ಇಂತಹ ಕಳಪೆ ಗುಣಮಟ್ಟದ ಕೀಟನಾಶಕ ವ್ಯಾಪಾರಸ್ಥರನ್ನು ಪತ್ತೆ ಹಚ್ಚಿ ಲೈಸನ್ಸ್ ರದ್ಧತಿಗೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.

17ನೇ ಸಾಮಾನ್ಯ ಸಭೆ

ಜಿಲ್ಲಾ ಪಂಚಾಯತ್​​ ಸದಸ್ಯರ ಅನುದಾನ ಮತ್ತು 14ನೇ ಹಣಕಾಸು ಅನುದಾನ ದುರ್ಬಳಕೆಗೆ ಸಂಬಂಧಪಟ್ಟಂತೆ ಸದಸ್ಯರಿಂದ ದೂರುಗಳು ಬಂದಿವೆ. ಈ ಕುರಿತು ತಾಲೂಕು ಪಂಚಾಯತ್​ ಕಾರ್ಯನಿರ್ವಹಣಾ ಅಧಿಕಾರಿಗಳ ಮೂಲಕ ಸಂಬಂಧಪಟ್ಟ ಅಭಿಯಂತರರಿಗೆ ನೋಟಿಸ್ ಜಾರಿಗೊಳಿಸಲಾಗಿದ್ದು, ಸದಸ್ಯರಿಂದ ಈ ಕುರಿತು ಸಮಗ್ರ ತನಿಖೆ ಕೈಗೊಳ್ಳಲು ತಿಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಕೈಗೊಂಡ ಕಾರ್ಯಗಳಿಗೆ ಸಂಬಂಧಪಟ್ಟಂತೆ ಸಂಬಂಧಿಸಿದ ಪಿಡಿಒ ವಿರುದ್ಧ ಹಾಗೂ ಅಭಿಯಂತರರ ವಿರುದ್ಧ ಕ್ರಮ ಕೈಗೊಳ್ಳಲು ಸಮಿತಿ ರಚಿಸಬೇಕು. ಎನ್​​ಆರ್​ಇಜಿಎ, 14ನೇ ಹಣಕಾಸು ಮತ್ತು ಜಿಲ್ಲಾ ಪಂಚಾಯತ್​ ಸದಸ್ಯರ ಅಭಿವೃದ್ಧಿ ಅನುದಾನ ದುರ್ಬಳಕೆ ಕುರಿತು ಜಿಲ್ಲಾ ಪಂಚಾಯತ್​, ತಾಲೂಕು ಪಂಚಾಯತ್​ ಹಾಗೂ ಗ್ರಾಮ ಪಂಚಾಯತ್​ ಸದಸ್ಯರನ್ನು ಒಳಗೊಂಡ ಜಂಟಿ ಸಮಿತಿ ರಚಿಸಲಾಗುವುದು ಎಂದು ಸಭೆಗೆ ತಿಳಿಸಿದರು.

ಜಿಲ್ಲೆಯಲ್ಲಿ ಮಳೆಯಿಂದ 13 ಸಾವಿರ ಹೆಕ್ಟೇರ್ ಜಮೀನಿನಲ್ಲಿ ಬೆಳೆ ಹಾನಿಯಾಗಿದ್ದು, ಈ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಕುರಿತು ಪುನಃ ಜಂಟಿ ಸಮೀಕ್ಷೆ ವರದಿ ಸಲ್ಲಿಸಲು ತಿಳಿಸಿದ್ದು, ಅದರನ್ವಯ ಸೂಕ್ತ ಸಮೀಕ್ಷೆ ಕೈಗೊಳ್ಳಲಾಗುತ್ತಿದೆ ಎಂದು ಜಂಟಿ ಕೃಷಿ ನಿರ್ದೇಶಕ ರಾಜಶೇಖರ ಸಭೆಗೆ ತಿಳಿಸಿದರು.

ಸಭೆಯಲ್ಲಿ ಪಂಚಾಯತ್​​ ರಾಜ್ ಎಂಜನಿಯರಿಂಗ್ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರ ಕರ್ತವ್ಯ ಲೋಪದ ಬಗ್ಗೆ ಸದಸ್ಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಈ ಸ್ಥಾನಕ್ಕೆ ಬೇರೊಬ್ಬರನ್ನು ನಿಯೋಜಿಸಲು ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್​ ವ್ಯಾಪ್ತಿಯ ವಿವಿಧ ಇಲಾಖೆಗಳ ಕ್ರಿಯಾ ಯೋಜನೆಗೆ ಮಂಜೂರಾತಿ ನೀಡಿದರು. ಬಳಿಕ, ಅಲ್ಪ ಕಾಲದಲ್ಲಿಯೇ ಅಭಿವೃದ್ಧಿ ಆಗಬೇಕಾಗಿದ್ದು, ಜಿಲ್ಲಾ ಪಂಚಾಯತ್​​ನ ಎಲ್ಲಾ ಸದಸ್ಯರ ಸಹಕಾರವನ್ನು ಜಿಪಂ ಅಧ್ಯಕ್ಷರು ಕೋರಿದರು.

