ETV Bharat / state

ಶಾಸಕ ರಾಜುಗೌಡ ಹುಟ್ಟುಹಬ್ಬದ ಬ್ಯಾನರ್ ಹರಿದು, ವಾಹನದ ಮೇಲೆ ಕಲ್ಲು ತೂರಾಟ! - ಕಾಂಗ್ರೆಸ್ ನ ಕಾರ್ಯಕರ್ತರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿದ್ದರ ಪ್ರತಿಕಾರವಾಗಿ ಹಲ್ಲೆ

ಸುರಪುರ ಕ್ಷೇತ್ರದ ಬಿಜೆಪಿ ಶಾಸಕ ರಾಜುಗೌಡ ಹುಟ್ಟುಹಬ್ಬದ ನಿಮಿತ್ತ ಬ್ಯಾನರ್ ಹಾಗೂ ಪೋಸ್ಟರ್ ಅಂಟಿಸಲು ತೆರಳುತ್ತಿದ್ದ ವಾಹನದ ಮೇಲೆ ಕೆಲ ಕಿಡಿಗೇಡಿಗಳು ಕಲ್ಲುಗಳಿಂದ ದಾಳಿ ನಡೆಸಿದ್ದಾರೆ. ಅಲ್ಲದೆ ರಾಜುಗೌಡ ಅವರ ಭಾವಚಿತ್ರವುಳ್ಳ ಬ್ಯಾನರ್​​ಗಳನ್ನು ಹರಿದು, ವಾಹನವನ್ನು ಜಖಂಗೊಳಿಸಿದ್ದಾರೆ.

mla-raju-gowdas-birthday-banner-torn-down-stone-pelted-on-the-vehicle
ಶಾಸಕ ರಾಜುಗೌಡ ಹುಟ್ಟು ಹಬ್ಬದ ಬ್ಯಾನರ್ ಹರಿದು,ವಾಹನದ ಮೇಲೆ ಕಲ್ಲು ತೂರಾಟ
author img

By

Published : Dec 27, 2019, 8:08 AM IST

ಯಾದಗಿರಿ: ಸುರಪುರ ಕ್ಷೇತ್ರದ ಬಿಜೆಪಿ ಶಾಸಕ ರಾಜುಗೌಡ ಹುಟ್ಟುಹಬ್ಬದ ನಿಮಿತ್ತ ಬ್ಯಾನರ್ ಹಾಗೂ ಪೋಸ್ಟರ್ ಅಂಟಿಸಲು ತೆರಳುತ್ತಿದ್ದ ವಾಹನದ ಮೇಲೆ ಕೆಲ ಕಿಡಿಗೇಡಿಗಳು ಕಲ್ಲುಗಳಿಂದ ದಾಳಿ ನಡೆಸಿದ್ದಾರೆ. ಅಲ್ಲದೆ, ರಾಜುಗೌಡ ಅವರ ಭಾವಚಿತ್ರವುಳ್ಳ ಬ್ಯಾನರ್​​ಗಳನ್ನು ಹರಿದು, ವಾಹನವನ್ನು ಜಖಂಗೊಳಿಸಿದಂತಹ ಘಟನೆ ಜಿಲ್ಲೆಯ ಸುರಪುರ ನಗರದಲ್ಲಿ ನಡೆದಿದೆ.

ಕಳೆದ ರಾತ್ರಿ ಶಾಸಕರಿಗೆ ಶುಭ ಕೋರಿದ ಪೋಸ್ಟರ್ ಮತ್ತು ಬ್ಯಾನರ್ ಗಳನ್ನ ನಗರದ ಹಲವೆಡೆ ಅಂಟಿಸಲು ಗಾಂಧಿ ವೃತ್ತದ ಬಳಿ ತೆರಳುತ್ತಿದ್ದಂತ ವಾಹನದ ಮೇಲೆ ಕಲ್ಲು ತೂರಾಡಲಾಗಿದೆ. ಈ ಕೃತ್ಯವನ್ನು ಕೆಲ ಕಾಂಗ್ರೆಸ್ ಕಾರ್ಯಕರ್ತರೇ ಮಾಡಿದ್ದಾರೆ ಅನ್ನೋ ಆರೋಪ ಕೇಳಿ ಬಂದಿದೆ. ಏಕಾಏಕಿ ಕಲ್ಲು ತೂರಾಡಿದ್ದರಿಂದ ವಾಹನದ ಗ್ಲಾಸ್ ಪುಡಿಪುಡಿಯಾಗಿದ್ದು, ಪೋಸ್ಟರ್ ಮತ್ತು ಬ್ಯಾನರ್​ಗಳು ಚೆಲ್ಲಾಪಿಲ್ಲಿಯಾಗಿವೆ.

