ETV Bharat / state

ರಾಹುಲ್ ಗಾಂಧಿ ಅವಾಚ್ಯ ನಿಂದನೆ ಬಿಟ್ಟು ಸಭ್ಯತೆ ಕಲಿಯಲಿ: ಸಂಸದ ತೇಜಸ್ವಿ ಸೂರ್ಯ

author img

By

Published : Mar 23, 2023, 10:33 PM IST

Updated : Mar 23, 2023, 10:59 PM IST

2019ರಲ್ಲಿ ಮೋದಿ ವಿರುದ್ದ ರಾಹುಲ್ ಗಾಂಧಿ ಅವಮಾನ ರೀತಿ ಮಾತನಾಡಿದ್ದಕ್ಕೆ ಸೂರತ್ ಕೋರ್ಟ್ ಶಿಕ್ಷೆ ವಿಧಿಸಿದೆ. ಮೋದಿ ವಿರುದ್ಧ ಪದೇ ಪದೆ ಅವಾಚ್ಯ ಶಬ್ದ ಬಳಸಿ ಮಾತನಾಡುತ್ತಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಯಾವ ರೀತಿ ಮಾತನಾಡಬೇಕು ಈಗಲಾದರೂ ಕಲಿಯಲಿ: ಸಂಸದ ತೇಜಸ್ವಿ ಸೂರ್ಯ

mp tejasvi surya
ಸಂಸದ ತೇಜಸ್ವಿ ಸೂರ್ಯ
ಸಂಸದ ತೇಜಸ್ವಿ ಸೂರ್ಯ

ಯಾದಗಿರಿ: ಮುಂದಿನ ಚುನಾವಣೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಿಸಬೇಕು. ರಾಜ್ಯದಲ್ಲಿ ಬಿಜೆಪಿ ಪರವಾದ ಅಲೆ ಜೋರಾಗಿದೆ ಎಂದು ಬಿಜೆಪಿ ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಹಾಗೂ ಸಂಸದ ತೇಜಸ್ವಿ ಸೂರ್ಯ ಹೇಳಿದರು. ಇಲ್ಲಿನ ಬಾಲಾಜಿ ಕಲ್ಯಾಣ ಮಂಟಪದಲ್ಲಿ ಗುರುವಾರ ನಡೆದ ಬಿಜೆಪಿ ಯುವ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಮೈಸೂರು- ಬೆಂಗಳೂರು ಎಕ್ಸಪ್ರೆಸ್ ವೇ ಮಾಡಿದ್ದು ಬಿಜೆಪಿ ಹಾಗೂ ಸಂಸದ ಪ್ರತಾಪಸಿಂಹ ಮಾತ್ರ. ಅದು ಮಾಡಿದ್ದು ನಾವು ನೀವು ಎಂದು ಕಾಂಗ್ರೆಸ್ ಹಾಗೂ ಜೆಡಿಎಸ್‌ನವರು ಮುಂದೆ ಬಂದರು.

ಆದರೆ, ಮೊನ್ನೆ ಮಳೆ ಬಂದು ರಸ್ತೆ ಮೇಲೆ ನೀರು ನಿಂತಿದ್ದಾಗ ಈ ವಿಪಕ್ಷಗಳು ಬಿಜೆಪಿಯ ಯೋಜನೆ ಸರಿಯಿಲ್ಲ ಎಂದು ಟೀಕಿಸಿದ್ದರು. ಒಳ್ಳೆಯದಿದ್ದರೆ ತಮ್ಮದೆಂದು, ಒಂದಿಷ್ಟು ಲೋಪ ಕಂಡುಬಂದರೆ ಅದು ಬಿಜೆಪಿಯದ್ದೆಂದು ಟೀಕಿಸುವ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ಹಣೆಬರಹವೇ ಸರಿಯಿಲ್ಲ ಎಂದು ಸೂರ್ಯ ವಾಗ್ದಾಳಿ ನಡೆಸಿದರು.

