ETV Bharat / state

ಪ್ರಿಯಾಂಕಾ ಗಾಂಧಿ ಬಂಧನ ಹಿನ್ನೆಲೆ.. ಕಾಂಗ್ರೆಸ್ ಕಾರ್ಯಕರ್ತರಿಂದ ಬಳ್ಳಾರಿ,ಯಾದಗಿರಿಯಲ್ಲಿ ಪ್ರತಿಭಟನೆ - Kannada news

ಉತ್ತರಪ್ರದೇಶದ ಸೋನ್‌ಭದ್ರಾದಲ್ಲಿ ಹತ್ಯೆಗೊಳಗಾದವರ ಕುಟುಂಬಸ್ಥರಿಗೆ ಪ್ರಿಯಾಂಕಾ ಗಾಂಧಿ ಸಾಂತ್ವನ ಹೇಳಲು ತೆರಳುವಾಗ ಉತ್ತರಪ್ರದೇಶದ ಬಿಜೆಪಿ ಸರ್ಕಾರ ಮಾರ್ಗಮಧ್ಯೆದಲ್ಲಿ ಬಂಧನ ಮಾಡಿರುವುದು ಪ್ರಜಾಪ್ರಭುತ್ವ ವಿರೋಧಿ ನೀತಿ ಎಂದು ಕಾಂಗ್ರೆಸ್‌ ಕಾರ್ಯಕರ್ತರು ಆಕ್ರೋಶ ಹೊರ ಹಾಕಿದ್ದಾರೆ.

ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ
author img

By

Published : Jul 21, 2019, 10:31 AM IST

ಬಳ್ಳಾರಿ/ಯಾದಗಿರಿ : ಎಐಸಿಸಿ ಯುವನಾಯಕಿ ಪ್ರಿಯಾಂಕ ಗಾಂಧಿಯವರನ್ನ ಉತ್ತರಪ್ರದೇಶ ಸರ್ಕಾರ ಬಂಧಿಸಿರುವ ಕ್ರಮವನ್ನು ಖಂಡಿಸಿ ಜಿಲ್ಲಾ‌ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು ಬೃಹತ್ ಪ್ರತಿಭಟನೆ ನಡೆಸಿದರು.

ಬಳ್ಳಾರಿಯ ಗಡಿಗಿ ಚನ್ನಪ್ಪ ವೃತ್ತದಲ್ಲಿ ಇಂದು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಜಿ ಎಸ್ ಮಹ್ಮದ ರಫೀಕ್ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಜಮಾಯಿಸಿ ಕೆಲಕಾಲ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಘೋಷಣೆ ಕೂಗಿ, ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಜಿಲ್ಲಾಧಿಕಾರಿಯವರ ಮೂಲಕ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಿದರು.

ಉತ್ತರಪ್ರದೇಶದ ಸೋನ್‌ಭದ್ರಾದಲ್ಲಿ ಹತ್ಯೆಗೊಳಗಾದ ಕುಟುಂಬಸ್ಥರಿಗೆ ಪ್ರಿಯಾಂಕಾ ಗಾಂಧಿ ಸಾಂತ್ವನ ಹೇಳಲು ತೆರಳುವಾಗ ಯುಪಿ ಬಿಜೆಪಿ ಸರ್ಕಾರ ಮಾರ್ಗ ಮಧ್ಯೆದಲ್ಲಿ ಬಂಧನ ಮಾಡಿರುವುದು ಪ್ರಜಾಪ್ರಭುತ್ವ ವಿರೋಧಿ ನೀತಿಯಾಗಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ. ಸೋನ್​ಭದ್ರಾದಲ್ಲಿ‌ ನಡೆದ ಘಟನೆಗೆ ಕಾರಣೀಕರ್ತರಾದವರ ವಿರುದ್ಧ ಸೂಕ್ತ ಕಾನೂನು ಕ್ರಮ‌ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಮಾಜಿ ಶಾಸಕ ಹೆಚ್.ಅನಿಲ್ ಲಾಡ್, ಮುಖಂಡರಾದ ಅಸುಂಡಿ ನಾಗರಾಜಗೌಡ, ಕೊಳಗಲ್ಲು ಅಂಜಿನಿ, ಬಿಎಂ ಪಾಟೀಲ ಸೇರಿದಂತೆ ಹತ್ತಾರು ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

