ETV Bharat / state

ಸಿಎಂ ಹೆಚ್​ಡಿಕೆ ವಿರುದ್ಧ ಸಂಸದ ಉಮೇಶ್​​​​ ಜಾಧವ್​​​​ ವಾಗ್ದಾಳಿ

ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಕಲಬುರಗಿ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಡಾ. ಉಮೇಶ್​​ ಜಾಧವ್​​ ವಾಗ್ದಾಳಿ ನಡೆಸಿದ್ದಾರೆ.

author img

By

Published : Jun 8, 2019, 7:47 PM IST

ಸಿಎಂ ಹೆಚ್​ಡಿಕೆ ವಿರುದ್ಧ ಸಂಸದ ಜಾಧವ್ ವಾಗ್ದಾಳಿ

ಯಾದಗಿರಿ: ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಕಲಬುರಗಿ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಡಾ. ಉಮೇಶ್​​ ಜಾಧವ್​​​ ವಾಗ್ದಾಳಿ ನಡೆಸಿದ್ದಾರೆ.

ಯಾದಗಿರಿ ಜಿಲ್ಲಾ ಬರ ಪರಿಶೀಲನೆಗೆ ಆಗಮಿಸಿದ್ದ ಅವರು ಸಿಎಂ ಹೆಚ್​ಡಿಕೆ ವಿರುದ್ಧ ಕಿಡಿಕಾರಿದ್ರು. ಜಿಲ್ಲೆಯ ಗುರುಮಿಠಕಲ್ ವಿಧಾನಸಭಾ ಕ್ಷೇತ್ರದಲ್ಲಿ ಸಿಎಂ‌ ಕುಮಾರಸ್ವಾಮಿ ಬರುವ ದಿನಗಳಲ್ಲಿ ವಾಸ್ತವ್ಯ ಹೂಡಲಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ವ್ಯಂಗವಾಗಿ ಮಾತನಾಡಿದ್ರು. ಸಿಎಂ ಕುಮಾರಸ್ವಾಮಿ ಬರ ಆವರಿಸಿದ ಸಂದರ್ಭದಲ್ಲಿ ಗುರುಮಿಠಕಲ್​​ ಕ್ಷೇತ್ರದಲ್ಲಿ ಆಗಮಿಸಿ ಬರ ಪರಶೀಲನೆ ಮಾಡದೇ ಈಗ ನಾಮಕವಾಸ್ತೆಗೆ ವಾಸ್ತವ್ಯ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಿಸಿಲಿದ್ದಾಗ ಜಿಲ್ಲೆಯಲ್ಲಿ ವಾಸ್ತವ್ಯ ಮಾಡದೆ ಮಳೆ ಬರುವ ಸಮಯದಲ್ಲಿ ಏನು ಬರ ಪರಿಶೀಲನೆ ಮಾಡ್ತಾರೆ ಎಂದು ವ್ಯಂಗ್ಯವಾಗಿ ಪ್ರಶ್ನಿಸಿದ್ರು.

ಸಿಎಂ ಹೆಚ್​ಡಿಕೆ ವಿರುದ್ಧ ಸಂಸದ ಜಾಧವ್ ವಾಗ್ದಾಳಿ

ಮೈತ್ರಿ ಸರ್ಕಾರವನ್ನು ಕೆಡವಲು ಬಿಜೆಪಿ ಪಕ್ಷ ಯಾವುದೇ ತಂತ್ರಗಾರಿಕೆ ಮಾಡುತ್ತಿಲ್ಲ. ಮಾಜಿ ಸಿಎಂ ಸಿದ್ದರಾಮಯ್ಯ ಒಬ್ಬ ಸುಳ್ಳು ರಾಜಕಾರಣಿ. ಕಾಂಗ್ರೆಸ್ ನಾಯಕರನ್ನು ಖರೀದಿ ಮಾಡಿ ಬಿಜೆಪಿಯವರು ಸರ್ಕಾರ ಕೆಡುವುತ್ತಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾದ ಮಾಡ್ತಿದ್ದಾರೆ. ಅದು ಅವರ ಭ್ರಮೆ ಎಂದು ಸಂಸದ ಉಮೇಶ್​​ ಜಾಧವ್​ ಟೀಕಿಸಿದರು. ನಾವು ಯಾವ ನಾಯಕರನ್ನು ಸಂಪರ್ಕಿಸಿಲ್ಲ. ಸಂಪರ್ಕ ಮಾಡುವುದೂ ಇಲ್ಲ. ನಾವು ಮೈತ್ರಿ ಸರ್ಕಾರಕ್ಕೆ ಯಾವುದೇ ತೊಂದ್ರೆ ಕೊಡುವುದಿಲ್ಲ. ಸ್ವಲ್ಪ ದಿನದಲ್ಲಿ ಮೈತ್ರಿ ಸರ್ಕಾರ ತನ್ನಿಂದ ತಾನೇ ಪತನವಾಗಲಿದೆ ಎಂದು ಮೈತ್ರಿ ನಾಯಕರಿಗೆ ಪರೋಕ್ಷವಾಗಿ ತಿರುಗೇಟು ನೀಡಿದ್ರು.