ಶಾಸಕ ರಾಜುಗೌಡ ಹುಟ್ಟುಹಬ್ಬದ ಬ್ಯಾನರ್ ಹರಿದು, ವಾಹನದ ಮೇಲೆ ಕಿಡಿಗೇಡಿಗಳಿಂದ ಕಲ್ಲು ತೂರಾಟ..

ಹಲ್ಲೆಗೆ ಪ್ರತೀಕಾರ: ಕಳೆದ ತಿಂಗಳಷ್ಟೇ ಕ್ಷೇತ್ರದ ಕೊಡೆಕಲ್ ಗ್ರಾಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರ ಭಾವಚಿತ್ರ ಅಂಟಿಸಲು ತೆರಳುತ್ತಿದ್ದಂತಹ ಸಂದರ್ಭದಲ್ಲಿ ಕಾಂಗ್ರೆಸ್ ನ ಕಾರ್ಯಕರ್ತರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿದ್ದರು ಎನ್ನಲಾಗ್ತಿದೆ. ಈ ಹಲ್ಲೆಗೆ ಪ್ರತೀಕಾರವಾಗಿ ಕಾಂಗ್ರೆಸ್ ಕಾರ್ಯಕರ್ತರು ಈ ದಾಳಿ ಮಾಡಿದ್ದಾರೆ ಎನ್ನಲಾಗುತ್ತಿದೆ.

ಹಾಲಿ ಶಾಸಕ ರಾಜುಗೌಡ ಮತ್ತು ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ದ್ವೇಷ ಮುಂದುವರೆದಿದ್ದು, ಇವರ ಕಿತ್ತಾಟಕ್ಕೆ ಕೈ ಮತ್ತು ಕಮಲದ ಕಾರ್ಯಕರ್ತರ ಮಧ್ಯ ದ್ವೇಷ ಮತ್ತಷ್ಟು ಹೆಚ್ಚಾಗಿದೆ. ಬ್ಯಾನರ್ ‌ಮತ್ತು ಪೋಸ್ಟರ್ ವಿಚಾರಕ್ಕೆ ಈ ಕಾರ್ಯಕರ್ತರ ಮಧ್ಯ ಗಲಾಟೆ ನಡೆಯುವ ಸಾಧ್ಯತೆ ಹೆಚ್ಚಿರುವುದರಿಂದ ನಗರದಾದ್ಯಂತ ಬಿಗಿಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಯಾದಗಿರಿ: ಸುರಪುರ ಕ್ಷೇತ್ರದ ಬಿಜೆಪಿ ಶಾಸಕ ರಾಜುಗೌಡ ಹುಟ್ಟುಹಬ್ಬದ ನಿಮಿತ್ತ ಬ್ಯಾನರ್ ಹಾಗೂ ಪೋಸ್ಟರ್ ಅಂಟಿಸಲು ತೆರಳುತ್ತಿದ್ದ ವಾಹನದ ಮೇಲೆ ಕೆಲ ಕಿಡಿಗೇಡಿಗಳು ಕಲ್ಲುಗಳಿಂದ ದಾಳಿ ನಡೆಸಿದ್ದಾರೆ. ಅಲ್ಲದೆ, ರಾಜುಗೌಡ ಅವರ ಭಾವಚಿತ್ರವುಳ್ಳ ಬ್ಯಾನರ್​​ಗಳನ್ನು ಹರಿದು, ವಾಹನವನ್ನು ಜಖಂಗೊಳಿಸಿದಂತಹ ಘಟನೆ ಜಿಲ್ಲೆಯ ಸುರಪುರ ನಗರದಲ್ಲಿ ನಡೆದಿದೆ.

