ETV Bharat / state

ಯಾದಗಿರಿ: ಪ್ರವಾಹ ಪೀಡಿತ ಪ್ರದೇಶಗಳಿಗೆ ಸಚಿವ ಆರ್. ಅಶೋಕ್ ಭೇಟಿ

ಸಚಿವ ಆರ್.​ ಅಶೋಕ್ ಇಂದು ಯಾದಗಿರಿ ಜಿಲ್ಲೆಯ ಶಹಪುರ ತಾಲ್ಲೂಕಿನ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

author img

By

Published : Oct 16, 2020, 8:23 PM IST

R Ashok
ಸಚಿವ ಆರ್.ಅಶೋಕ್

ಯಾದಗಿರಿ: ಭೀಮಾ ನದಿ ಪ್ರವಾಹ ಪೀಡಿತ ಪ್ರದೇಶಗಳ ವೀಕ್ಷಣೆ ಮಾಡಲು ಯಾದಗಿರಿ ಜಿಲ್ಲೆಗೆ ಇಂದು ಕಂದಾಯ ಸಚಿವ ಆರ್ ಅಶೋಕ್​ ಭೇಟಿ ನೀಡಿ, ಬೋಟ್​ ಸಹಾಯದ ಮೂಲಕ ನೀರಿನಲ್ಲಿ ಜಲಾವೃತಗೊಂಡ ಗ್ರಾಮಗಳಿಗೆ ತೆರಳಿ ಅಲ್ಲಿನ ವಾಸ್ತವ ಸ್ಥಿತಿಗತಿ ಬಗ್ಗೆ ಪರಿಶೀಲನೆ ನಡೆಸಿದರು.

ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಸಚಿವ ಆರ್.ಅಶೋಕ್

ಜಿಲ್ಲೆಯ ಶಹಪುರ ತಾಲ್ಲೂಕಿನ ಪ್ರವಾಹ ಪೀಡಿತ ಪ್ರದೇಶಗಳ ವೀಕ್ಷಣೆಗೆ ಭೇಟಿ ನೀಡಿದ ಸಚಿವ ಅಶೋಕ್​, ಎನ್​ಡಿಆರ್​ಎಫ್​ ತಂಡದ ಬೋಟ್ ಮೂಲಕ ಸಂಪೂರ್ಣವಾಗಿ ಜಲಾವೃತಗೊಂಡ ರೋಜಾ ಗ್ರಾಮಕ್ಕೆ ತೆರಳಿ ಅಲ್ಲಿನ‌ ಸ್ಥಿತಿಗತಿ ಅವಲೋಕಿಸಿದರು. ನಂತರ ಹುಸರಗುಂಡಗಿ, ನಾಯ್ಕಲ್ ಸೇರಿದಂತೆ ಹಲವು ಗ್ರಾಮಗಳಲ್ಲಾದ ಹಾನಿ ‌ವೀಕ್ಷಣೆ ಮಾಡಿದರು.

ಇದೇ ವೇಳೆ ಸಚಿವ ಆರ್ ಅಶೋಕ್​ಗೆ ಶಾಸಕರಾದ ದತ್ತಾತ್ರೇಯ ಪಾಟೀಲ್ ರೇವೂರ, ರಾಜುಗೌಡ ಸೇರಿದಂತೆ ಹಲವರು ಸಾಥ್ ನೀಡಿದರು.

ಯಾದಗಿರಿ: ಭೀಮಾ ನದಿ ಪ್ರವಾಹ ಪೀಡಿತ ಪ್ರದೇಶಗಳ ವೀಕ್ಷಣೆ ಮಾಡಲು ಯಾದಗಿರಿ ಜಿಲ್ಲೆಗೆ ಇಂದು ಕಂದಾಯ ಸಚಿವ ಆರ್ ಅಶೋಕ್​ ಭೇಟಿ ನೀಡಿ, ಬೋಟ್​ ಸಹಾಯದ ಮೂಲಕ ನೀರಿನಲ್ಲಿ ಜಲಾವೃತಗೊಂಡ ಗ್ರಾಮಗಳಿಗೆ ತೆರಳಿ ಅಲ್ಲಿನ ವಾಸ್ತವ ಸ್ಥಿತಿಗತಿ ಬಗ್ಗೆ ಪರಿಶೀಲನೆ ನಡೆಸಿದರು.

ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಸಚಿವ ಆರ್.ಅಶೋಕ್

ಜಿಲ್ಲೆಯ ಶಹಪುರ ತಾಲ್ಲೂಕಿನ ಪ್ರವಾಹ ಪೀಡಿತ ಪ್ರದೇಶಗಳ ವೀಕ್ಷಣೆಗೆ ಭೇಟಿ ನೀಡಿದ ಸಚಿವ ಅಶೋಕ್​, ಎನ್​ಡಿಆರ್​ಎಫ್​ ತಂಡದ ಬೋಟ್ ಮೂಲಕ ಸಂಪೂರ್ಣವಾಗಿ ಜಲಾವೃತಗೊಂಡ ರೋಜಾ ಗ್ರಾಮಕ್ಕೆ ತೆರಳಿ ಅಲ್ಲಿನ‌ ಸ್ಥಿತಿಗತಿ ಅವಲೋಕಿಸಿದರು. ನಂತರ ಹುಸರಗುಂಡಗಿ, ನಾಯ್ಕಲ್ ಸೇರಿದಂತೆ ಹಲವು ಗ್ರಾಮಗಳಲ್ಲಾದ ಹಾನಿ ‌ವೀಕ್ಷಣೆ ಮಾಡಿದರು.

ಇದೇ ವೇಳೆ ಸಚಿವ ಆರ್ ಅಶೋಕ್​ಗೆ ಶಾಸಕರಾದ ದತ್ತಾತ್ರೇಯ ಪಾಟೀಲ್ ರೇವೂರ, ರಾಜುಗೌಡ ಸೇರಿದಂತೆ ಹಲವರು ಸಾಥ್ ನೀಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.