ETV Bharat / state

ಬಾಲ ಕಾರ್ಮಿಕರ ಪತ್ತೆಗೆ ಯಾದಗಿರಿಯಲ್ಲಿ ಅಧಿಕಾರಿಗಳ ಅನಿರೀಕ್ಷಿತ ದಾಳಿ

author img

By

Published : Dec 19, 2019, 8:30 AM IST

ಯಾದಗಿರಿ ಜಿಲ್ಲೆ ಗುರುಮಠಕಲ್ ತಾಲೂಕಿನ ವಿವಿಧ ಗ್ರಾಮಗಳ ಮೇಲೆ ಪೊಲೀಸ್​ ಇಲಾಖೆ, ಬಾಲ ಕಾರ್ಮಿಕ ಇಲಾಖೆ ದಾಳಿ ನಡೆಸಿ ಬಾಲ ಕಾರ್ಮಿಕರ ಪತ್ತೆ ಹಚ್ಚುವ ಜೊತೆಗೆ ಮಾಲೀಕರನ್ನು ವಶಕ್ಕೆ ಪಡೆದಿವೆ.

Finding child laborers in Yadagiri
ಯಾದಗಿರಿಯಲ್ಲಿ ಬಾಲ ಕಾರ್ಮಿಕರು ಪತ್ತೆ

ಯಾದಗಿರಿ: ಪೊಲೀಸ್​ ಇಲಾಖೆ, ಬಾಲ ಕಾರ್ಮಿಕ ಇಲಾಖೆ ಹಾಗೂ ಇತರೆ ಇಲಾಖೆ ಅಧಿಕಾರಿಗಳು ಅನಿರೀಕ್ಷಿತ ದಾಳಿ ನಡೆಸಿ ಶಾಲೆ ಬಿಟ್ಟ ಮಕ್ಕಳನ್ನು ತಪಾಸಣೆ ನಡೆಸಿದ್ದಾರೆ.

ಗುರುಮಠಕಲ್ ತಾಲೂಕಿನ ಸೈದಾಪೂರ ವ್ಯಾಪ್ತಿಯಲ್ಲಿ ಬರುವ ಗುಂಜನೂರ, ಚಲ್ಹೇರಿ, ಜೈಗ್ರಾಮ, ನಂದೆಪಲ್ಲಿ, ಸಂಕ್ಲಾಪುರ ಹಾಗೂ ಇತರೆ ಗ್ರಾಮಗಳಲ್ಲಿ ಶಾಲೆ ಬಿಟ್ಟ ಮಕ್ಕಳ ತಪಾಸಣೆ ನಡೆಸಲಾಯಿತು.

ಈ ವೇಳೆ 9ರಿಂದ 18 ವರ್ಷದೊಳಗಿನ ಸುಮಾರು 15 ಮಕ್ಕಳ ವರದಿ ಪಡೆದು ಶಾಲೆಗೆ ದಾಖಲಿಸಲಾಯಿತು.

Finding child laborers in Yadagiri
ಯಾದಗಿರಿಯಲ್ಲಿ ಬಾಲ ಕಾರ್ಮಿಕರು ಪತ್ತೆ

6 ವಾಹನಗಳನ್ನು ತಡೆದು ವಿಚಾರಣೆಗೆ ಒಳಪಡಿಸಿದ ಅಧಿಕಾರಿಗಳ ತಂಡ, ವಾಹನ ಚಾಲಕರು ಮತ್ತು ಮಕ್ಕಳ ಮಾಹಿತಿ ಪಡೆದಿದ್ದಾರೆ. ಪೊಲೀಸ್ ಇಲಾಖೆಯವರು ವಾಹನಗಳನ್ನು ಜಪ್ತಿ ಮಾಡಿ ಪ್ರತಿಯೊಂದು ವಾಹನಕ್ಕೂ ದಂಡ ವಿಧಿಸುವುದರ ಜೊತೆಗೆ 1988ರ ಮೋಟಾರು ವಾಹನ ಕಾಯ್ದೆಯಡಿ ವಾಹನ ಚಾಲಕರ ಪರವಾನಗಿಯನ್ನು ರದ್ದುಪಡಿಸಲು ಕ್ರಮ ಕೈಗೊಂಡಿದ್ದಾರೆ.

