ETV Bharat / state

ಹಿಜಾಬ್‌ ತೀರ್ಪು : ಪರೀಕ್ಷೆ ಧಿಕ್ಕರಿಸಿ ಮನೆಯತ್ತ ಸಾಗಿದ ಮುಸ್ಲಿಂ ವಿದ್ಯಾರ್ಥಿನಿಯರು

author img

By

Published : Mar 15, 2022, 1:31 PM IST

Updated : Mar 15, 2022, 2:05 PM IST

ಕೆಲವೆಡೆ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿತ್ತು. ಹೈಕೋರ್ಟ್ ನೀಡಿದ ತೀರ್ಪನ್ನು ಪ್ರಶ್ನಿಸಿ ಮುಸ್ಲಿಂ ಸಂಘಟನೆಗಳು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವ ಸಾಧ್ಯತೆ ಇದೆ..

Hijab verdict: Some Students went home without writing exam in Yadgir district
ಹಿಜಾಬ್‌ ತೀರ್ಪು: ಪರೀಕ್ಷೆ ಧಿಕ್ಕರಿಸಿ ಮನೆಯತ್ತ ಸಾಗಿದ ಮುಸ್ಲಿಂ ವಿದ್ಯಾರ್ಥಿನಿಯರು..!

ಯಾದಗಿರಿ : ಸರ್ಕಾರ ವಸ್ತ್ರಸಂಹಿತೆಯನ್ನು ಪ್ರಶ್ನೆ ಮಾಡುವ ಹಾಗಿಲ್ಲ. ಹಿಜಾಬ್ ಇಸ್ಲಾಂ ಧರ್ಮದಲ್ಲಿ ಅತ್ಯಗತ್ಯವಲ್ಲ ಎಂಬ ಹೈಕೋರ್ಟ್‌ನ ತೀರ್ಪು ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಕೆಲ ವಿದ್ಯಾರ್ಥಿಗಳು ಪರೀಕ್ಷೆಯನ್ನೇ ಧಿಕ್ಕರಿಸಿ ಮನೆಯತ್ತ ತೆರಳಿದ ಘಟನೆ ಯಾದಗಿರಿ ಜಿಲ್ಲೆ ಕೆಂಭಾವಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದೆ.

ಹಿಜಾಬ್‌ ತೀರ್ಪು : ಪರೀಕ್ಷೆ ಧಿಕ್ಕರಿಸಿ ಮನೆಯತ್ತ ಸಾಗಿದ ಮುಸ್ಲಿಂ ವಿದ್ಯಾರ್ಥಿನಿಯರು

ಜಿಲ್ಲೆಯಾದ್ಯಂತ 300 ಶಾಲಾ-ಕಾಲೇಜುಗಳಿಗೆ ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ಒಟ್ಟು 3 ಡಿವೈಎಸ್ಪಿ, 15 ಪಿಐ, 30 ಪಿಎಸ್ಐ, 300 ಪೊಲೀಸ್ ಸಿಬ್ಬಂದಿ ಹಾಗೂ 4 ಡಿಎಆರ್ ತುಕಡಿಗಳನ್ನು ಇರಿಸಲಾಗಿತ್ತು. ಇದರಿಂದ ಯಾವುದೇ ಗಲಭೆ, ಅಹಿತಕರ ಘಟನೆ ನಡೆಯಲಿಲ್ಲ.

ಕೆಲವೆಡೆ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿತ್ತು. ಹೈಕೋರ್ಟ್ ನೀಡಿದ ತೀರ್ಪನ್ನು ಪ್ರಶ್ನಿಸಿ ಮುಸ್ಲಿಂ ಸಂಘಟನೆಗಳು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವ ಸಾಧ್ಯತೆ ಇದೆ.

ಇದನ್ನೂ ಓದಿ: ಮಕ್ಕಳಿಗೆ ಶಿಕ್ಷಣಕ್ಕಿಂತ ಮುಖ್ಯ ಯಾವುದೂ ಇಲ್ಲ: 'ಹಿಜಾಬ್'​ ತೀರ್ಪಿನ ಬಗ್ಗೆ ಸಿಎಂ ಪ್ರತಿಕ್ರಿಯೆ

ಯಾದಗಿರಿ : ಸರ್ಕಾರ ವಸ್ತ್ರಸಂಹಿತೆಯನ್ನು ಪ್ರಶ್ನೆ ಮಾಡುವ ಹಾಗಿಲ್ಲ. ಹಿಜಾಬ್ ಇಸ್ಲಾಂ ಧರ್ಮದಲ್ಲಿ ಅತ್ಯಗತ್ಯವಲ್ಲ ಎಂಬ ಹೈಕೋರ್ಟ್‌ನ ತೀರ್ಪು ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಕೆಲ ವಿದ್ಯಾರ್ಥಿಗಳು ಪರೀಕ್ಷೆಯನ್ನೇ ಧಿಕ್ಕರಿಸಿ ಮನೆಯತ್ತ ತೆರಳಿದ ಘಟನೆ ಯಾದಗಿರಿ ಜಿಲ್ಲೆ ಕೆಂಭಾವಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದೆ.

ಹಿಜಾಬ್‌ ತೀರ್ಪು : ಪರೀಕ್ಷೆ ಧಿಕ್ಕರಿಸಿ ಮನೆಯತ್ತ ಸಾಗಿದ ಮುಸ್ಲಿಂ ವಿದ್ಯಾರ್ಥಿನಿಯರು

ಜಿಲ್ಲೆಯಾದ್ಯಂತ 300 ಶಾಲಾ-ಕಾಲೇಜುಗಳಿಗೆ ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ಒಟ್ಟು 3 ಡಿವೈಎಸ್ಪಿ, 15 ಪಿಐ, 30 ಪಿಎಸ್ಐ, 300 ಪೊಲೀಸ್ ಸಿಬ್ಬಂದಿ ಹಾಗೂ 4 ಡಿಎಆರ್ ತುಕಡಿಗಳನ್ನು ಇರಿಸಲಾಗಿತ್ತು. ಇದರಿಂದ ಯಾವುದೇ ಗಲಭೆ, ಅಹಿತಕರ ಘಟನೆ ನಡೆಯಲಿಲ್ಲ.

ಕೆಲವೆಡೆ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿತ್ತು. ಹೈಕೋರ್ಟ್ ನೀಡಿದ ತೀರ್ಪನ್ನು ಪ್ರಶ್ನಿಸಿ ಮುಸ್ಲಿಂ ಸಂಘಟನೆಗಳು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವ ಸಾಧ್ಯತೆ ಇದೆ.

ಇದನ್ನೂ ಓದಿ: ಮಕ್ಕಳಿಗೆ ಶಿಕ್ಷಣಕ್ಕಿಂತ ಮುಖ್ಯ ಯಾವುದೂ ಇಲ್ಲ: 'ಹಿಜಾಬ್'​ ತೀರ್ಪಿನ ಬಗ್ಗೆ ಸಿಎಂ ಪ್ರತಿಕ್ರಿಯೆ

Last Updated : Mar 15, 2022, 2:05 PM IST

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.