ETV Bharat / state

ಸಾರ್ವಜನಿಕ ಶೌಚಾಲಯ ಬಳಿ ಬಿಟ್ಟೋಗಿದ್ದ ನವಜಾತ ಶಿಶು ರಕ್ಷಿಸಿದ ಕರುಣಾಮಯಿ

author img

By

Published : Nov 3, 2020, 7:52 AM IST

ಸುರಪುರದಲ್ಲಿ ಸಾರ್ವಜನಿಕ ಶೌಚಾಲಯ ಬಳಿ ಪಾಪಿಗಳು ನವಜಾತ ಶಿಶುವನ್ನು ಬಿಟ್ಟು ಹೋಗಿದ್ದಾರೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಶಿಶುವವನ್ನು ರಕ್ಷಿಸಿ, ವಶಕ್ಕೆ ಪಡೆದಿದ್ದಾರೆ. ನಗರದ ಪ್ರಭಾವಿ ವ್ಯಕ್ತಿಯೊಬ್ಬರು ಅಧಿಕಾರಿಗಳನ್ನು ಸಂಪರ್ಕಿಸಿ ಮಗುವನ್ನು ತಾವೇ ಸಾಕುವುದಾಗಿ ಹೇಳಿ ಮುಂದೆ ಬಂದಿದ್ದಾರೆ ಎಂದು ತಿಳಿದುಬಂದಿದೆ.

newborn baby found near a public toilt in surapur
ಸಾರ್ವಜನಿಕ ಶೌಚಾಲಯ ಬಳಿ ನವಜಾತ ಶಿಶು ಪತ್ತೆ; ಮಗು ಮಕ್ಕಳ ರಕ್ಷಣಾ ಇಲಾಖೆ ಅಧಿಕಾರಿಗಳ ವಶಕ್ಕೆ

ಸುರಪುರ: ನಗರದಲ್ಲಿ 3 ದಿನಗಳ ಹಿಂದೆ ಜನಿಸಿದ ಗಂಡು ಮಗುವನ್ನು ಅನಾಥವಾಗಿ ಸಾರ್ವಜನಿಕ ಶೌಚಾಲಯ ಬಳಿ ಬಿಟ್ಟು ಹೋಗಿದ್ದು, ಸಾರ್ವಜನಿಕರೊಬ್ಬರು ಕಾಪಾಡಿದ್ದಾರೆ. ಸದ್ಯ ಮಗುವನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ವಶಕ್ಕೆ ಪಡೆದಿದೆ.

ವಿಷಯವನ್ನು ಪೊಲೀಸ್ ಅಧಿಕಾರಿಗಳ ಮೂಲಕ ತಿಳಿದ ಯಾದಗಿರಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಸಿಬ್ಬಂದಿ ನವಜಾತ ಶಿಶುವನ್ನು ವಶಕ್ಕೆ ಪಡೆದು ಯಾದಗಿರಿ ಜಿಲ್ಲಾಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ. ಈ ವಿಷಯ ಕುರಿತು ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಗು ಮಕ್ಕಳ ರಕ್ಷಣಾ ಇಲಾಖೆ ಅಧಿಕಾರಿಗಳ ವಶಕ್ಕೆ

ನಿಯಮಾನುಸಾರ ಮಗುವನ್ನು ಕಲಬುರಗಿಯ ಅಮೂಲ್ಯ ಶಿಶು ಗೃಹಕ್ಕೆ ಕಳುಹಿಸುವ ವ್ಯವಸ್ಥೆ ಮಾಡಲಾಗಿದೆ ಎಂದು ಮಕ್ಕಳ ರಕ್ಷಣಾ ಘಟಕ ಸಿಬ್ಬಂದಿ ತಿಳಿಸಿದ್ದಾರೆ. ಈ ಅನಾಥ ಮಗುವನ್ನು ವ್ಯಕ್ತಿವೋರ್ವರು ಸಾಕಲು ಮುಂದೆ ಬಂದಿದ್ದಾರೆ ಎಂದು ತಿಳಿದುಬಂದಿದೆ.

ಈ ವೇಳೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅಶೋಕ ರಾಜನ್, ದಶರಥ ರಾಜೇಂದ್ರ ಡೊಳ್ಳೆ, ಸಿಪಿಐ ಎಸ್.ಎಮ್. ಪಾಟೀಲ್, ಮಹಿಳಾ ರಕ್ಷಕಿ ಅನೀತಾ ಎಸ್, ಅಂಗನವಾಡಿ ಮೇಲ್ವಿಚಾರಕಿ ಪದ್ಮಾ. ಡಿ. ನಾಯಕ ಉಪಸ್ಥಿತರಿದ್ದರು.

ಸುರಪುರ: ನಗರದಲ್ಲಿ 3 ದಿನಗಳ ಹಿಂದೆ ಜನಿಸಿದ ಗಂಡು ಮಗುವನ್ನು ಅನಾಥವಾಗಿ ಸಾರ್ವಜನಿಕ ಶೌಚಾಲಯ ಬಳಿ ಬಿಟ್ಟು ಹೋಗಿದ್ದು, ಸಾರ್ವಜನಿಕರೊಬ್ಬರು ಕಾಪಾಡಿದ್ದಾರೆ. ಸದ್ಯ ಮಗುವನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ವಶಕ್ಕೆ ಪಡೆದಿದೆ.

ವಿಷಯವನ್ನು ಪೊಲೀಸ್ ಅಧಿಕಾರಿಗಳ ಮೂಲಕ ತಿಳಿದ ಯಾದಗಿರಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಸಿಬ್ಬಂದಿ ನವಜಾತ ಶಿಶುವನ್ನು ವಶಕ್ಕೆ ಪಡೆದು ಯಾದಗಿರಿ ಜಿಲ್ಲಾಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ. ಈ ವಿಷಯ ಕುರಿತು ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಗು ಮಕ್ಕಳ ರಕ್ಷಣಾ ಇಲಾಖೆ ಅಧಿಕಾರಿಗಳ ವಶಕ್ಕೆ

ನಿಯಮಾನುಸಾರ ಮಗುವನ್ನು ಕಲಬುರಗಿಯ ಅಮೂಲ್ಯ ಶಿಶು ಗೃಹಕ್ಕೆ ಕಳುಹಿಸುವ ವ್ಯವಸ್ಥೆ ಮಾಡಲಾಗಿದೆ ಎಂದು ಮಕ್ಕಳ ರಕ್ಷಣಾ ಘಟಕ ಸಿಬ್ಬಂದಿ ತಿಳಿಸಿದ್ದಾರೆ. ಈ ಅನಾಥ ಮಗುವನ್ನು ವ್ಯಕ್ತಿವೋರ್ವರು ಸಾಕಲು ಮುಂದೆ ಬಂದಿದ್ದಾರೆ ಎಂದು ತಿಳಿದುಬಂದಿದೆ.

ಈ ವೇಳೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅಶೋಕ ರಾಜನ್, ದಶರಥ ರಾಜೇಂದ್ರ ಡೊಳ್ಳೆ, ಸಿಪಿಐ ಎಸ್.ಎಮ್. ಪಾಟೀಲ್, ಮಹಿಳಾ ರಕ್ಷಕಿ ಅನೀತಾ ಎಸ್, ಅಂಗನವಾಡಿ ಮೇಲ್ವಿಚಾರಕಿ ಪದ್ಮಾ. ಡಿ. ನಾಯಕ ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.