ಯಾದಗಿರಿ: ಇಬ್ಬರು ಪ್ರೀತಿಸುತ್ತಿದ್ದ ವಿಚಾರ ಹುಡುಗಿಯ ಕುಟುಂಬಸ್ಥರಿಗೆ ತಿಳಿದಿದೆ. ಹೀಗಾಗಿ ಯುವಕನ ಮೇಲೆ ಹಲ್ಲೆ ಮಾಡಿ ಬಳಿಕ ಬಲವಂತವಾಗಿ ವಿಷ ಕುಡಿಸಿ ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ನಗರದ ಹೊರ ವಲಯದಲ್ಲಿ ನಡೆದಿದೆ.
ಶಹಾಪುರ ನಗರದ ಆಶ್ರಯ ಕಾಲೋನಿಯ ಮೈನಾರಿಟಿ ಹಾಸ್ಟೆಲ್ ಬಳಿ ಈ ಘಟನೆ ನಡೆದಿದೆ. ಶಹಪುರ ತಾಲೂಕಿನ ಸಾದ್ಯಾಪುರ ಗ್ರಾಮದ ಸಂತೋಷ್ (22) ಮೃತ ಯುವಕನೆಂದು ಗುರುತಿಸಲಾಗಿದೆ. ಸಂತೋಷ್ ಅದೇ ಗ್ರಾಮದ ಯುವತಿಯನ್ನು ಪ್ರೀತಿಸುತ್ತಿದ್ದನಂತೆ. ಇಬ್ಬರ ಪ್ರೀತಿ ವಿಚಾರ ಯುವತಿ ಮನೆಯವರಿಗೆ ತಿಳಿದು, ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ಬಾರ್ ಕ್ಯಾಷಿಯರ್ ಮೇಲೆ ಹಲ್ಲೆ : ಸಿಸಿ ಟಿವಿಯಲ್ಲಿ ದೃಶ್ಯ ಸೆರೆ
ಈ ಕುರಿತು ಶಹಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿಪಿಐ ಚೆನ್ನಯ್ಯ ಹಿರೇಮಠ ನೇತೃತ್ವದಲ್ಲಿ ಪ್ರಕರಣದ ತನಿಖೆ ನಡೆಯುತ್ತಿದೆ.