ಜಿಲ್ಲಾ ಬಾಲಕಾರ್ಮಿಕ ಇಲಾಖೆಯ ಯೋಜನಾ ನಿರ್ದೇಶಕ ರಘುವೀರ ಸಿಂಗ್, ಡಿಸಿಪಿಯು ಘಟಕದ ಸಾಬಯ್ಯ, ಮಕ್ಕಳ ಸಹಾಯವಾಣಿಯ ಶರಣಪ್ಪ, ಕಾರ್ಮಿಕ ಇಲಾಖೆಯ ಚಂದ್ರಶೇಖರ ಬಂದಳ್ಳಿ, ಅಮೃತರಾವ್ ಕೊತ್ವಾಲ್ ಇದ್ದರು.

ಯಾದಗಿರಿ: ಪೊಲೀಸ್​ ಇಲಾಖೆ, ಬಾಲ ಕಾರ್ಮಿಕ ಇಲಾಖೆ ಹಾಗೂ ಇತರೆ ಇಲಾಖೆ ಅಧಿಕಾರಿಗಳು ಅನಿರೀಕ್ಷಿತ ದಾಳಿ ನಡೆಸಿ ಶಾಲೆ ಬಿಟ್ಟ ಮಕ್ಕಳನ್ನು ತಪಾಸಣೆ ನಡೆಸಿದ್ದಾರೆ.

ಗುರುಮಠಕಲ್ ತಾಲೂಕಿನ ಸೈದಾಪೂರ ವ್ಯಾಪ್ತಿಯಲ್ಲಿ ಬರುವ ಗುಂಜನೂರ, ಚಲ್ಹೇರಿ, ಜೈಗ್ರಾಮ, ನಂದೆಪಲ್ಲಿ, ಸಂಕ್ಲಾಪುರ ಹಾಗೂ ಇತರೆ ಗ್ರಾಮಗಳಲ್ಲಿ ಶಾಲೆ ಬಿಟ್ಟ ಮಕ್ಕಳ ತಪಾಸಣೆ ನಡೆಸಲಾಯಿತು.

ಈ ವೇಳೆ 9ರಿಂದ 18 ವರ್ಷದೊಳಗಿನ ಸುಮಾರು 15 ಮಕ್ಕಳ ವರದಿ ಪಡೆದು ಶಾಲೆಗೆ ದಾಖಲಿಸಲಾಯಿತು.

Finding child laborers in Yadagiri
ಯಾದಗಿರಿಯಲ್ಲಿ ಬಾಲ ಕಾರ್ಮಿಕರು ಪತ್ತೆ

6 ವಾಹನಗಳನ್ನು ತಡೆದು ವಿಚಾರಣೆಗೆ ಒಳಪಡಿಸಿದ ಅಧಿಕಾರಿಗಳ ತಂಡ, ವಾಹನ ಚಾಲಕರು ಮತ್ತು ಮಕ್ಕಳ ಮಾಹಿತಿ ಪಡೆದಿದ್ದಾರೆ. ಪೊಲೀಸ್ ಇಲಾಖೆಯವರು ವಾಹನಗಳನ್ನು ಜಪ್ತಿ ಮಾಡಿ ಪ್ರತಿಯೊಂದು ವಾಹನಕ್ಕೂ ದಂಡ ವಿಧಿಸುವುದರ ಜೊತೆಗೆ 1988ರ ಮೋಟಾರು ವಾಹನ ಕಾಯ್ದೆಯಡಿ ವಾಹನ ಚಾಲಕರ ಪರವಾನಗಿಯನ್ನು ರದ್ದುಪಡಿಸಲು ಕ್ರಮ ಕೈಗೊಂಡಿದ್ದಾರೆ.

ಜಿಲ್ಲಾ ಬಾಲಕಾರ್ಮಿಕ ಇಲಾಖೆಯ ಯೋಜನಾ ನಿರ್ದೇಶಕ ರಘುವೀರ ಸಿಂಗ್, ಡಿಸಿಪಿಯು ಘಟಕದ ಸಾಬಯ್ಯ, ಮಕ್ಕಳ ಸಹಾಯವಾಣಿಯ ಶರಣಪ್ಪ, ಕಾರ್ಮಿಕ ಇಲಾಖೆಯ ಚಂದ್ರಶೇಖರ ಬಂದಳ್ಳಿ, ಅಮೃತರಾವ್ ಕೊತ್ವಾಲ್ ಇದ್ದರು.

