ETV Bharat / state

ಫೆ.8 ರಿಂದ ವಿಜಯಪುರದಲ್ಲಿ ಅಂತರ್ ವಿವಿ ಮಟ್ಟದ ಮಹಿಳಾ ಸೈಕ್ಲಿಂಗ್ ಸ್ಪರ್ಧೆ

ದಕ್ಷಿಣ ಭಾರತ ಅಂತರ್ ವಿಶ್ವವಿದ್ಯಾಲಯ ಮಟ್ಟದ ಮಹಿಳಾ ಸೈಕ್ಲಿಂಗ್ ಸ್ಪರ್ಧೆ ಫೆ. 8 ರಿಂದ ವಿಜಯಪುರ ನಗರದ ರಾಷ್ಟ್ರೀಯ ಹೆದ್ದಾರಿ 50 ರ ಟೋಲ್ ಪ್ಲಾಜಾದಲ್ಲಿ ಚಾಲನೆಗೊಳ್ಳಲಿದೆ. ಸೈಕ್ಲಿಂಗ್ ಚಾಂಪಿಯನ್ ಶಿಪ್​ನಲ್ಲಿ ವಿವಿಧ ರಾಜ್ಯಗಳ 28 ವಿಶ್ವವಿದ್ಯಾಲಯಗಳ 127 ಸೈಕ್ಲಿಷ್ಟ್​ಗಳು ಭಾಗವಹಿಸಲಿದ್ದಾರೆ.

author img

By

Published : Feb 5, 2020, 5:03 PM IST

women's cycling competition in Vijayapur
ಪ್ರೊ. ಎಂ.ಎನ್​ ಕೋರಿ , ಪ್ರಾಚಾರ್ಯ

ವಿಜಯಪುರ: ಇದೇ ಮೊದಲ ಬಾರಿಗೆ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಮಟ್ಟದ ಮಹಿಳಾ ಸೈಕ್ಲಿಂಗ್ ಸ್ಪರ್ಧೆ ಫೆ. 8 ರಿಂದ 11ರವರೆಗೆ ನಗರದಲ್ಲಿ ನಡೆಯಲಿದೆ ಎಂದು ಎ.ಎಸ್.ಪಾಟೀಲ ಕಾಲೇಜಿನ ಪ್ರಾಚಾರ್ಯ ಪ್ರೊ. ಎಂ.ಎನ್​. ಕೋರಿ ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಅವರು, ಅಖಿಲ ಭಾರತ ವಿಶ್ವವಿದ್ಯಾಲಯಗಳ ಒಕ್ಕೂಟ, ಸೈಕ್ಲಿಂಗ್ ಸ್ಪರ್ಧೆ ಸಂಘಟಿಸುವ ಜವಾಬ್ದಾರಿಯನ್ನು ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯಕ್ಕೆ ನೀಡಿದೆ. ರಾಣಿ ಚೆನ್ನಮ್ಮ ವಿವಿ ಜೊತೆ ನಮ್ಮ ಕಾಲೇಜು ಕೈ ಜೋಡಿಸಲಿದೆ ಎಂದು ತಿಳಿಸಿದರು.