ಕೋವಿಡ್ ಸಂದರ್ಭದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್‌ನವರು ಇಲ್ಲಿ ಬಂದಿರಲಿಲ್ಲ. ಅವರೆಲ್ಲ ಕ್ವಾರೈಂಟನ್‌ನಲ್ಲಿ ಇದ್ದರು. ಆಗ ಬಿಜೆಪಿ ಯುವ ಕಾರ್ಯಕರ್ತರು ಕೋವಿಡ್ ಸಂತ್ರಸ್ತರಿಗೆ ಸಹಾಯ ಮಾಡಲು ಬಂದರು. ಪ್ರಕೃತಿಯ ವಿಕೋಪದ ಸಂದರ್ಭದಲ್ಲಿಯೂ ಕೂಡಾ ಬಿಜೆಪಿ ಕಾರ್ಯಕರ್ತರು ನೆರವಿಗೆ ಧಾವಿಸಿದ್ದಾರೆ ಎಂದು ಪ್ರಶಂಸಿಸಿದರು.

ಮೋದಿ ವಿರುದ್ಧ ನಿಂದನೆಗೆ ಶಿಕ್ಷೆ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನಿಂದನೆ ಮಾಡಿದ ಆರೋಪದಡಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಶಿಕ್ಷೆ ಪ್ರಕಟ ಕುರಿತು ಬಗ್ಗೆ ಮಾತನಾಡಿದ ಅವರು, ಸೂರತ್ ಕೋರ್ಟ್ ನೀಡಿರುವ ಆದೇಶವನ್ನು ಸ್ವಾಗತಿಸುತ್ತೇನೆ. ರಾಹುಲ್ ಗಾಂಧಿ ಇಂದಿನ ಕೇಸ್ ಸೇರಿದಂತೆ ಎರಡು ಪ್ರಕರಣಗಳಲ್ಲಿ ಜಾಮೀನಿನ ಮೇಲೆ ಹೊರಗಿದ್ದಾರೆ.

ನ್ಯಾಷನಲ್ ಹೆರಾಲ್ಡ್ ಭ್ರಷ್ಟಾಚಾರದ ಪ್ರಕರಣ ವಿಚಾರಣೆ ಹಂತದಲ್ಲಿದೆ. ಅದರಲ್ಲೂ ಅವರು ಜಾಮೀನಿನ ಮೇಲೆ ಹೊರಗಿದ್ದಾರೆ. ಮೋದಿ ವಿರುದ್ಧ ಹಗುರವಾಗಿ, ಅವಮಾನವಾಗುವಂತೆ ಮಾತನಾಡಿದ್ದಕ್ಕೆ ಸೂರತ್ ಕೋರ್ಟ್ ಶಿಕ್ಷೆ ಕೊಟ್ಟಿದೆ ಎಂದು ಸ್ಪಷ್ಟೀಕರಣ ನೀಡಿದರು.

ಸಭ್ಯತೆ ಕಲಿಯಲಿ- ಸಂಸದ ತೇಜಸ್ವಿ ಸೂರ್ಯ: ರಾಹುಲ್ ಗಾಂಧಿ ತಪ್ಪನ್ನೇ ಪುನರಾವರ್ತನೆ ಮಾಡುತ್ತಿದ್ದಾರೆ. ಮೋದಿ ಬಗ್ಗೆ ಪದೇ ಪದೆ ಅವಾಚ್ಯ ಶಬ್ದಗಳನ್ನು ಬಳಸಿ ಟೀಕಿಸುತ್ತಾರೆ. ಮೋದಿ ಗುಜರಾತ್ ಮುಖ್ಯಮಂತ್ರಿ ಆಗಿದ್ದಾಗ ‘ಮೌತ್ ಕಾ ಸೌದಾಗಾರ್’ ಎಂದು ಸೋನಿಯಾ ಗಾಂಧಿ ಹೇಳಿದ್ದರು. ಮಣಿಶಂಕರ್ ಅಯ್ಯರ್ ಮೋದಿಯನ್ನು ನೀಚ ಎಂಬುದಾಗಿ ಕರೆದಿದ್ದರು. 2019ರಲ್ಲಿ ರಾಹುಲ್ ಗಾಂಧಿ ಅದೇ ರೀತಿ ಮಾತನಾಡಿದ್ದಕ್ಕೆ ಕೋರ್ಟ್ ಇವತ್ತು ಶಿಕ್ಷೆ ಕೊಟ್ಟಿದೆ. ಈಗಲಾದರೂ ಪಶ್ಚಾತ್ತಾಪ ಪಟ್ಟು, ಸಾರ್ವಜನಿಕ ಜೀವನದಲ್ಲಿ ಇರಬೇಕಾದ ಸಭ್ಯತೆ ಕಲಿಯಲಿ ಎಂದು ಅಭಿಪ್ರಾಯ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದರು.

