ETV Bharat / state

ರಾಜ್ಯಸಭೆಗೆ ದೇವೇಗೌಡರು ಆಯ್ಕೆ: ಸುರಪುರ ಜೆಡಿಎಸ್ ಕಾರ್ಯಕರ್ತರ ಸಂಭ್ರಮ - ಸುರಪುರ ಜೆಡಿಎಸ್​ ಸುದ್ದಿ

ಮಾಜಿ ಪ್ರಧಾನಿ ದೇವೇಗೌಡ ಅವರು ರಾಜ್ಯಸಭೆ ಸದಸ್ಯರಾಗಿ ಆಯ್ಕೆಗೊಂಡ ಹಿನ್ನೆಲೆ ಸುರಪುರ ಜೆಡಿಎಸ್​ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಿಸಿದರು.

Surapura
Surapura
author img

By

Published : Jun 13, 2020, 11:09 PM IST

ಸುರಪುರ: ಮಾಜಿ ಪ್ರಧಾನಿ ದೇವೇಗೌಡ ಅವರು ರಾಜ್ಯಸಭೆ ಸದಸ್ಯರಾಗಿ ಆಯ್ಕೆಯಾದ ಹಿನ್ನೆಲೆ ಸುರಪುರ ಜೆಡಿಎಸ್ ಕಾರ್ಯಕರ್ತರು ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದರು.

ಈ ವೇಳೆ ಜೆಡಿಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿ ಉಸ್ತಾದ್ ವಜಾಹತ್ ಹುಸೇನ್ ಮಾತನಾಡಿ, ದೇವೇಗೌಡರು ಈ ದೇಶಕ್ಕೆ ಹಾಗೂ ದೇಶದ ಸಮುದಾಯಕ್ಕೆ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಈ ನಾಡಿನ ರೈತರ ಅನುಕೂಲಕ್ಕಾಗಿ ಅನೇಕ ನೀರಾವರಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ರೈತ ಸಮುದಾಯದ ಏಳಿಗೆಗೆ ಕೊಡುಗೆ ನೀಡುವುದರ ಜೊತೆಗೆ ರೈತರ ಪರವಾಗಿ ಗಟ್ಟಿ ಧ್ವನಿ ಎತ್ತುತ್ತಿದ್ದಾರೆ ಎಂದರು.

ದೇವೇಗೌಡ ಅವರು ಮತ್ತೆ ರಾಜ್ಯಸಭೆಗೆ ಆಯ್ಕೆಯಾಗಿರುವುದರಿಂದ ದೇಶದ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಂಸತ್ತಿನಲ್ಲಿ ಧನಿಯೆತ್ತಿ, ದೇಶದ ಅಭಿವೃದ್ಧಿಗೆ ಸಹಕಾರಿಯಾಗಲಿದ್ದಾರೆ ಎಂದು ಹೇಳಿದರು.

ಸುರಪುರ: ಮಾಜಿ ಪ್ರಧಾನಿ ದೇವೇಗೌಡ ಅವರು ರಾಜ್ಯಸಭೆ ಸದಸ್ಯರಾಗಿ ಆಯ್ಕೆಯಾದ ಹಿನ್ನೆಲೆ ಸುರಪುರ ಜೆಡಿಎಸ್ ಕಾರ್ಯಕರ್ತರು ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದರು.

ಈ ವೇಳೆ ಜೆಡಿಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿ ಉಸ್ತಾದ್ ವಜಾಹತ್ ಹುಸೇನ್ ಮಾತನಾಡಿ, ದೇವೇಗೌಡರು ಈ ದೇಶಕ್ಕೆ ಹಾಗೂ ದೇಶದ ಸಮುದಾಯಕ್ಕೆ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಈ ನಾಡಿನ ರೈತರ ಅನುಕೂಲಕ್ಕಾಗಿ ಅನೇಕ ನೀರಾವರಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ರೈತ ಸಮುದಾಯದ ಏಳಿಗೆಗೆ ಕೊಡುಗೆ ನೀಡುವುದರ ಜೊತೆಗೆ ರೈತರ ಪರವಾಗಿ ಗಟ್ಟಿ ಧ್ವನಿ ಎತ್ತುತ್ತಿದ್ದಾರೆ ಎಂದರು.

ದೇವೇಗೌಡ ಅವರು ಮತ್ತೆ ರಾಜ್ಯಸಭೆಗೆ ಆಯ್ಕೆಯಾಗಿರುವುದರಿಂದ ದೇಶದ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಂಸತ್ತಿನಲ್ಲಿ ಧನಿಯೆತ್ತಿ, ದೇಶದ ಅಭಿವೃದ್ಧಿಗೆ ಸಹಕಾರಿಯಾಗಲಿದ್ದಾರೆ ಎಂದು ಹೇಳಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.