ETV Bharat / state

ಚಿನ್ನದಂಗಡಿ ಮಾಲೀಕನ ಪುತ್ರನ ಹತ್ಯೆ ಪ್ರಕರಣ: ಕೊಲೆಗಾರರು ಅಂದರ್

author img

By

Published : Jan 14, 2021, 9:57 PM IST

ಹಾಡಹಗಲೇ ಚಿನ್ನದಂಗಡಿ ಮಾಲೀಕನ ಪುತ್ರನ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೊಲೆಗಾರನನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.

murder of jewelry shop owner son case
ಚಿನ್ನದಂಗಡಿ ಮಾಲೀಕನ ಪುತ್ರನ ಹತ್ಯೆ ಪ್ರಕರಣ

ಸುರಪುರ/ಯಾದಗಿರಿ: ಚಿನ್ನಕ್ಕಾಗಿ ಉದ್ಯಮಿ ಪುತ್ರನನ್ನು ಹತ್ಯೆ ಮಾಡಿದ ಕೊಲೆಗಾರನನ್ನು, ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.

ಹುಣಸಗಿ ಪಟ್ಟಣದಲ್ಲಿ ಬುಧವಾರ ಹಾಡಹಗಲೇ ಚಿನ್ನದ ಉದ್ಯಮಿ ಜಗದೀಶ್ ಅವರ ಪುತ್ರ ನರೇಂದ್ರನನ್ನು, ಅವರ ಚಿನ್ನದ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಕಿಶೋರ್ ಎಂಬ ವ್ಯಕ್ತಿ ಕೊಲೆ ಮಾಡಿ ಚಿನ್ನಾಭರಣ ಸಹಿತ ಪರಾರಿಯಾಗಿದ್ದ.

ಚಿನ್ನದಂಗಡಿ ಮಾಲೀಕನ ಪುತ್ರನ ಹತ್ಯೆ ಪ್ರಕರಣ

ಇದನ್ನೂ ಓದಿ: ಸುರಪುರ: ಹಾಡಹಗಲೇ ಚಿನ್ನದಂಗಡಿ ಮಾಲೀಕನ ಪುತ್ರನ ಬರ್ಬರ ಹತ್ಯೆ

ಇಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನವಾಣೆ ಮಾರ್ಗದರ್ಶನದಲ್ಲಿ, ಡಿವೈಎಸ್​​ಪಿ ವೆಂಕಟೇಶ ಹುಗಿಬಂಡಿ ನೇತೃತ್ವದ ತಂಡ ಆರೋಪಿಗಳಾದ ಕಿಶೋರ್ ಹಾಗೂ ಅಜಿತ್​​ನನ್ನು ಬಂಧಿಸಿದ್ದಾರೆ. ಆರೋಪಿತರಿಂದ 1 ಕೆ.ಜಿ 570 ಗ್ರಾಂ ಚಿನ್ನಾಭರಣ ಹಾಗೂ 2 ಕೆ.ಜಿ ಬೆಳ್ಳಿ ಮತ್ತು ಒಂದು ಬೈಕ್ ಸೇರಿ 1 ಕೋಟಿ ರೂ. ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಲಾಗಿದೆ.

ಸುರಪುರ/ಯಾದಗಿರಿ: ಚಿನ್ನಕ್ಕಾಗಿ ಉದ್ಯಮಿ ಪುತ್ರನನ್ನು ಹತ್ಯೆ ಮಾಡಿದ ಕೊಲೆಗಾರನನ್ನು, ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.

ಹುಣಸಗಿ ಪಟ್ಟಣದಲ್ಲಿ ಬುಧವಾರ ಹಾಡಹಗಲೇ ಚಿನ್ನದ ಉದ್ಯಮಿ ಜಗದೀಶ್ ಅವರ ಪುತ್ರ ನರೇಂದ್ರನನ್ನು, ಅವರ ಚಿನ್ನದ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಕಿಶೋರ್ ಎಂಬ ವ್ಯಕ್ತಿ ಕೊಲೆ ಮಾಡಿ ಚಿನ್ನಾಭರಣ ಸಹಿತ ಪರಾರಿಯಾಗಿದ್ದ.

ಚಿನ್ನದಂಗಡಿ ಮಾಲೀಕನ ಪುತ್ರನ ಹತ್ಯೆ ಪ್ರಕರಣ

ಇದನ್ನೂ ಓದಿ: ಸುರಪುರ: ಹಾಡಹಗಲೇ ಚಿನ್ನದಂಗಡಿ ಮಾಲೀಕನ ಪುತ್ರನ ಬರ್ಬರ ಹತ್ಯೆ

ಇಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನವಾಣೆ ಮಾರ್ಗದರ್ಶನದಲ್ಲಿ, ಡಿವೈಎಸ್​​ಪಿ ವೆಂಕಟೇಶ ಹುಗಿಬಂಡಿ ನೇತೃತ್ವದ ತಂಡ ಆರೋಪಿಗಳಾದ ಕಿಶೋರ್ ಹಾಗೂ ಅಜಿತ್​​ನನ್ನು ಬಂಧಿಸಿದ್ದಾರೆ. ಆರೋಪಿತರಿಂದ 1 ಕೆ.ಜಿ 570 ಗ್ರಾಂ ಚಿನ್ನಾಭರಣ ಹಾಗೂ 2 ಕೆ.ಜಿ ಬೆಳ್ಳಿ ಮತ್ತು ಒಂದು ಬೈಕ್ ಸೇರಿ 1 ಕೋಟಿ ರೂ. ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.