Intro:ಯಾದಗಿರಿ: ಗುರುಮಠಕಲ್ ತಾಲ್ಲೂಕಿನ ಸೈದಾಪೂರ ವ್ಯಾಪ್ತಿಯಲ್ಲಿ ಬರುವ ಗುಂಜನೂರ, ಚಲ್ಹೇರಿ, ಜೈಗ್ರಾಮ, ನಂದೆಪಲ್ಲಿ, ಸಂಕ್ಲಾಪುರ ಹಾಗೂ ಇತರೆ ಗ್ರಾಮಗಳಲ್ಲಿ ಬಾಲ ಕಾರ್ಮಿಕ ಇಲಾಖೆ, ಕಾರ್ಮಿಕ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ ಹಾಗೂ ಇತರೆ ಇಲಾಖೆ ಅಧಿಕಾರಿಗಳು ಹತ್ತಿ ಹೊಲಗಳಿಗೆ ಅನಿರೀಕ್ಷಿತ ದಾಳಿ ನಡೆಸಿ, ಶಾಲೆಬಿಟ್ಟ ಮಕ್ಕಳ ತಪಾಸಣೆ ನಡೆಸಿದರು. ಈ ಸಂದರ್ಭದಲ್ಲಿ ಪತ್ತೆಯಾದ ೬ರಿಂದ ೧೮ ವರ್ಷದೊಳಗಿನ ಮಕ್ಕಳಲ್ಲಿ ತನಿಖೆ ನಡೆಸಿ ೧೫ ಮಕ್ಕಳ ವರದಿಯನ್ನು ಪಡೆದು ಶಾಲೆಗೆ ದಾಖಲಿಸಿದ್ದಾರೆ.


Body:ಅನಿರೀಕ್ಷಿತ ದಾಳಿ ಮಾಡಿದಾಗ ೬ ಟಂಟ0/ ಟಾಟಾ ಏಸ್/ ಜೀಪ್ ವಾಹನಗಳಲ್ಲಿ ಜನರನ್ನು ಕರೆದುಕೊಂಡು ಹೋಗುತ್ತಿರುವುದು ಕಂಡುಬಂದಿದ್ದು ಈ ವಾಹನಗಳನ್ನು ತಡೆಹಿಡಿದು ವಿಚಾರಣೆಗೆ ಒಳಪಡಿಸಿದ ಅಧಿಕಾರಿಗಳ ತಂಡ ವಾಹನ ಚಾಲಕರ ಮತ್ತು ಮಕ್ಕಳ ಮಾಹಿತಿಯನ್ನು ಪಡೆಯಿತು. ಪೊಲೀಸ್ ಇಲಾಖೆಯವರು ವಾಹನಗಳನ್ನು ಜಪ್ತಿ ಮಾಡಿ ಪ್ರತಿಯೊಂದು ವಾಹನಕ್ಕೆ ದಂಡ ವಿಧಿಸುವುದರ ಜೊತೆಗೆ ೧೯೮೮ರ ಮೋಟಾರು ವಾಹನ ಕಾಯ್ದೆಯಡಿಯಲ್ಲಿ ಸಂಬ0ಧಿಸಿದ ವಾಹನ ಚಾಲಕರಿಗೆ ಚಾಲನೆ ಪರವಾನಿಗೆಯನ್ನು ರದ್ದುಪಡಿಸಲು ಕ್ರಮ ಕೈಗೊಂಡಿದ್ದಾರೆ.


Conclusion:ದಾಳಿಯಲ್ಲಿ ಜಿಲ್ಲಾ ಬಾಲಕಾರ್ಮಿಕ ಇಲಾಖೆಯ ಯೋಜನಾ ನಿರ್ದೇಶಕರಾದ ರಘುವೀರ ಸಿಂಗ್, ಡಿಸಿಪಿಯು ಘಟಕದ ಸಾಬಯ್ಯ, ಮಕ್ಕಳ ಸಹಾಯವಾಣಿಯ ಶರಣಪ್ಪ, ಕಾರ್ಮಿಕ ಇಲಾಖೆಯ ಚಂದ್ರಶೇಖರ ಬಂದಳ್ಳಿ, ಅಮೃತರಾವ್ ಕೊತ್ವಾಲ್ ಅವರು ಭಾಗವಹಿಸಿದ್ದರು.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.