ಯಾದಗಿರಿ: ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಕಲಬುರಗಿ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಡಾ. ಉಮೇಶ್​​ ಜಾಧವ್​​​ ವಾಗ್ದಾಳಿ ನಡೆಸಿದ್ದಾರೆ.

ಯಾದಗಿರಿ ಜಿಲ್ಲಾ ಬರ ಪರಿಶೀಲನೆಗೆ ಆಗಮಿಸಿದ್ದ ಅವರು ಸಿಎಂ ಹೆಚ್​ಡಿಕೆ ವಿರುದ್ಧ ಕಿಡಿಕಾರಿದ್ರು. ಜಿಲ್ಲೆಯ ಗುರುಮಿಠಕಲ್ ವಿಧಾನಸಭಾ ಕ್ಷೇತ್ರದಲ್ಲಿ ಸಿಎಂ‌ ಕುಮಾರಸ್ವಾಮಿ ಬರುವ ದಿನಗಳಲ್ಲಿ ವಾಸ್ತವ್ಯ ಹೂಡಲಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ವ್ಯಂಗವಾಗಿ ಮಾತನಾಡಿದ್ರು. ಸಿಎಂ ಕುಮಾರಸ್ವಾಮಿ ಬರ ಆವರಿಸಿದ ಸಂದರ್ಭದಲ್ಲಿ ಗುರುಮಿಠಕಲ್​​ ಕ್ಷೇತ್ರದಲ್ಲಿ ಆಗಮಿಸಿ ಬರ ಪರಶೀಲನೆ ಮಾಡದೇ ಈಗ ನಾಮಕವಾಸ್ತೆಗೆ ವಾಸ್ತವ್ಯ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಿಸಿಲಿದ್ದಾಗ ಜಿಲ್ಲೆಯಲ್ಲಿ ವಾಸ್ತವ್ಯ ಮಾಡದೆ ಮಳೆ ಬರುವ ಸಮಯದಲ್ಲಿ ಏನು ಬರ ಪರಿಶೀಲನೆ ಮಾಡ್ತಾರೆ ಎಂದು ವ್ಯಂಗ್ಯವಾಗಿ ಪ್ರಶ್ನಿಸಿದ್ರು.

ಸಿಎಂ ಹೆಚ್​ಡಿಕೆ ವಿರುದ್ಧ ಸಂಸದ ಜಾಧವ್ ವಾಗ್ದಾಳಿ

ಮೈತ್ರಿ ಸರ್ಕಾರವನ್ನು ಕೆಡವಲು ಬಿಜೆಪಿ ಪಕ್ಷ ಯಾವುದೇ ತಂತ್ರಗಾರಿಕೆ ಮಾಡುತ್ತಿಲ್ಲ. ಮಾಜಿ ಸಿಎಂ ಸಿದ್ದರಾಮಯ್ಯ ಒಬ್ಬ ಸುಳ್ಳು ರಾಜಕಾರಣಿ. ಕಾಂಗ್ರೆಸ್ ನಾಯಕರನ್ನು ಖರೀದಿ ಮಾಡಿ ಬಿಜೆಪಿಯವರು ಸರ್ಕಾರ ಕೆಡುವುತ್ತಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾದ ಮಾಡ್ತಿದ್ದಾರೆ. ಅದು ಅವರ ಭ್ರಮೆ ಎಂದು ಸಂಸದ ಉಮೇಶ್​​ ಜಾಧವ್​ ಟೀಕಿಸಿದರು. ನಾವು ಯಾವ ನಾಯಕರನ್ನು ಸಂಪರ್ಕಿಸಿಲ್ಲ. ಸಂಪರ್ಕ ಮಾಡುವುದೂ ಇಲ್ಲ. ನಾವು ಮೈತ್ರಿ ಸರ್ಕಾರಕ್ಕೆ ಯಾವುದೇ ತೊಂದ್ರೆ ಕೊಡುವುದಿಲ್ಲ. ಸ್ವಲ್ಪ ದಿನದಲ್ಲಿ ಮೈತ್ರಿ ಸರ್ಕಾರ ತನ್ನಿಂದ ತಾನೇ ಪತನವಾಗಲಿದೆ ಎಂದು ಮೈತ್ರಿ ನಾಯಕರಿಗೆ ಪರೋಕ್ಷವಾಗಿ ತಿರುಗೇಟು ನೀಡಿದ್ರು.

Intro:ಸ್ಥಳ : ಯಾದಗಿರಿ
ಫಾರ್ಮೆಟ : ಎ ವಿ
ಸ್ಲಗ್ : ಸಿ ಎಂ ಕುಮಾರಸ್ವಾಮಿ ವಿರುದ್ಧ ಸಂಸದ ಜಾಧವ ವಾಗ್ದಾಳಿ.

ನಿರೂಪಕ : ರಾಜ್ಯದ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಕಲಬುರಗಿ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಡಾ.ಉಮೇಶ ಜಾಧವ ವಾಗ್ದಾಳಿ ನಡೆಸಿದ್ದಾರೆ.