ಸ್ಥಾಯಿ ಸಮಿತಿಗಳ ಕ್ರಿಯಾ ಯೋಜನೆಗಳ ಅನುಮೋದನೆ: ಸಭೆಯಲ್ಲಿ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ, ಕೃಷಿ ಮತ್ತು ಕೈಗಾರಿಕಾ ಸಮಿತಿ, ಸಾಮಾಜಿಕ ನ್ಯಾಯ ಸಮಿತಿ, ಸಾಮಾನ್ಯ ಸ್ಥಾಯಿ ಸಮಿತಿ, ಹಣಕಾಸು, ಲೆಕ್ಕ ಪರಿಶೋಧನೆ ಮತ್ತು ಯೋಜನಾ ಸಮಿತಿಗಳ ಸಭೆಯನ್ವಯ 2020-21ನೇ ಸಾಲಿನ ವಿವಿಧ ಇಲಾಖೆಗಳ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಯಿತು. ಜಿಲ್ಲೆಯ ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿ ಒಟ್ಟು 457.09 ಕೋಟಿ ರೂ.ಗಳ ವಾರ್ಷಿಕ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಯಿತು.

ವಿಜಯಪುರ: ಜಿಲ್ಲೆಯಾದ್ಯಂತ ಕಳಪೆ ಮಟ್ಟದ ಕೃಷಿ ಬೆಳೆ ಔಷಧಿ (ಕೀಟನಾಶಕ) ಮಾರಾಟದ ಬಗ್ಗೆ ಸೂಕ್ತ ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಜಿಲ್ಲಾ ಪಂಚಾಯತ್​​ ಅಧ್ಯಕ್ಷೆ ಸುಜಾತಾ ಕಳ್ಳಿಮನಿ, ಕೃಷಿ ಜಂಟಿ ನಿರ್ದೇಶಕರಿಗೆ ಸೂಚನೆ ನೀಡಿದರು.

ನಿನ್ನೆ ಜಿಲ್ಲಾ ಪಂಚಾಯತ್​ ಸಭಾಂಗಣದಲ್ಲಿ ನಡೆದ 17ನೇ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸುಜಾತಾ ಕಳ್ಳಿಮನಿ, ಜಿಲ್ಲಾದ್ಯಂತ ಉತ್ತಮ ಮಳೆಯಾಗಿದ್ದು ರೈತರಿಗೆ ಸಕಾಲಕ್ಕೆ ನೆರವಾಗಬೇಕು. ಅದರಂತೆ ರಾಸಾಯನಿಕ ಮಿಶ್ರಿತ ಕೀಟನಾಶಕಗಳನ್ನು ವಿವಿಧ ಮಾರಾಟಗಾರರು ಮಾರಾಟ ಮಾಡುತ್ತಿರುವ ಬಗ್ಗೆ ಜಿಪಂ ಸದಸ್ಯರಿಂದ ದೂರುಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ತಾಲೂಕು ವ್ಯಾಪ್ತಿಯಲ್ಲಿ ಜಾಗೃತ ದಳಗಳು ಮತ್ತು ಸಹಾಯಕ ನಿರ್ದೇಶಕರುಗಳನ್ನು ಚುರುಕುಗೊಳಿಸಿ ಇಂತಹ ಕಳಪೆ ಗುಣಮಟ್ಟದ ಕೀಟನಾಶಕ ವ್ಯಾಪಾರಸ್ಥರನ್ನು ಪತ್ತೆ ಹಚ್ಚಿ ಲೈಸನ್ಸ್ ರದ್ಧತಿಗೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.

