ETV Bharat / state

ಪಕ್ಕದ ರಾಜ್ಯದಲ್ಲಿ ಕೊರೊನಾ ವೈರಸ್​ ಪತ್ತೆ: ಯಾದಗಿರಿಯಲ್ಲಿ ಹೈಅಲರ್ಟ್​

author img

By

Published : Mar 4, 2020, 2:08 AM IST

Updated : Mar 4, 2020, 3:45 AM IST

ನೆರೆ ರಾಜ್ಯಗಳಲ್ಲಿ ಕೊರೊನಾ ವೈರಸ್​ ಪತ್ತೆಯಾಗಿದ್ದು, ಯಾದಗಿರಿಯಲ್ಲಿ ಜಿಲ್ಲೆಯಲ್ಲಿ ಹೈಅಲರ್ಟ್​ ಘೋಷಿಸಲಾಗಿದೆ.

coronavirus fear, coronavirus fear in yadagiri, coronavirus alert in yadagiri, Yadagiri corona virus news, high alert in yadagiri for coronavirus, ಕೊರೊನಾ ವೈರಸ್​ ಭಯ, ಯಾದಗಿರಿಯಲ್ಲಿ ಕೊರೊನಾ ವೈರಸ್​ ಭಯ, ಕೊರೊನಾ ವೈರಸ್​ ಹಿನ್ನೆಲೆ ಯಾದಗಿರಿಯಲ್ಲಿ ಹೆಲ್ತ್​ ಅಲರ್ಟ್​,
ಯಾದಗಿರಿಯಲ್ಲಿ ಹೈಅಲರ್ಟ್​

ಯಾದಗಿರಿ: ನೆರೆ ರಾಜ್ಯ ತೆಲಂಗಾಣದಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಯಾದಗಿರಿ ಜಿಲ್ಲೆಯಲ್ಲೂ ಕೂಡ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

ಯಾದಗಿರಿಯಲ್ಲಿ ಹೈಅಲರ್ಟ್​

ಪ್ರತಿನಿತ್ಯ ನೂರಾರು ಜನ ರೈಲು ಹಾಗೂ ಬಸ್ ಮೂಲಕ ಹೈದ್ರಾಬಾದ್​ಗೆ ಕೆಲಸದ ನಿಮಿತ್ತ ಪ್ರಯಾಣ ಮಾಡುತ್ತಿದ್ದು, ತೆಲಂಗಾಣದಿಂದ ಜಿಲ್ಲೆಗೆ ಆಗಮಿಸುವ ಜನರಿಂದ ಕೊರೊನಾ ವೈರಸ್ ಭೀತಿ ಎದುರಾಗಿದೆ.

ಮುನ್ನೆಚ್ಚರಿಕಾ ಕ್ರಮವಾಗಿ ಈಗಾಗಲೇ ಜಿಲ್ಲಾ ಆರೋಗ್ಯ ಇಲಾಖೆ ಜಿಲ್ಲಾಸ್ಪತ್ರೆಯಲ್ಲಿ 5 ಬೆಡ್​ಗಳ ವಿಶೇಷ ವಾರ್ಡ್ ತೆಗೆಯಲಾಗಿದ್ದು, ಶಂಕಿತ ರೋಗಿ ಪತ್ತೆಯಾದಲ್ಲಿ ಚಿಕಿತ್ಸೆಗಾಗಿ ವಿಶೇಷ ವೈದ್ಯರು ಮತ್ತು ಸ್ಟಾಪ್ ನರ್ಸ್​ಗಳನ್ನು ನೇಮಕ ಮಾಡಲಾಗಿದೆ. ಅಲ್ಲದೆ ನುರಿತ ವೈದ್ಯರಿಂದ ಕಾರ್ಯಾಗಾರ ನಡೆಸಿ ಕೊರೊನಾ ಸೋಂಕಿನ ಚಿಕಿತ್ಸೆ ಕುರಿತು ಜಿಲ್ಲೆಯ ವೈದ್ಯರು ಮತ್ತು ಸಿಬ್ಬಂದಿಗೆ ತರಬೇತಿ ನೀಡಲಾಗಿದೆ ಎಂದು ಜಿಲ್ಲಾಸ್ಪತ್ರೆಯ ಶಸ್ತ್ರಚಿಕಿತ್ಸಾ ತಜ್ಞ ನಾರಾಯಣಪ್ಪ ಹೇಳಿದರು.