ಯಾದಗಿರಿಯಲ್ಲಿಯೂ ಪ್ರತಿಭಟನೆ ನಡೆಸಿದ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಉತ್ತರಪ್ರದೇಶದ ಪೊಲೀಸ್ ಹಾಗೂ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮರೀಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡಸಿ, ಸಿಎಂ ಯೋಗಿ ಆದಿತ್ಯನಾಥ ಸರ್ವಾಧಿಕಾರ ಆಡಳಿತ ನಡೆಸುತ್ತಿದ್ದಾರೆ. ಪ್ರೀಯಾಂಕಾ ಗಾಂಧಿ ಸಂತ್ರಸ್ತ ಕುಟುಂಬದವರಿಗೆ ಸಂತಾಪ ಸೂಚಿಸಲು ಹೊರಟಿದ್ದಾಗ ಬಂಧಿಸಿದ್ದು ಸರಿಯಲ್ಲ ಎಂದು ಕಿಡಿಕಾರಿದರು.

Priyanka Gandhi arrested
ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

ಬಳ್ಳಾರಿ/ಯಾದಗಿರಿ : ಎಐಸಿಸಿ ಯುವನಾಯಕಿ ಪ್ರಿಯಾಂಕ ಗಾಂಧಿಯವರನ್ನ ಉತ್ತರಪ್ರದೇಶ ಸರ್ಕಾರ ಬಂಧಿಸಿರುವ ಕ್ರಮವನ್ನು ಖಂಡಿಸಿ ಜಿಲ್ಲಾ‌ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು ಬೃಹತ್ ಪ್ರತಿಭಟನೆ ನಡೆಸಿದರು.

ಬಳ್ಳಾರಿಯ ಗಡಿಗಿ ಚನ್ನಪ್ಪ ವೃತ್ತದಲ್ಲಿ ಇಂದು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಜಿ ಎಸ್ ಮಹ್ಮದ ರಫೀಕ್ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಜಮಾಯಿಸಿ ಕೆಲಕಾಲ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಘೋಷಣೆ ಕೂಗಿ, ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಜಿಲ್ಲಾಧಿಕಾರಿಯವರ ಮೂಲಕ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಿದರು.

ಉತ್ತರಪ್ರದೇಶದ ಸೋನ್‌ಭದ್ರಾದಲ್ಲಿ ಹತ್ಯೆಗೊಳಗಾದ ಕುಟುಂಬಸ್ಥರಿಗೆ ಪ್ರಿಯಾಂಕಾ ಗಾಂಧಿ ಸಾಂತ್ವನ ಹೇಳಲು ತೆರಳುವಾಗ ಯುಪಿ ಬಿಜೆಪಿ ಸರ್ಕಾರ ಮಾರ್ಗ ಮಧ್ಯೆದಲ್ಲಿ ಬಂಧನ ಮಾಡಿರುವುದು ಪ್ರಜಾಪ್ರಭುತ್ವ ವಿರೋಧಿ ನೀತಿಯಾಗಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ. ಸೋನ್​ಭದ್ರಾದಲ್ಲಿ‌ ನಡೆದ ಘಟನೆಗೆ ಕಾರಣೀಕರ್ತರಾದವರ ವಿರುದ್ಧ ಸೂಕ್ತ ಕಾನೂನು ಕ್ರಮ‌ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಮಾಜಿ ಶಾಸಕ ಹೆಚ್.ಅನಿಲ್ ಲಾಡ್, ಮುಖಂಡರಾದ ಅಸುಂಡಿ ನಾಗರಾಜಗೌಡ, ಕೊಳಗಲ್ಲು ಅಂಜಿನಿ, ಬಿಎಂ ಪಾಟೀಲ ಸೇರಿದಂತೆ ಹತ್ತಾರು ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

ಯಾದಗಿರಿಯಲ್ಲಿಯೂ ಪ್ರತಿಭಟನೆ ನಡೆಸಿದ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಉತ್ತರಪ್ರದೇಶದ ಪೊಲೀಸ್ ಹಾಗೂ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮರೀಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡಸಿ, ಸಿಎಂ ಯೋಗಿ ಆದಿತ್ಯನಾಥ ಸರ್ವಾಧಿಕಾರ ಆಡಳಿತ ನಡೆಸುತ್ತಿದ್ದಾರೆ. ಪ್ರೀಯಾಂಕಾ ಗಾಂಧಿ ಸಂತ್ರಸ್ತ ಕುಟುಂಬದವರಿಗೆ ಸಂತಾಪ ಸೂಚಿಸಲು ಹೊರಟಿದ್ದಾಗ ಬಂಧಿಸಿದ್ದು ಸರಿಯಲ್ಲ ಎಂದು ಕಿಡಿಕಾರಿದರು.

