ಯಾದಗಿರಿ: ದ್ವಿಚಕ್ರ ವಾಹನಕ್ಕೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಬೈಕ್ ಸವಾರ ಮೃತಪಟ್ಟ ಘಟನೆ ಯಾದಗಿರಿ ತಾಲೂಕಿನ ಆರ್. ಹೊಸಳ್ಳಿ ಗ್ರಾಮದ ಗೇಟ್ ಬಳಿ ನಡೆದಿದೆ.
ಬೈಕ್ ಹಿಂಬದಿ ಕುಳಿತಿದ್ದ ಬಾಲಕಿಗೆ ಗಂಭೀರವಾದ ಗಾಯಗಳಾಗಿವೆ. ಕೊಂಕಲ್ ಗ್ರಾಮದ ನಿವಾಸಿ ಸಾಬಣ್ಣ ಗೌಡರ್ (53) ಎಂಬುವವರು ಮೃತಪಟ್ಟಿದ್ದಾರೆ.
ಮೊಮ್ಮಗಳೊಂದಿಗೆ ಸ್ವಗ್ರಾಮ ಕೊಂಕಲ್ನಿಂದ ಹಳಗೇರಾ ಗ್ರಾಮಕ್ಕೆ ಬರುತ್ತಿದ್ದ ಸಾಬಣ್ಣ ಅವರ ದ್ವಿಚಕ್ರ ವಾಹನಕ್ಕೆ ವೇಗದಲ್ಲಿ ಬಂದ ಲಾರಿ ಡಿಕ್ಕಿಹೊಡೆದಿದೆ. ತಲೆಗೆ ತೀವ್ರವಾದ ಪೆಟ್ಟು ಬಿದ್ದು ರಕ್ತಸ್ರಾವವಾಗಿ ಸವಾರ ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಬಾಲಕಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಲಾರಿ ಚಾಲಕನನ್ನು ವಶಕ್ಕೆ ಪಡೆದ ಗ್ರಾಮೀಣ ಠಾಣೆ ಪೊಲೀಸರು ವಿಚಾರಣೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.