ಮಹಾಮಾರಿ ಕೊರೊನಾ ವೈರಸ್ ಕುರಿತು ನಗರ ಸೇರಿದಂತೆ ತಾಲೂಕಾ ಕೇಂದ್ರ ಮತ್ತು ಹಳ್ಳಿಗಳಲ್ಲಿ ವೈದ್ಯರು ಸೇರಿದಂತೆ ಆರೋಗ್ಯ ಇಲಾಖೆ ವತಿಯಿಂದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ಜಿಲ್ಲಾಸ್ಪತ್ರೆಯ ಶಸ್ತ್ರಚಿಕಿತ್ಸಾ ತಜ್ಞ ನಾರಯಾಣಪ್ಪ ಮಾಹಿತಿ ನೀಡಿದ್ದಾರೆ.

ಯಾದಗಿರಿ: ನೆರೆ ರಾಜ್ಯ ತೆಲಂಗಾಣದಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಯಾದಗಿರಿ ಜಿಲ್ಲೆಯಲ್ಲೂ ಕೂಡ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

ಯಾದಗಿರಿಯಲ್ಲಿ ಹೈಅಲರ್ಟ್​

ಪ್ರತಿನಿತ್ಯ ನೂರಾರು ಜನ ರೈಲು ಹಾಗೂ ಬಸ್ ಮೂಲಕ ಹೈದ್ರಾಬಾದ್​ಗೆ ಕೆಲಸದ ನಿಮಿತ್ತ ಪ್ರಯಾಣ ಮಾಡುತ್ತಿದ್ದು, ತೆಲಂಗಾಣದಿಂದ ಜಿಲ್ಲೆಗೆ ಆಗಮಿಸುವ ಜನರಿಂದ ಕೊರೊನಾ ವೈರಸ್ ಭೀತಿ ಎದುರಾಗಿದೆ.

ಮುನ್ನೆಚ್ಚರಿಕಾ ಕ್ರಮವಾಗಿ ಈಗಾಗಲೇ ಜಿಲ್ಲಾ ಆರೋಗ್ಯ ಇಲಾಖೆ ಜಿಲ್ಲಾಸ್ಪತ್ರೆಯಲ್ಲಿ 5 ಬೆಡ್​ಗಳ ವಿಶೇಷ ವಾರ್ಡ್ ತೆಗೆಯಲಾಗಿದ್ದು, ಶಂಕಿತ ರೋಗಿ ಪತ್ತೆಯಾದಲ್ಲಿ ಚಿಕಿತ್ಸೆಗಾಗಿ ವಿಶೇಷ ವೈದ್ಯರು ಮತ್ತು ಸ್ಟಾಪ್ ನರ್ಸ್​ಗಳನ್ನು ನೇಮಕ ಮಾಡಲಾಗಿದೆ. ಅಲ್ಲದೆ ನುರಿತ ವೈದ್ಯರಿಂದ ಕಾರ್ಯಾಗಾರ ನಡೆಸಿ ಕೊರೊನಾ ಸೋಂಕಿನ ಚಿಕಿತ್ಸೆ ಕುರಿತು ಜಿಲ್ಲೆಯ ವೈದ್ಯರು ಮತ್ತು ಸಿಬ್ಬಂದಿಗೆ ತರಬೇತಿ ನೀಡಲಾಗಿದೆ ಎಂದು ಜಿಲ್ಲಾಸ್ಪತ್ರೆಯ ಶಸ್ತ್ರಚಿಕಿತ್ಸಾ ತಜ್ಞ ನಾರಾಯಣಪ್ಪ ಹೇಳಿದರು.

ಮಹಾಮಾರಿ ಕೊರೊನಾ ವೈರಸ್ ಕುರಿತು ನಗರ ಸೇರಿದಂತೆ ತಾಲೂಕಾ ಕೇಂದ್ರ ಮತ್ತು ಹಳ್ಳಿಗಳಲ್ಲಿ ವೈದ್ಯರು ಸೇರಿದಂತೆ ಆರೋಗ್ಯ ಇಲಾಖೆ ವತಿಯಿಂದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ಜಿಲ್ಲಾಸ್ಪತ್ರೆಯ ಶಸ್ತ್ರಚಿಕಿತ್ಸಾ ತಜ್ಞ ನಾರಯಾಣಪ್ಪ ಮಾಹಿತಿ ನೀಡಿದ್ದಾರೆ.

Last Updated : Mar 4, 2020, 3:45 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.