ಕಾಂಗ್ರೇಸ್ ಬರೋದು ಗ್ಯಾರಂಟಿನೆ ಇಲ್ಲ- ತೇಜಸ್ವಿ ಸೂರ್ಯ: ಬಿಜೆಪಿ ಯುವಸಮಾವೇಶದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸಂಸದ ತೇಜಸ್ವಿ ಸೂರ್ಯ, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಉಚಿತ ಕೊಡುಗೆಗಳ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ತೇಜಸ್ವಿ ಸೂರ್ಯ, ಕಾಂಗ್ರೆಸ್ ಅಧಿಕಾರಕ್ಕೆ ಬರೋದೇ ಗ್ಯಾರಂಟಿ ಇಲ್ಲ. ಅವರ ಗ್ಯಾರಂಟಿ ಕಾರ್ಡ್ ಭರವಸೆ ಸುಳ್ಳು ಎಂದು ಕಿಡಿ ಕಾರಿದರು. 2024ರ ಚುನಾವಣೆ ನಂತರ ದೇಶದಲ್ಲಿ ಕಾಂಗ್ರೆಸ್ ಒಂದು ಪಕ್ಷವಾಗಿ ಉಳಿಯುವದೇ ಗ್ಯಾರಂಟಿ ಇಲ್ಲ. ಇನ್ನು, ಕಾಂಗ್ರೆಸ್ ಕೊಟ್ಟಿರುವ ಗ್ಯಾರಂಟಿ ಕಾರ್ಡ್​ಗಳಿಗೆ ಹೇಗೆ ಜನ ನಂಬುತ್ತಾರೆ ಎಂದು ಟೀಕಿಸಿದರು.

ಇದನ್ನೂಓದಿ:ರಾಜ್ಯ ಸರ್ಕಾರ ಉದ್ಯೋಗ ಬದಲು, ನಿರುದ್ಯೋಗ ಸೃಷ್ಟಿಸಿದೆ: ಸಿದ್ದರಾಮಯ್ಯ

ಸಂಸದ ತೇಜಸ್ವಿ ಸೂರ್ಯ

ಯಾದಗಿರಿ: ಮುಂದಿನ ಚುನಾವಣೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಿಸಬೇಕು. ರಾಜ್ಯದಲ್ಲಿ ಬಿಜೆಪಿ ಪರವಾದ ಅಲೆ ಜೋರಾಗಿದೆ ಎಂದು ಬಿಜೆಪಿ ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಹಾಗೂ ಸಂಸದ ತೇಜಸ್ವಿ ಸೂರ್ಯ ಹೇಳಿದರು. ಇಲ್ಲಿನ ಬಾಲಾಜಿ ಕಲ್ಯಾಣ ಮಂಟಪದಲ್ಲಿ ಗುರುವಾರ ನಡೆದ ಬಿಜೆಪಿ ಯುವ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಮೈಸೂರು- ಬೆಂಗಳೂರು ಎಕ್ಸಪ್ರೆಸ್ ವೇ ಮಾಡಿದ್ದು ಬಿಜೆಪಿ ಹಾಗೂ ಸಂಸದ ಪ್ರತಾಪಸಿಂಹ ಮಾತ್ರ. ಅದು ಮಾಡಿದ್ದು ನಾವು ನೀವು ಎಂದು ಕಾಂಗ್ರೆಸ್ ಹಾಗೂ ಜೆಡಿಎಸ್‌ನವರು ಮುಂದೆ ಬಂದರು.

