ETV Bharat / state

ಮುದ್ದೇಬಿಹಾಳದಲ್ಲಿ ಯುವತಿಯ ಬರ್ಬರ ಕೊಲೆ: ಸೇತುವೆ ಕೆಳಗಡೆ ಮೃತದೇಹ ಪತ್ತೆ!

author img

By

Published : Jun 9, 2021, 1:03 PM IST

Updated : Jun 10, 2021, 6:55 AM IST

ಅಂದಾಜು 20-22 ವಯಸ್ಸಿನ ಯುವತಿಯ ಶವ ಪತ್ತೆಯಾಗಿದೆ. ವೇಲ್‌ನಿಂದ ಕುತ್ತಿಗೆಗೆ ಬಿಗಿದು, ತಲೆಯನ್ನು ಜಜ್ಜಿ ಗುರುತು ಸಿಗದಂತೆ ಕೊಲೆ ಮಾಡಲಾಗಿದೆ. ಬಳಿಕ ಸೇತುವೆಯ ಕೊಳಾಯಿಯಲ್ಲಿಯೇ ಮೃತದೇಹವನ್ನು ಎಸೆದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

Young woman murder, Young woman murder in Vijayapura, Vijayapura crime news, Vijayaprua news, ಯುವತಿಯ ಬರ್ಬರ ಕೊಲೆ, ವಿಜಯಪುರದಲ್ಲಿ ಯುವತಿಯ ಬರ್ಬರ ಕೊಲೆ, ವಿಜಯಪುರ ಅಪರಾಧ ಸುದ್ದಿ, ವಿಜಯಪುರ ಸುದ್ದಿ,
ಯುವತಿ ಕೊಲೆ

ಮುದ್ದೇಬಿಹಾಳ(ವಿಜಯಪುರ): ವಿಜಯಪುರ ಜಿಲ್ಲೆಯಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಮುದ್ದೇಬಿಹಾಳ ತಾಲೂಕಿನ ಇಣಚಗಲ್ ಕ್ರಾಸ್ ಸಮೀಪದ ಹೊಲವೊಂದರಲ್ಲಿ ಕಿರು ಸೇತುವೆ ಕೆಳಗೆ ಅಪರಿಚಿತ ಯುವತಿಯೋರ್ವಳ ಕೊಲೆಯಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಪೊಲೀಸರು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದಾರೆ.

ಅಂದಾಜು 20-22 ವಯಸ್ಸಿನ ಯುವತಿಯ ಶವ ಪತ್ತೆಯಾಗಿದೆ. ವೇಲ್‌ನಿಂದ ಕುತ್ತಿಗೆಗೆ ಬಿಗಿದು ತಲೆಯನ್ನು ಜಜ್ಜಿ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಬಳಿಕ ಸೇತುವೆಯ ಕೊಳಾಯಿಯಲ್ಲಿಯೇ ಮೃತದೇಹವನ್ನು ಎಸೆದು ಪರಾರಿಯಾಗಿದ್ದಾರೆ. ಮೃತದೇಹ ನೋಡಿದ ದಾರಿಹೋಕರು ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದರು.

ಮಹಿಳೆಯ ಬರ್ಬರ ಕೊಲೆ

ವಿಷಯ ತಿಳಿಯುತ್ತಿದ್ದಂತೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್‌ಅರಸಿದ್ಧಿ, ಡಿವೈಎಸ್​ಪಿ ಅರುಣಕುಮಾರ ಕೋಳೂರ, ಸಿಪಿಐ ಆನಂದ ವಾಘಮೋಡೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶ್ವಾನದಳ, ಬೆರಳಚ್ಚು ತಜ್ಞರು ಆಗಮಿಸಿ ತಪಾಸಣೆ ನಡೆಸಿದ್ದಾರೆ.

ಯುವತಿ ಶವ ಮರಣೋತ್ತರ ಪರೀಕ್ಷೆಯನ್ನು ವಿಜಯಪುರ ಜಿಲ್ಲಾಸ್ಪತ್ರೆಯಲ್ಲಿ ನಡೆಸಲು ಪೊಲೀಸರು ನಿರ್ಧರಿಸಿದ್ದು, ಆಕೆಯ ಕೊಲೆಗೆ ಕಾರಣ ಏನು ಎಂಬುದು ತನಿಖೆಯ ನಂತರವಷ್ಟೇ ತಿಳಿದು ಬರಲಿದೆ. ಯುವತಿಯ ಗುರುತು ಪತ್ತೆ ಪೊಲೀಸರಿಗೆ ಸವಾಲಾಗಿದೆ. ಈ ಸಂಬಂಧ ತಾಳಿಕೋಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುದ್ದೇಬಿಹಾಳ(ವಿಜಯಪುರ): ವಿಜಯಪುರ ಜಿಲ್ಲೆಯಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಮುದ್ದೇಬಿಹಾಳ ತಾಲೂಕಿನ ಇಣಚಗಲ್ ಕ್ರಾಸ್ ಸಮೀಪದ ಹೊಲವೊಂದರಲ್ಲಿ ಕಿರು ಸೇತುವೆ ಕೆಳಗೆ ಅಪರಿಚಿತ ಯುವತಿಯೋರ್ವಳ ಕೊಲೆಯಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಪೊಲೀಸರು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದಾರೆ.

ಅಂದಾಜು 20-22 ವಯಸ್ಸಿನ ಯುವತಿಯ ಶವ ಪತ್ತೆಯಾಗಿದೆ. ವೇಲ್‌ನಿಂದ ಕುತ್ತಿಗೆಗೆ ಬಿಗಿದು ತಲೆಯನ್ನು ಜಜ್ಜಿ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಬಳಿಕ ಸೇತುವೆಯ ಕೊಳಾಯಿಯಲ್ಲಿಯೇ ಮೃತದೇಹವನ್ನು ಎಸೆದು ಪರಾರಿಯಾಗಿದ್ದಾರೆ. ಮೃತದೇಹ ನೋಡಿದ ದಾರಿಹೋಕರು ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದರು.

ಮಹಿಳೆಯ ಬರ್ಬರ ಕೊಲೆ

ವಿಷಯ ತಿಳಿಯುತ್ತಿದ್ದಂತೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್‌ಅರಸಿದ್ಧಿ, ಡಿವೈಎಸ್​ಪಿ ಅರುಣಕುಮಾರ ಕೋಳೂರ, ಸಿಪಿಐ ಆನಂದ ವಾಘಮೋಡೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶ್ವಾನದಳ, ಬೆರಳಚ್ಚು ತಜ್ಞರು ಆಗಮಿಸಿ ತಪಾಸಣೆ ನಡೆಸಿದ್ದಾರೆ.

ಯುವತಿ ಶವ ಮರಣೋತ್ತರ ಪರೀಕ್ಷೆಯನ್ನು ವಿಜಯಪುರ ಜಿಲ್ಲಾಸ್ಪತ್ರೆಯಲ್ಲಿ ನಡೆಸಲು ಪೊಲೀಸರು ನಿರ್ಧರಿಸಿದ್ದು, ಆಕೆಯ ಕೊಲೆಗೆ ಕಾರಣ ಏನು ಎಂಬುದು ತನಿಖೆಯ ನಂತರವಷ್ಟೇ ತಿಳಿದು ಬರಲಿದೆ. ಯುವತಿಯ ಗುರುತು ಪತ್ತೆ ಪೊಲೀಸರಿಗೆ ಸವಾಲಾಗಿದೆ. ಈ ಸಂಬಂಧ ತಾಳಿಕೋಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Last Updated : Jun 10, 2021, 6:55 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.