Priyanka Gandhi arrested
ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ
Intro:ಬಳ್ಳಾರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಬಳ್ಳಾರಿ: ಎಐಸಿಸಿ ಯುವನಾಯಕಿ ಪ್ರಿಯಾಂಕ ಗಾಂಧಿಯವರನ್ನ ಉತ್ತರ ಪ್ರದೇಶ ರಾಜ್ಯ ಸರ್ಕಾರವು ಬಂಧಿಸಿರುವ ಕ್ರಮವನ್ನು ಖಂಡಿಸಿ ಜಿಲ್ಲಾ‌ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು ಬೃಹತ್ ಪ್ರತಿಭಟನೆ ನಡೆಸಿದರು.
ಬಳ್ಳಾರಿಯ ಗಡಿಗಿ ಚನ್ನಪ್ಪ ವೃತ್ತದಲ್ಲಿಂದು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಜಿ.ಎಸ್.ಮಹಮ್ಮದ ರಫೀಕ್ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಜಮಾಯಿಸಿ ಕೆಲಕಾಲ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಕೆಲಕಾಲ ಘೋಷಣೆ ಕೂಗಿ,
ಆಕ್ರೋಶ ವ್ಯಕ್ತಪಡಿಸಿದರು. ಬಳಿಕ, ಜಿಲ್ಲಾಧಿಕಾರಿ ಕಚೇರಿಗೆ
ತೆರಳಿ, ಜಿಲ್ಲಾಧಿಕಾರಿಯವರ ಮುಖೇನ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಿದರು.
ಉತ್ತರ ಪ್ರದೇಶದ ಸೋನ್​ ಭದ್ರಾದಲ್ಲಿ ಹತ್ಯೆಗೊಳಗಾದವರ ಕುಟುಂಬಸ್ಥರಿಗೆ ಪ್ರಿಯಾಂಕ ಗಾಂಧಿ ಸಾಂತ್ವನ ಹೇಳಲು ತೆರಳು ವಾಗ ಉತ್ತರ ಪ್ರದೇಶದ ಬಿಜೆಪಿ ಸರ್ಕಾರವು ಮಾರ್ಗ ಮಧ್ಯದಲ್ಲಿ ಬಂಧನ ಮಾಡಿರುವುದು ಪ್ರಜಾಪ್ರಭುತ್ವ ವಿರೋಧಿ ನೀತಿಯಾಗಿದೆ ಎಂದು ದೂರಿದ್ದಾರೆ.
Body:ಸೋನ್​ಭದ್ರಾದಲ್ಲಿ‌ ನಡೆದ ಘಟನೆಗೆ ಕಾರಣೀಕರ್ತರಾದವರ ವಿರುದ್ಧ ಸೂಕ್ತ ಕಾನೂನು ರಿತ್ಯಾಕ್ರಮ‌ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
ಮಾಜಿ ಶಾಸಕ ಹೆಚ್.ಅನಿಲ್ ಲಾಡ್, ಮುಖಂಡರಾದ ಅಸುಂಡಿ ನಾಗರಾಜಗೌಡ, ಕೊಳಗಲ್ಲು ಅಂಜಿನಿ, ಬಿ.ಎಂ.ಪಾಟೀಲ ಸೇರಿ ದಂತೆ ಹತ್ತಾರು ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ವರದಿ: ವೀರೇಶ ಕಟ್ಟೆಮ್ಯಾಗಳ, ಬಳ್ಳಾರಿ.

Conclusion:KN_BLY_5_CONGRESS_PROTEST_NEWS_7203310

KN_BLY_5f_CONGRESS_PROTEST_NEWS_7203310

KN_BLY_5g_CONGRESS_PROTEST_NEWS_7203310
ETV Bharat Logo

Copyright © 2025 Ushodaya Enterprises Pvt. Ltd., All Rights Reserved.