ಕಳೆದ ರಾತ್ರಿ ಶಾಸಕರಿಗೆ ಶುಭ ಕೋರಿದ ಪೋಸ್ಟರ್ ಮತ್ತು ಬ್ಯಾನರ್ ಗಳನ್ನ ನಗರದ ಹಲವೆಡೆ ಅಂಟಿಸಲು ಗಾಂಧಿ ವೃತ್ತದ ಬಳಿ ತೆರಳುತ್ತಿದ್ದಂತ ವಾಹನದ ಮೇಲೆ ಕಲ್ಲು ತೂರಾಡಲಾಗಿದೆ. ಈ ಕೃತ್ಯವನ್ನು ಕೆಲ ಕಾಂಗ್ರೆಸ್ ಕಾರ್ಯಕರ್ತರೇ ಮಾಡಿದ್ದಾರೆ ಅನ್ನೋ ಆರೋಪ ಕೇಳಿ ಬಂದಿದೆ. ಏಕಾಏಕಿ ಕಲ್ಲು ತೂರಾಡಿದ್ದರಿಂದ ವಾಹನದ ಗ್ಲಾಸ್ ಪುಡಿಪುಡಿಯಾಗಿದ್ದು, ಪೋಸ್ಟರ್ ಮತ್ತು ಬ್ಯಾನರ್​ಗಳು ಚೆಲ್ಲಾಪಿಲ್ಲಿಯಾಗಿವೆ.

ಶಾಸಕ ರಾಜುಗೌಡ ಹುಟ್ಟುಹಬ್ಬದ ಬ್ಯಾನರ್ ಹರಿದು, ವಾಹನದ ಮೇಲೆ ಕಿಡಿಗೇಡಿಗಳಿಂದ ಕಲ್ಲು ತೂರಾಟ..

ಹಲ್ಲೆಗೆ ಪ್ರತೀಕಾರ: ಕಳೆದ ತಿಂಗಳಷ್ಟೇ ಕ್ಷೇತ್ರದ ಕೊಡೆಕಲ್ ಗ್ರಾಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರ ಭಾವಚಿತ್ರ ಅಂಟಿಸಲು ತೆರಳುತ್ತಿದ್ದಂತಹ ಸಂದರ್ಭದಲ್ಲಿ ಕಾಂಗ್ರೆಸ್ ನ ಕಾರ್ಯಕರ್ತರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿದ್ದರು ಎನ್ನಲಾಗ್ತಿದೆ. ಈ ಹಲ್ಲೆಗೆ ಪ್ರತೀಕಾರವಾಗಿ ಕಾಂಗ್ರೆಸ್ ಕಾರ್ಯಕರ್ತರು ಈ ದಾಳಿ ಮಾಡಿದ್ದಾರೆ ಎನ್ನಲಾಗುತ್ತಿದೆ.

ಹಾಲಿ ಶಾಸಕ ರಾಜುಗೌಡ ಮತ್ತು ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ದ್ವೇಷ ಮುಂದುವರೆದಿದ್ದು, ಇವರ ಕಿತ್ತಾಟಕ್ಕೆ ಕೈ ಮತ್ತು ಕಮಲದ ಕಾರ್ಯಕರ್ತರ ಮಧ್ಯ ದ್ವೇಷ ಮತ್ತಷ್ಟು ಹೆಚ್ಚಾಗಿದೆ. ಬ್ಯಾನರ್ ‌ಮತ್ತು ಪೋಸ್ಟರ್ ವಿಚಾರಕ್ಕೆ ಈ ಕಾರ್ಯಕರ್ತರ ಮಧ್ಯ ಗಲಾಟೆ ನಡೆಯುವ ಸಾಧ್ಯತೆ ಹೆಚ್ಚಿರುವುದರಿಂದ ನಗರದಾದ್ಯಂತ ಬಿಗಿಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

Intro:ಯಾದಗಿರಿ: ಸುರಪುರ ಕ್ಷೇತ್ರದ ಬಿಜೆಪಿ ಶಾಸಕ ರಾಜುಗೌಡ ಹುಟ್ಟು ಹಬ್ಬದ ನಿಮಿತ್ತ ಬ್ಯಾನರ್ ಮತ್ತ ಪೋಸ್ಟರ್ ಹಚ್ಚಲು ತೆರಳುತ್ತಿದ್ದಂತಾ ಟಾಟಾ ಎಸಿ ವಾಹನದ ಮೇಲೆ ಕೆಲ ಕಿಡಿಗೆಡಿಗಳು ಕಲ್ಲುಗಳಿಂದ ಹಲ್ಲೆ ನಡೆಸುವ ಮೂಲಕ ರಾಜುಗೌಡರ ಭಾವಚಿತ್ರವುಳ್ಳ ಬ್ಯಾನರ್ ಗಳನ್ನು ಹರಿದು, ವಾಹನವನ್ನು ಜಕಮ್ ಗೊಳಿಸಿದಂತಾ ಘಟನೆ ಜಿಲ್ಲೆಯ ಸುರಪುರ ನಗರದಲ್ಲಿ ನಡೆದಿದೆ.