ಯಾದಗಿರ ಜಿಲ್ಲಾ ಬರ ಪರಿಶೀಲನಗೆ ಆಗಮಿಸಿದ ಅವರು ಕುಮಾರಸ್ವಾಮಿ ವಿರುದ್ಧ ಕಿಡಿಕಾರಿ ಜಿಲ್ಲೆಯ ಗುರುಮಿಠಕಲ್ ವಿಧಾನಸಭಾ ಕ್ಷೇತ್ರದಲ್ಲಿ ಸಿ ಎಂ‌ ಕುಮಾರಸ್ವಾಮಿ ಬರುವ ದಿನಗಳಲ್ಲಿ ವಾಸ್ತವ್ಯ ಹೂಡಲಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ವ್ಯಂಗವಾಗಿ ಮಾತನಾಡಿದ್ದಾರೆ.

ಸಿ ಎಂ ಕುಮಾರಸ್ವಾಮಿ ಬರ ಆವರಿಸಿದ ಸಂದರ್ಭದಲ್ಲಿ ಜಿಲ್ಲೆಗೆ ಆಗಮಿಸಿ ಬರ ಪರಶೀಲನೆ ಮಾಡದೆ ಗುರುಮಿಠಕಲ ಕ್ಷೇತ್ರದಲ್ಲಿ ಪ್ರಸ್ತುತ್ ನಾಮಕವಾಸ್ತೆ ವಾಸ್ತವ್ಯ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಿಸಿಲುವಿರುವ ಸಮಯದಲ್ಲಿ ಜಿಲ್ಲೆಯಲ್ಲಿ ವಾಸ್ತವ್ಯ ಮಾಡದೆ ಮಳೆ ಬರುವ ಸಮಯದಲ್ಲಿ ಏನು ಬರಪರಿಶೀಲನೆ ಮಾಡತ್ತಾರೆ ಎಂದು ವ್ಯಂಗವಾಗಿ ಪ್ರಶ್ನಿಸಿದರು.

ಸ್ವಲ್ಪ ದಿನಗಳಲ್ಲಿ ಒಳ್ಳೆಯ ದಿನಗಳು ಬರಲಿದ್ದು ರಾಜ್ಯದ ರೈತರಿಗೆ ಒಳ್ಳೆದಾಗಲಿದೆ ಎಂದು ಪರೋಕ್ಷವಾಗಿ ಸರಕಾರ ಪತವಾಗಲಿದೆ ಎಂದು ಉಮೇಶ ಜಾಧವ ಭವಿಷ್ಯ ನುಡಿದರು.
ಮೈತ್ರಿ ಸರಕಾರವನ್ನು ಕೆಡವಲು ಬಿಜೆಪಿ ಪಕ್ಷವು ಯಾವುದೆ ತಂತ್ರಗಾರಿ ಮಾಡುತ್ತಿಲ್ಲ . ಕಾಂಗ್ರೆಸ್ ನಾಯಕರನ್ನು ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತಿಲ್ಲ. ಬಂದ್ರೂ ಅವ್ರಗೆ ಹೈಕಮಾಂಡ ಅಂತೀಮ ತೀರ್ಮಾಣ ತೆಗೆದುಕೊಳ್ಳುತ್ತೆ .




Body:ಮಾಜಿ ಸಿ ಎಂ ಸಿದ್ದರಾಮಯ್ಯ ಅವರೊಬ್ಬ ಸುಳ್ಳ ರಾಜಕಾರಣೆ‌ . ಕಾಂಗ್ರೆಸ್ ನಾಯಕರನ್ನು ಖರೀದಿ ಮಾಡಿ ಸರಕಾರ ಕೆಡುತ್ತಿದ್ದಾರೆ ಎಂದು ಮಾಜಿ ಸಿ ಎಂ ಸಿದ್ದರಾಮಯ್ಯರ ವಾದವಾದರೆ ಅವರ ಭ್ರಮೆ ಎಂದು ಸಂಸದ ಉಮೇಶ ಜಾಧವ ಟೀಕಿಸಿದರು.




Conclusion:ನಾವು ಯಾವ ನಾಯಕರನ್ನು ಸಂಪರ್ಕಿಸಿಲ್ಲ. ಸಂಪರ್ಕಮಾಡುವುದು ಇಲ್ಲ. ನಾವು ಮೈತ್ರಿ ಸರಕಾರಕ್ಕೆ ಯಾವುದೆ ತೊಂದ್ರೆ ಕೊಡುವುದಿಲ್ಲ. ಸ್ವಲ್ಪ ದಿನದಲ್ಲಿ ಮೈತ್ರಿ ಸರಕಾರವು ತನ್ನಿಂದತಾನೆ ಪತನವಾಗಲಿದೆ ಎಂದು ಸಿ ಎಂ ಕುಮಾರಸ್ವಾಮಿಗೆ ಪರೋಕ್ಷವಾಗಿ ತೀರುಗೇಟು ನೀಡಿದರು.

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.