ಪ್ರೊ. ಎಂ.ಎನ್​ ಕೋರಿ , ಪ್ರಾಚಾರ್ಯ

ಫೆ. 8 ರಂದು ಬೆಳಗ್ಗೆ 8 ಗಂಟೆಗೆ ರಾಷ್ಟ್ರೀಯ ಹೆದ್ದಾರಿ 50 ರ ಟೋಲ್ ಪ್ಲಾಜಾದಲ್ಲಿ ಸ್ಪರ್ಧೆ ಚಾಲನೆಗೊಳ್ಳಲಿದೆ. ದಕ್ಷಿಣ ಭಾರತದಲ್ಲೇ ಪ್ರಪ್ರಥಮ ಬಾರಿಗೆ ಸೈಕ್ಲಿಂಗ್ ಸ್ಪರ್ಧೆ ಸಂಘಟಿಸುತ್ತಿರುವುದು ನಮಗೆಲ್ಲ ಹೆಮ್ಮೆಯ ವಿಷಯ. ಸೈಕ್ಲಿಂಗ್ ಚಾಂಪಿಯನ್ ಶಿಪ್​ನಲ್ಲಿ ವಿವಿಧ ರಾಜ್ಯಗಳ 28 ವಿಶ್ವವಿದ್ಯಾಲಯಗಳ 127 ಸೈಕ್ಲಿಂಗ್ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸಹಕರಿಸಲು ವಿವಿಧ ಸಂಘ, ಸಂಸ್ಥೆಗಳ 400 ಸ್ವಯಂ ಸೇವಕರು ಆಗಮಿಸಲಿದ್ದಾರೆ. ಉದ್ಘಾಟನಾ ಸಮಾರಂಭಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ, ಮಾಜಿ ಸಚಿವ ಡಾ. ಎಂ.ಬಿ.ಪಾಟೀಲ್​, ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಕುಲಪತಿ ಪ್ರೊ.ಎಂ. ರಾಮಚಂದ್ರೆಗೌಡ ಸೇರದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ. ಫೆ.11ರಂದು ಬಿಎಲ್​ಡಿ ವೈದ್ಯಕೀಯ ಮಹಾವಿದ್ಯಾಲಯದ ಸಭಾಂಗಣದಲ್ಲಿ ಸಮಾರೋಪ ಕಾರ್ಯಕ್ರಮ ಜರುಗಲಿದೆ. ಕಾರ್ಯಕ್ರಮದಲ್ಲಿ ಬಿಎಲ್​ಡಿ ಸಂಸ್ಥೆಯ ಉಪಾಧ್ಯಕ್ಷ ವಿ.ವಿ.ನಿಂಬಾಳ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಬಿಎಲ್​ಡಿ ಸಂಸ್ಥೆಯ ಪಿ.ಆರ್.ಓ. ಡಾ.ಮಹಾಂತೇಶ ಬಿರಾದಾರ, ಸೈಕ್ಲಿಸ್ಟ್ ಅಲಕಾ ಪಡತರೆ, ಪ್ರೊ.ದಿಲೀಪ ಗೌಡ ಪಾಟೀಲ ಮತ್ತಿತರರು ಉಪಸ್ಥಿತರಿದ್ದರು.

ವಿಜಯಪುರ: ಇದೇ ಮೊದಲ ಬಾರಿಗೆ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಮಟ್ಟದ ಮಹಿಳಾ ಸೈಕ್ಲಿಂಗ್ ಸ್ಪರ್ಧೆ ಫೆ. 8 ರಿಂದ 11ರವರೆಗೆ ನಗರದಲ್ಲಿ ನಡೆಯಲಿದೆ ಎಂದು ಎ.ಎಸ್.ಪಾಟೀಲ ಕಾಲೇಜಿನ ಪ್ರಾಚಾರ್ಯ ಪ್ರೊ. ಎಂ.ಎನ್​. ಕೋರಿ ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಅವರು, ಅಖಿಲ ಭಾರತ ವಿಶ್ವವಿದ್ಯಾಲಯಗಳ ಒಕ್ಕೂಟ, ಸೈಕ್ಲಿಂಗ್ ಸ್ಪರ್ಧೆ ಸಂಘಟಿಸುವ ಜವಾಬ್ದಾರಿಯನ್ನು ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯಕ್ಕೆ ನೀಡಿದೆ. ರಾಣಿ ಚೆನ್ನಮ್ಮ ವಿವಿ ಜೊತೆ ನಮ್ಮ ಕಾಲೇಜು ಕೈ ಜೋಡಿಸಲಿದೆ ಎಂದು ತಿಳಿಸಿದರು.

