ETV Bharat / state

ವಿದ್ಯುತ್​ ಕಣ್ಣಾಮುಚ್ಚಾಲೆ: ಜೆಸ್ಕಾಂ ಕಚೇರಿಗೆ ರೈತರ ಮುತ್ತಿಗೆ

author img

By

Published : Oct 10, 2020, 5:13 PM IST

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಆಲ್ದಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅನೇಕ ಗ್ರಾಮಗಳಿಗೆ ವಿದ್ಯುತ್ ಸಮರ್ಪಕ ಪೂರೈಕೆ ಇಲ್ಲದ ಕಾರಣ ರೈತರಿಗೆ ತೊಂದರೆ ಉಂಟಾಗಿದ್ದು, ಆಕ್ರೋಶಗೊಂಡ ರೈತರು ಜೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿರುವ ಘಟನೆ ನಡೆದಿದೆ.

farmers protest against JESCOM
ರೈತರ ಆಕ್ರೋಶ

ಸುರಪುರ: ತಾಲೂಕಿನ ಆಲ್ದಾಳ ಗ್ರಾಮದ ರೈತರು ಜೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಬಾಗಿಲು ಬಂದ್ ಮಾಡಿ ಧರಣಿ ನಡೆಸಿದರು.

ರೈತರ ಆಕ್ರೋಶ

ಸುರಪುರ ನಗರದ ರಂಗಂಪೇಟೆಯಲ್ಲಿರುವ ಜೆಸ್ಕಾಂ ಇಲಾಖೆಯ ಕಚೇರಿ ದ್ವಾರದಲ್ಲಿ ಧರಣಿ ನಡೆಸಿದರು. ಸದ್ಯ ಭತ್ತ ಕಾಳು ಕಟ್ಟುವ ಹಂತದಲ್ಲಿದೆ. ಇಂತಹ ಸಂದರ್ಭದಲ್ಲಿ ಜೆಸ್ಕಾಂ ಸರಿಯಾಗಿ ವಿದ್ಯುತ್ ಸರಬರಾಜು ಮಾಡದಿರುವುದರಿಂದ ಬೆಳೆಗಳು ಒಣಗಲಾರಂಭಿಸಿವೆ. ಆದ್ದರಿಂದ ರೈತರ ಅನುಕೂಲಕ್ಕಾಗಿ ದಿನಕ್ಕೆ ಕನಿಷ್ಠ 10 ಗಂಟೆಗಳ ಕಾಲ ವಿದ್ಯುತ್ ಸರಬರಾಜು ಮಾಡಬೇಕೆಂದು ಮುಖಂಡ ವೆಂಕಟೇಶ ಬೇಟೆಗಾರ ತಿಳಿಸಿದರು. ಧರಣಿ ನಿರತ ಅನೇಕ ರೈತರು ತಮ್ಮ ಬೇಸರ ಹೊರಹಾಕಿ, ಜೆಸ್ಕಾಂ ಕೂಡಲೆ ವಿದ್ಯುತ್ ನೀಡುವ ಭರವಸೆ ನೀಡಬೇಕು, ಇಲ್ಲವಾದಲ್ಲಿ ಕಚೇರಿ ಮುಂದೆಯೇ ವಿಷ ಸೇವಿಸುವುದಾಗಿ ನುಡಿದರು.

ನಂತರ ಪ್ರತಿಭಟನಾ ಸ್ಥಳಕ್ಕೆ ಜೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಈರಣ್ಣ ಹಳಿಚಂಡಿ ಆಗಮಿಸಿ ರೈತರ ಮನವಿ ಆಲಿಸಿ ಮಾತನಾಡಿ, 10 ಗಂಟೆಗಳ ನಿರಂತರ ವಿದ್ಯುತ್ ನೀಡುವ ಆದೇಶವಿಲ್ಲದ ಕಾರಣ , 7 ತಾಸು ನಿರಂತರವಾಗಿ ವಿದ್ಯುತ್​ ನೀಡುವುದಾಗಿ ಭರವಸೆ ನೀಡಿದ ನಂತರ ಪ್ರತಿಭಟನೆ ನಿಲ್ಲಿಸಿದರು. ನಂತರ ಮುಖ್ಯಮಂತ್ರಿಗಳಿಗೆ ಬರೆದ ಮನವಿ ಪತ್ರ ಸಲ್ಲಿಸಿದರು.