ಆದರೆ, ಮೊನ್ನೆ ಮಳೆ ಬಂದು ರಸ್ತೆ ಮೇಲೆ ನೀರು ನಿಂತಿದ್ದಾಗ ಈ ವಿಪಕ್ಷಗಳು ಬಿಜೆಪಿಯ ಯೋಜನೆ ಸರಿಯಿಲ್ಲ ಎಂದು ಟೀಕಿಸಿದ್ದರು. ಒಳ್ಳೆಯದಿದ್ದರೆ ತಮ್ಮದೆಂದು, ಒಂದಿಷ್ಟು ಲೋಪ ಕಂಡುಬಂದರೆ ಅದು ಬಿಜೆಪಿಯದ್ದೆಂದು ಟೀಕಿಸುವ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ಹಣೆಬರಹವೇ ಸರಿಯಿಲ್ಲ ಎಂದು ಸೂರ್ಯ ವಾಗ್ದಾಳಿ ನಡೆಸಿದರು.

ಕೋವಿಡ್ ಸಂದರ್ಭದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್‌ನವರು ಇಲ್ಲಿ ಬಂದಿರಲಿಲ್ಲ. ಅವರೆಲ್ಲ ಕ್ವಾರೈಂಟನ್‌ನಲ್ಲಿ ಇದ್ದರು. ಆಗ ಬಿಜೆಪಿ ಯುವ ಕಾರ್ಯಕರ್ತರು ಕೋವಿಡ್ ಸಂತ್ರಸ್ತರಿಗೆ ಸಹಾಯ ಮಾಡಲು ಬಂದರು. ಪ್ರಕೃತಿಯ ವಿಕೋಪದ ಸಂದರ್ಭದಲ್ಲಿಯೂ ಕೂಡಾ ಬಿಜೆಪಿ ಕಾರ್ಯಕರ್ತರು ನೆರವಿಗೆ ಧಾವಿಸಿದ್ದಾರೆ ಎಂದು ಪ್ರಶಂಸಿಸಿದರು.

ಮೋದಿ ವಿರುದ್ಧ ನಿಂದನೆಗೆ ಶಿಕ್ಷೆ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನಿಂದನೆ ಮಾಡಿದ ಆರೋಪದಡಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಶಿಕ್ಷೆ ಪ್ರಕಟ ಕುರಿತು ಬಗ್ಗೆ ಮಾತನಾಡಿದ ಅವರು, ಸೂರತ್ ಕೋರ್ಟ್ ನೀಡಿರುವ ಆದೇಶವನ್ನು ಸ್ವಾಗತಿಸುತ್ತೇನೆ. ರಾಹುಲ್ ಗಾಂಧಿ ಇಂದಿನ ಕೇಸ್ ಸೇರಿದಂತೆ ಎರಡು ಪ್ರಕರಣಗಳಲ್ಲಿ ಜಾಮೀನಿನ ಮೇಲೆ ಹೊರಗಿದ್ದಾರೆ.

ನ್ಯಾಷನಲ್ ಹೆರಾಲ್ಡ್ ಭ್ರಷ್ಟಾಚಾರದ ಪ್ರಕರಣ ವಿಚಾರಣೆ ಹಂತದಲ್ಲಿದೆ. ಅದರಲ್ಲೂ ಅವರು ಜಾಮೀನಿನ ಮೇಲೆ ಹೊರಗಿದ್ದಾರೆ. ಮೋದಿ ವಿರುದ್ಧ ಹಗುರವಾಗಿ, ಅವಮಾನವಾಗುವಂತೆ ಮಾತನಾಡಿದ್ದಕ್ಕೆ ಸೂರತ್ ಕೋರ್ಟ್ ಶಿಕ್ಷೆ ಕೊಟ್ಟಿದೆ ಎಂದು ಸ್ಪಷ್ಟೀಕರಣ ನೀಡಿದರು.