17ನೇ ಸಾಮಾನ್ಯ ಸಭೆ

ಜಿಲ್ಲಾ ಪಂಚಾಯತ್​​ ಸದಸ್ಯರ ಅನುದಾನ ಮತ್ತು 14ನೇ ಹಣಕಾಸು ಅನುದಾನ ದುರ್ಬಳಕೆಗೆ ಸಂಬಂಧಪಟ್ಟಂತೆ ಸದಸ್ಯರಿಂದ ದೂರುಗಳು ಬಂದಿವೆ. ಈ ಕುರಿತು ತಾಲೂಕು ಪಂಚಾಯತ್​ ಕಾರ್ಯನಿರ್ವಹಣಾ ಅಧಿಕಾರಿಗಳ ಮೂಲಕ ಸಂಬಂಧಪಟ್ಟ ಅಭಿಯಂತರರಿಗೆ ನೋಟಿಸ್ ಜಾರಿಗೊಳಿಸಲಾಗಿದ್ದು, ಸದಸ್ಯರಿಂದ ಈ ಕುರಿತು ಸಮಗ್ರ ತನಿಖೆ ಕೈಗೊಳ್ಳಲು ತಿಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಕೈಗೊಂಡ ಕಾರ್ಯಗಳಿಗೆ ಸಂಬಂಧಪಟ್ಟಂತೆ ಸಂಬಂಧಿಸಿದ ಪಿಡಿಒ ವಿರುದ್ಧ ಹಾಗೂ ಅಭಿಯಂತರರ ವಿರುದ್ಧ ಕ್ರಮ ಕೈಗೊಳ್ಳಲು ಸಮಿತಿ ರಚಿಸಬೇಕು. ಎನ್​​ಆರ್​ಇಜಿಎ, 14ನೇ ಹಣಕಾಸು ಮತ್ತು ಜಿಲ್ಲಾ ಪಂಚಾಯತ್​ ಸದಸ್ಯರ ಅಭಿವೃದ್ಧಿ ಅನುದಾನ ದುರ್ಬಳಕೆ ಕುರಿತು ಜಿಲ್ಲಾ ಪಂಚಾಯತ್​, ತಾಲೂಕು ಪಂಚಾಯತ್​ ಹಾಗೂ ಗ್ರಾಮ ಪಂಚಾಯತ್​ ಸದಸ್ಯರನ್ನು ಒಳಗೊಂಡ ಜಂಟಿ ಸಮಿತಿ ರಚಿಸಲಾಗುವುದು ಎಂದು ಸಭೆಗೆ ತಿಳಿಸಿದರು.

ಜಿಲ್ಲೆಯಲ್ಲಿ ಮಳೆಯಿಂದ 13 ಸಾವಿರ ಹೆಕ್ಟೇರ್ ಜಮೀನಿನಲ್ಲಿ ಬೆಳೆ ಹಾನಿಯಾಗಿದ್ದು, ಈ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಕುರಿತು ಪುನಃ ಜಂಟಿ ಸಮೀಕ್ಷೆ ವರದಿ ಸಲ್ಲಿಸಲು ತಿಳಿಸಿದ್ದು, ಅದರನ್ವಯ ಸೂಕ್ತ ಸಮೀಕ್ಷೆ ಕೈಗೊಳ್ಳಲಾಗುತ್ತಿದೆ ಎಂದು ಜಂಟಿ ಕೃಷಿ ನಿರ್ದೇಶಕ ರಾಜಶೇಖರ ಸಭೆಗೆ ತಿಳಿಸಿದರು.

ಸಭೆಯಲ್ಲಿ ಪಂಚಾಯತ್​​ ರಾಜ್ ಎಂಜನಿಯರಿಂಗ್ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರ ಕರ್ತವ್ಯ ಲೋಪದ ಬಗ್ಗೆ ಸದಸ್ಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಈ ಸ್ಥಾನಕ್ಕೆ ಬೇರೊಬ್ಬರನ್ನು ನಿಯೋಜಿಸಲು ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್​ ವ್ಯಾಪ್ತಿಯ ವಿವಿಧ ಇಲಾಖೆಗಳ ಕ್ರಿಯಾ ಯೋಜನೆಗೆ ಮಂಜೂರಾತಿ ನೀಡಿದರು. ಬಳಿಕ, ಅಲ್ಪ ಕಾಲದಲ್ಲಿಯೇ ಅಭಿವೃದ್ಧಿ ಆಗಬೇಕಾಗಿದ್ದು, ಜಿಲ್ಲಾ ಪಂಚಾಯತ್​​ನ ಎಲ್ಲಾ ಸದಸ್ಯರ ಸಹಕಾರವನ್ನು ಜಿಪಂ ಅಧ್ಯಕ್ಷರು ಕೋರಿದರು.

ಸ್ಥಾಯಿ ಸಮಿತಿಗಳ ಕ್ರಿಯಾ ಯೋಜನೆಗಳ ಅನುಮೋದನೆ: ಸಭೆಯಲ್ಲಿ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ, ಕೃಷಿ ಮತ್ತು ಕೈಗಾರಿಕಾ ಸಮಿತಿ, ಸಾಮಾಜಿಕ ನ್ಯಾಯ ಸಮಿತಿ, ಸಾಮಾನ್ಯ ಸ್ಥಾಯಿ ಸಮಿತಿ, ಹಣಕಾಸು, ಲೆಕ್ಕ ಪರಿಶೋಧನೆ ಮತ್ತು ಯೋಜನಾ ಸಮಿತಿಗಳ ಸಭೆಯನ್ವಯ 2020-21ನೇ ಸಾಲಿನ ವಿವಿಧ ಇಲಾಖೆಗಳ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಯಿತು. ಜಿಲ್ಲೆಯ ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿ ಒಟ್ಟು 457.09 ಕೋಟಿ ರೂ.ಗಳ ವಾರ್ಷಿಕ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಯಿತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.