ಸುರಪುರ: ತಾಲೂಕಿನ ಆಲ್ದಾಳ ಗ್ರಾಮದ ರೈತರು ಜೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಬಾಗಿಲು ಬಂದ್ ಮಾಡಿ ಧರಣಿ ನಡೆಸಿದರು.

ರೈತರ ಆಕ್ರೋಶ

ಸುರಪುರ ನಗರದ ರಂಗಂಪೇಟೆಯಲ್ಲಿರುವ ಜೆಸ್ಕಾಂ ಇಲಾಖೆಯ ಕಚೇರಿ ದ್ವಾರದಲ್ಲಿ ಧರಣಿ ನಡೆಸಿದರು. ಸದ್ಯ ಭತ್ತ ಕಾಳು ಕಟ್ಟುವ ಹಂತದಲ್ಲಿದೆ. ಇಂತಹ ಸಂದರ್ಭದಲ್ಲಿ ಜೆಸ್ಕಾಂ ಸರಿಯಾಗಿ ವಿದ್ಯುತ್ ಸರಬರಾಜು ಮಾಡದಿರುವುದರಿಂದ ಬೆಳೆಗಳು ಒಣಗಲಾರಂಭಿಸಿವೆ. ಆದ್ದರಿಂದ ರೈತರ ಅನುಕೂಲಕ್ಕಾಗಿ ದಿನಕ್ಕೆ ಕನಿಷ್ಠ 10 ಗಂಟೆಗಳ ಕಾಲ ವಿದ್ಯುತ್ ಸರಬರಾಜು ಮಾಡಬೇಕೆಂದು ಮುಖಂಡ ವೆಂಕಟೇಶ ಬೇಟೆಗಾರ ತಿಳಿಸಿದರು. ಧರಣಿ ನಿರತ ಅನೇಕ ರೈತರು ತಮ್ಮ ಬೇಸರ ಹೊರಹಾಕಿ, ಜೆಸ್ಕಾಂ ಕೂಡಲೆ ವಿದ್ಯುತ್ ನೀಡುವ ಭರವಸೆ ನೀಡಬೇಕು, ಇಲ್ಲವಾದಲ್ಲಿ ಕಚೇರಿ ಮುಂದೆಯೇ ವಿಷ ಸೇವಿಸುವುದಾಗಿ ನುಡಿದರು.

ನಂತರ ಪ್ರತಿಭಟನಾ ಸ್ಥಳಕ್ಕೆ ಜೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಈರಣ್ಣ ಹಳಿಚಂಡಿ ಆಗಮಿಸಿ ರೈತರ ಮನವಿ ಆಲಿಸಿ ಮಾತನಾಡಿ, 10 ಗಂಟೆಗಳ ನಿರಂತರ ವಿದ್ಯುತ್ ನೀಡುವ ಆದೇಶವಿಲ್ಲದ ಕಾರಣ , 7 ತಾಸು ನಿರಂತರವಾಗಿ ವಿದ್ಯುತ್​ ನೀಡುವುದಾಗಿ ಭರವಸೆ ನೀಡಿದ ನಂತರ ಪ್ರತಿಭಟನೆ ನಿಲ್ಲಿಸಿದರು. ನಂತರ ಮುಖ್ಯಮಂತ್ರಿಗಳಿಗೆ ಬರೆದ ಮನವಿ ಪತ್ರ ಸಲ್ಲಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.