ಪ್ರೊ. ಎಂ.ಎನ್​ ಕೋರಿ , ಪ್ರಾಚಾರ್ಯ

ಫೆ. 8 ರಂದು ಬೆಳಗ್ಗೆ 8 ಗಂಟೆಗೆ ರಾಷ್ಟ್ರೀಯ ಹೆದ್ದಾರಿ 50 ರ ಟೋಲ್ ಪ್ಲಾಜಾದಲ್ಲಿ ಸ್ಪರ್ಧೆ ಚಾಲನೆಗೊಳ್ಳಲಿದೆ. ದಕ್ಷಿಣ ಭಾರತದಲ್ಲೇ ಪ್ರಪ್ರಥಮ ಬಾರಿಗೆ ಸೈಕ್ಲಿಂಗ್ ಸ್ಪರ್ಧೆ ಸಂಘಟಿಸುತ್ತಿರುವುದು ನಮಗೆಲ್ಲ ಹೆಮ್ಮೆಯ ವಿಷಯ. ಸೈಕ್ಲಿಂಗ್ ಚಾಂಪಿಯನ್ ಶಿಪ್​ನಲ್ಲಿ ವಿವಿಧ ರಾಜ್ಯಗಳ 28 ವಿಶ್ವವಿದ್ಯಾಲಯಗಳ 127 ಸೈಕ್ಲಿಂಗ್ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸಹಕರಿಸಲು ವಿವಿಧ ಸಂಘ, ಸಂಸ್ಥೆಗಳ 400 ಸ್ವಯಂ ಸೇವಕರು ಆಗಮಿಸಲಿದ್ದಾರೆ. ಉದ್ಘಾಟನಾ ಸಮಾರಂಭಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ, ಮಾಜಿ ಸಚಿವ ಡಾ. ಎಂ.ಬಿ.ಪಾಟೀಲ್​, ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಕುಲಪತಿ ಪ್ರೊ.ಎಂ. ರಾಮಚಂದ್ರೆಗೌಡ ಸೇರದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ. ಫೆ.11ರಂದು ಬಿಎಲ್​ಡಿ ವೈದ್ಯಕೀಯ ಮಹಾವಿದ್ಯಾಲಯದ ಸಭಾಂಗಣದಲ್ಲಿ ಸಮಾರೋಪ ಕಾರ್ಯಕ್ರಮ ಜರುಗಲಿದೆ. ಕಾರ್ಯಕ್ರಮದಲ್ಲಿ ಬಿಎಲ್​ಡಿ ಸಂಸ್ಥೆಯ ಉಪಾಧ್ಯಕ್ಷ ವಿ.ವಿ.ನಿಂಬಾಳ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಬಿಎಲ್​ಡಿ ಸಂಸ್ಥೆಯ ಪಿ.ಆರ್.ಓ. ಡಾ.ಮಹಾಂತೇಶ ಬಿರಾದಾರ, ಸೈಕ್ಲಿಸ್ಟ್ ಅಲಕಾ ಪಡತರೆ, ಪ್ರೊ.ದಿಲೀಪ ಗೌಡ ಪಾಟೀಲ ಮತ್ತಿತರರು ಉಪಸ್ಥಿತರಿದ್ದರು.