ಸಭ್ಯತೆ ಕಲಿಯಲಿ- ಸಂಸದ ತೇಜಸ್ವಿ ಸೂರ್ಯ: ರಾಹುಲ್ ಗಾಂಧಿ ತಪ್ಪನ್ನೇ ಪುನರಾವರ್ತನೆ ಮಾಡುತ್ತಿದ್ದಾರೆ. ಮೋದಿ ಬಗ್ಗೆ ಪದೇ ಪದೆ ಅವಾಚ್ಯ ಶಬ್ದಗಳನ್ನು ಬಳಸಿ ಟೀಕಿಸುತ್ತಾರೆ. ಮೋದಿ ಗುಜರಾತ್ ಮುಖ್ಯಮಂತ್ರಿ ಆಗಿದ್ದಾಗ ‘ಮೌತ್ ಕಾ ಸೌದಾಗಾರ್’ ಎಂದು ಸೋನಿಯಾ ಗಾಂಧಿ ಹೇಳಿದ್ದರು. ಮಣಿಶಂಕರ್ ಅಯ್ಯರ್ ಮೋದಿಯನ್ನು ನೀಚ ಎಂಬುದಾಗಿ ಕರೆದಿದ್ದರು. 2019ರಲ್ಲಿ ರಾಹುಲ್ ಗಾಂಧಿ ಅದೇ ರೀತಿ ಮಾತನಾಡಿದ್ದಕ್ಕೆ ಕೋರ್ಟ್ ಇವತ್ತು ಶಿಕ್ಷೆ ಕೊಟ್ಟಿದೆ. ಈಗಲಾದರೂ ಪಶ್ಚಾತ್ತಾಪ ಪಟ್ಟು, ಸಾರ್ವಜನಿಕ ಜೀವನದಲ್ಲಿ ಇರಬೇಕಾದ ಸಭ್ಯತೆ ಕಲಿಯಲಿ ಎಂದು ಅಭಿಪ್ರಾಯ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದರು.

ಕಾಂಗ್ರೇಸ್ ಬರೋದು ಗ್ಯಾರಂಟಿನೆ ಇಲ್ಲ- ತೇಜಸ್ವಿ ಸೂರ್ಯ: ಬಿಜೆಪಿ ಯುವಸಮಾವೇಶದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸಂಸದ ತೇಜಸ್ವಿ ಸೂರ್ಯ, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಉಚಿತ ಕೊಡುಗೆಗಳ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ತೇಜಸ್ವಿ ಸೂರ್ಯ, ಕಾಂಗ್ರೆಸ್ ಅಧಿಕಾರಕ್ಕೆ ಬರೋದೇ ಗ್ಯಾರಂಟಿ ಇಲ್ಲ. ಅವರ ಗ್ಯಾರಂಟಿ ಕಾರ್ಡ್ ಭರವಸೆ ಸುಳ್ಳು ಎಂದು ಕಿಡಿ ಕಾರಿದರು. 2024ರ ಚುನಾವಣೆ ನಂತರ ದೇಶದಲ್ಲಿ ಕಾಂಗ್ರೆಸ್ ಒಂದು ಪಕ್ಷವಾಗಿ ಉಳಿಯುವದೇ ಗ್ಯಾರಂಟಿ ಇಲ್ಲ. ಇನ್ನು, ಕಾಂಗ್ರೆಸ್ ಕೊಟ್ಟಿರುವ ಗ್ಯಾರಂಟಿ ಕಾರ್ಡ್​ಗಳಿಗೆ ಹೇಗೆ ಜನ ನಂಬುತ್ತಾರೆ ಎಂದು ಟೀಕಿಸಿದರು.

ಇದನ್ನೂಓದಿ:ರಾಜ್ಯ ಸರ್ಕಾರ ಉದ್ಯೋಗ ಬದಲು, ನಿರುದ್ಯೋಗ ಸೃಷ್ಟಿಸಿದೆ: ಸಿದ್ದರಾಮಯ್ಯ

Last Updated : Mar 23, 2023, 10:59 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.