ETV Bharat / state

ರಮೇಶ್ ಜಾರಕಿಹೊಳಿಗೆ ಕೊರೊನಾ ಆತಂಕ..ಕೆಬಿಜೆಎನ್​ಎಲ್ ಅಧಿಕಾರಿಗಳೊಂದಿಗಿನ ಸಭೆ ರದ್ದು

author img

By

Published : Jul 1, 2020, 10:30 PM IST

ಕೆಬಿಜೆಎನ್​ಎಲ್ ಅಧಿಕಾರಿ ಒಬ್ಬರಲ್ಲಿ ಕೊರೊನಾ ಸೋಂಕು ಪತ್ತೆ ಹಿನ್ನೆಲೆ, ಯಾದಗಿರಿ ಜಿಲ್ಲೆಯ ಶಹಾಪುರ ಪಟ್ಟಣದ ಹೊರಭಾಗದಲ್ಲಿನ ಭೀಮರಾಯನಗುಡಿಯ ಕೃಷಿ ಮಹಾವಿದ್ಯಾಲಯದಲ್ಲಿಂದು ಕೆಬಿಜೆಎನ್​ಎಲ್ ಅಧಿಕಾರಿಗಳೊಂದಿಗೆ ನಡೆಯಬೇಕಿದ್ದ ಸಭೆಯನ್ನ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ರದ್ದು ಮಾಡಿದ್ದಾರೆ.

Minister Ramesh Jarakiholi canceled meeting with KBJNL officials
ರಮೇಶ್ ಜಾರಕಿಹೊಳಿಗೆ ಕೊರೊನಾ ಆತಂಕ..ಕೆಬಿಜೆಎನ್​ಎಲ್ ಅಧಿಕಾರಿಗಳೊಂದಿಗಿನ ಸಭೆ ರದ್ದು

ಯಾದಗಿರಿ: ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿಗೆ ಕೊರೊನಾ ಭೀತಿ ಎದುರಾಗಿದ್ದು, ಇಂದು ಕೆಬಿಜೆಎನ್​ಎಲ್ (ಕೃಷ್ಣ ಭಾಗ್ಯ ಜಲ ನಿಗಮ ) ಅಧಿಕಾರಿಗಳೊಂದಿಗೆ ನಡೆಯಬೇಕಿದ್ದ ಸಭೆ ರದ್ದು ಮಾಡಿದ್ದಾರೆ.

ಜಿಲ್ಲೆಯ ಶಹಾಪುರ ಪಟ್ಟಣದ ಹೊರಭಾಗದಲ್ಲಿನ ಭೀಮರಾಯನಗುಡಿಯ ಕೃಷಿ ಮಹಾವಿದ್ಯಾಲಯದಲ್ಲಿಂದು ಕೆಬಿಜೆಎನ್​ಎಲ್ ಅಧಿಕಾರಿಗಳೊಂದಿಗೆ ಸಚಿವ ರಮೇಶ್ ಜಾರಕಿಹೋಳಿ ಮಧ್ಯಾಹ್ನ ಸಭೆ ನಡೆಸಬೇಕಾಗಿತ್ತು. ಕೆಬಿಜೆಎನ್​ಎಲ್ ಅಧಿಕಾರಿ ಒಬ್ಬರಲ್ಲಿ ಕೊರೊನಾ ಸೋಂಕು ಪತ್ತೆ ಹಿನ್ನೆಲೆ, ಸಚಿವರ ಸಭೆ ನಡೆಸುವ ಕಾರ್ಯಕ್ರಮ ರದ್ದು ಮಾಡಲಾಗಿದೆ.

ಸೋಂಕಿತ ಅಧಿಕಾರಿ ಜೂನ್​ 29ರಂದು ಭೀಮರಾಯನಗುಡಿಯ ಕೆಬಿಜೆಎನ್​ಎಲ್ ಕಚೇರಿಯಲ್ಲಿ ನಡೆದ ಪೂರ್ವ ಭಾವಿ ಸಭೆಯಲ್ಲಿ ಭಾಗಿಯಾಗಿದ್ದರು. ಹೀಗಾಗಿ ಸಭೆಯಲ್ಲಿ ಭಾಗವಹಿಸಿದ್ದ 15 ಅಧಿಕಾರಿಗಳನ್ನ ಹೋಂ ಕ್ವಾರಂಟೈನ್ ಮಾಡಲಾಗಿದೆ.

ಯಾದಗಿರಿ: ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿಗೆ ಕೊರೊನಾ ಭೀತಿ ಎದುರಾಗಿದ್ದು, ಇಂದು ಕೆಬಿಜೆಎನ್​ಎಲ್ (ಕೃಷ್ಣ ಭಾಗ್ಯ ಜಲ ನಿಗಮ ) ಅಧಿಕಾರಿಗಳೊಂದಿಗೆ ನಡೆಯಬೇಕಿದ್ದ ಸಭೆ ರದ್ದು ಮಾಡಿದ್ದಾರೆ.

ಜಿಲ್ಲೆಯ ಶಹಾಪುರ ಪಟ್ಟಣದ ಹೊರಭಾಗದಲ್ಲಿನ ಭೀಮರಾಯನಗುಡಿಯ ಕೃಷಿ ಮಹಾವಿದ್ಯಾಲಯದಲ್ಲಿಂದು ಕೆಬಿಜೆಎನ್​ಎಲ್ ಅಧಿಕಾರಿಗಳೊಂದಿಗೆ ಸಚಿವ ರಮೇಶ್ ಜಾರಕಿಹೋಳಿ ಮಧ್ಯಾಹ್ನ ಸಭೆ ನಡೆಸಬೇಕಾಗಿತ್ತು. ಕೆಬಿಜೆಎನ್​ಎಲ್ ಅಧಿಕಾರಿ ಒಬ್ಬರಲ್ಲಿ ಕೊರೊನಾ ಸೋಂಕು ಪತ್ತೆ ಹಿನ್ನೆಲೆ, ಸಚಿವರ ಸಭೆ ನಡೆಸುವ ಕಾರ್ಯಕ್ರಮ ರದ್ದು ಮಾಡಲಾಗಿದೆ.

ಸೋಂಕಿತ ಅಧಿಕಾರಿ ಜೂನ್​ 29ರಂದು ಭೀಮರಾಯನಗುಡಿಯ ಕೆಬಿಜೆಎನ್​ಎಲ್ ಕಚೇರಿಯಲ್ಲಿ ನಡೆದ ಪೂರ್ವ ಭಾವಿ ಸಭೆಯಲ್ಲಿ ಭಾಗಿಯಾಗಿದ್ದರು. ಹೀಗಾಗಿ ಸಭೆಯಲ್ಲಿ ಭಾಗವಹಿಸಿದ್ದ 15 ಅಧಿಕಾರಿಗಳನ್ನ ಹೋಂ ಕ್ವಾರಂಟೈನ್ ಮಾಡಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.