Intro:ವಿಜಯಪುರ Body:
ವಿಜಯಪುರ: ಸೈಕ್ಲಿಂಗ್ ನ ತವರೂರಿನಲ್ಲಿ ಇದೇ ಮೊದಲ ಬಾರಿಗೆ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಮಹಿಳಾ ಸೈಕ್ಲಿಂಗ್ ಸ್ಪರ್ಧೆಗಳನ್ನು ಇದೆ ಫೆ. 8 ರಿಂದ ಆಯೋಜಿಸಲಾಗಿದೆ ಎಂದು ಬಿ.ಎಲ್.ಡಿ.ಈ.ಸಂಸ್ಥೆಯ ಎ.ಎಸ್.ಪಾಟೀಲ ಕಾಲೇಜ್ ಆಪ್ ಕಾಮರ್ಸ್ ನ ಪ್ರಾಚಾರ್ಯ ಕೋರಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಖಿಲ ಭಾರತೀಯ ವಿಶ್ವವಿದ್ಯಾಲಯ ಗಳ ಸಂಸ್ಥೆ ಈ ಸೈಕ್ಲಿಂಗ್ ಸ್ಪರ್ಧೆಯ ಸಂಘಟನೆಯ ಜವಾಬ್ದಾರಿ ಯನ್ನು ಬೆಳಗಾವಿ ಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಇವ್ರಿಗೆ ನೀಡಿತ್ತು. ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ತಮ್ಮ ಕಾಲೇಜು ಸಹಯೋಗ ನೀಡುವದರ ಮೂಲಕ ಸಂಘಟಿಸಲಾಗುತ್ತಿದೆ ಎಂದರು.
ಫೆ. 8 ರಂದು ಬೆಳಿಗ್ಗೆ ೮ ರಿಂದ ೧೦ ಘಂಟೆ ಯವರೆಗೆ ರಾಷ್ಟ್ರೀಯ ಹೆದ್ದಾರಿ ೫೦ ರಲ್ಲಿನ ಟೋಲ್ ಪ್ಲಾಜಾದಿಂದ ಪ್ರಾರಂಭಗೊಳ್ಳಲಿದ್ದು ಈ ಸ್ಪರ್ಧೆಗಳು ದಕ್ಷಿಣ ಭಾರತದಲ್ಲಿ ಪ್ರಪ್ರಥಮ ಬಾರಿಗೆ ಸಂಘಟಿಸಲಾಗುತ್ತಿರುವದು ಹೆಮ್ಮೆಯ ವಿಷಯವಾಗಿದೆ. ಈ ಸೈಕ್ಲಿಂಗ್ ಚಾಂಪಿಯನ್ ಶಿಪ್ ನಲ್ಲಿ ವಿವಿಧ ರಾಜ್ಯಗಳ ೨೮ ವಿಶ್ವವಿದ್ಯಾಲಯ ಗಳ ೧೨೭ ಸೈಕ್ಲಿಂಗ್ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ಸ್ಪರ್ಧೆಯನ್ನು ಸಂಘಟಿಸಲು ವಿವಿಧ ಸಮಿತಿ ೪೦೦ ಜನ ಭಾಗವಹಿಸಲಿದ್ದಾರೆ. ಇನ್ನೂ ಉದ್ಘಾಟನಾ ಸಮಾರಂಭದಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ, ಮಾಜಿ ಸಚಿವ ಹಾಲಿ ಶಾಸಕ ಡಾ. ಎಂ.ಬಿ.ಪಾಟೀಲ, ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಕುಲಪತಿ ಪ್ರೋ.ಎಂ. ರಾಮಚಂದ್ರೆಗೌಡ ಇವರುಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಇನ್ನೂ ಸಮಾರೋಪ ಸಮಾರಂಭವು ಫೆ.11 ರಂದು ಬೆಳಿಗ್ಗೆ ಬಿ.ಎಲ್.ಡಿ.ಈ. ಸಂಸ್ಥೆಯ ವೈದ್ಯಕೀಯ ಮಹಾವಿದ್ಯಾಲಯ ಸಭಾಂಗಣದಲ್ಲಿ ಜರುಗಲಿದ್ದು ಸಂಸ್ಥೆಯ ಉಪಾಧ್ಯಕ್ಷ ವಿ.ವಿ.ನಿಂಬಾಳ ಅಧ್ಯಕ್ಷತೆ ವಹಿಸುವರು. ಇನ್ನೂ ಹಲವ್ರು ಅತಿಥಿ ಗಣ್ಯರು ಉಪಸ್ಥಿತರಿರುವರು. ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಪಿ.ಆರ್.ಓ. ಡಾ.ಮಹಾಂತೇಶ ಬಿರಾದಾರ, ಸೈಕ್ಲಿಸ್ಟ್ ಅಲಕಾ ಪಡತರೆ, ಪ್ರೋ.ದಿಲಿಪಗೌಡಾ ಪಾಟೀಲ ಮತ್ತಿತರರು ಉಪಸ್ಥಿತರಿದ್ದರು.

ಬೈಟ್: ಪ್ರೋ. ಕೋರಿ, ಪ್ರಾಧ್ಯಾಪಕ .ಎಸ್.ಪಾಟೀಲ, ಕಾಲೇಜ್ ಆಫ್ ಕಾಮರ್ಸ್, ವಿಜಯಪುರ.Conclusion:ವಿಜಯಪುರ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.