Body:ಕಳೆದ ರಾತ್ರಿ ಶಾಸಕರಿಗೆ ಶುಭ ಕೋರಿದ ಪೋಸ್ಟರ್ ಮತ್ತು ಬ್ಯಾನರ್ ಗಳನ್ನ ನಗರದ ಹಲವೆಡೆ ಹಚ್ಚಲು ಗಾಂಧಿ ವೃತ್ತದ ಬಳಿ ತೆರಳುತ್ತಿದ್ದಂತಾ ಟಾಟಾ ಎಸಿ ವಾಹನದ ಮೇಲೆ ಕಲ್ಲು ತೂರಾಟ ಮಡಲಾಗಿದ್ದು, ಕೆಲ ಕಾಂಗ್ರೆಸ್ ಕಾರ್ಯಕರ್ತರೆ ಈ ಹಲ್ಲೆಯನ್ನು ನಾಡಿದ್ದಾರೆ ಅನ್ನೋ ಮಾತು ಕೇಳಿ ಬಂದಿವೆ. ಏಕಾಏಕಿ ಕಲ್ಲು ತೂರಾಟ ಮಾಡಿದ್ದರಿಂದ ವಾಹನದ ಗ್ಲಾಸ್ ಪುಡಿಪುಡಿಯಾಗಿದ್ದು ಪೋಸ್ಟರ್ ಮತ್ತು ಬ್ಯಾನರ್ ಗಳು ಚೆಲ್ಲಾಪಿಲ್ಲಿಯಾಗಿದ್ದು ಸದ್ಯಕ್ಕೆ ಅಲ್ಲಿಯ ಪರಿಸ್ಥಿತಿ ಬೂದಿ ಮುಚ್ಚಿದ ಜೆಙಡದಙತಾಗಿದೆ..ಕಳೆದ ತಿಂಗಳಷ್ಟೇ ಕ್ಷೇತ್ರದ ಕೊಡೆಕಲ್ ಗ್ರಾಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರ ಭಾವಚಿತ್ರ ಲಗುತಿಸಲು ತೆರಳುತ್ತಿದ್ದಂತಾ ಸಂದರ್ಭದಲ್ಲಿ ಕಾಂಗ್ರೆಸ್ ನ ಕಾರ್ಯಕರ್ತರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿದ್ದರು. ಹಲ್ಲೆಗೆ ಪ್ರತೀಕಾರ ತೆಗೆದುಕೊಳ್ಳುವ ದೃಷ್ಟಿಯಿಂದ ಕಾಂಗ್ರೆಸ್ ಕಾರ್ಯಕರ್ತರು ಈ ಹಲ್ಲೆ ಮಾಡಿದ್ದಾರೆ ಎನ್ನಲಾಗುತ್ತಿದೆ...

Conclusion:ಹಾಲಿ ಶಾಸಕ ರಾಜುಗೌಡ ಮತ್ತು ರಾಜಾ ವೆಂಕಟಪ್ಪ ನಾಯಕ ದ್ವೇಷ ಮುಂದುವರೆದಿದ್ದು, ಶಾಸಕರುಗಳ ಕಿತ್ತಾಟಕ್ಕೆ ಕೈ ಮತ್ತು ಕಮಲದ ಕಾರ್ಯಕರ್ತರ ಮಧ್ಯ ದ್ವೇಷ ಮತ್ತಷ್ಟು ಹೆಚ್ಚಾಗಿದೆ. ಬ್ಯಾನರ್ ‌ಮತ್ತು ಪೋಸ್ಟರ್ ವಿಚಾರಕ್ಕೆ ಈ ಕಾರ್ಯಕರ್ತರ ಮಧ್ಯ ಗಕಾಟೆ ನಡೆಯುವ ಸಾಧ್ಯತೆ ಹೆಚ್ಚಿರುವುದರಿಂದ ನಗರಾಧ್ಯಂತ ಬಿಗು ಪೋಲಿಸ್ ಬಂದೋಬಸ್ತ ಕಲ್ಪಿಸಲಾಗಿದೆ. ಸುರಪುರ ನಗರ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ....

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.