ETV Bharat / state

ಸುರಪುರದಲ್ಲಿ ಅಕಾಲಿಕ ಮಳೆ ಸೃಷ್ಟಿಸಿದ ಅವಾಂತರ: ನೆಲಕಚ್ಚಿದ ಪಪ್ಪಾಯಿ ಬೆಳೆ - ಸುರಪುರದಲ್ಲಿ ಸಿಡಿಲು ಬಡಿದು ಎತ್ತು ಸಾವು

ಅಕಾಲಿಕ ಮಳೆಗೆ ಸುರಪುರ ತಾಲೂಕಿನ ಹಲವು ಗ್ರಾಮಗಳಲ್ಲಿ ಪಪ್ಪಾಯಿ ಬೆಳೆ ನಾಶವಾಗಿದೆ. ಹೀಗಾಗಿ ರೈತರು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಸುರಪುರದಲ್ಲಿ ಅಕಾಲಿಕ ಮಳೆ ಸೃಷ್ಟಿಸಿದ ಅವಾಂತರ
author img

By

Published : Apr 19, 2020, 10:21 AM IST

ಸುರಪುರ: ತಾಲೂಕಿನಲ್ಲಿ ಸುರಿದ ಅಕಾಲಿಕ ಮಳೆಗೆ ಹತ್ತಾರು ಎಕರೆ ಪಪ್ಪಾಯಿ ಬೆಳೆಗೆ ಹಾನಿಯಾಗಿದೆ. ಸಿಡಿಲು ಬಡಿದು ಜಾನುವಾರು ಸಾವನ್ನಪ್ಪಿದ್ದು, ರೈತ ಕಂಗಾಲಾಗಿದ್ದಾನೆ.

ಸುರಪುರದಲ್ಲಿ ಅಕಾಲಿಕ ಮಳೆ ಸೃಷ್ಟಿಸಿದ ಅವಾಂತರ

ನಿನ್ನೆ ರಾತ್ರಿ ಸುರಿದ ಅಕಾಲಿಕ ಮಳೆಗೆ ತಾಲೂಕಿನ ಹೆಮ್ಮಡಗಿ, ಚಂದ್ಲಾಪುರ, ದೇವತ್ಕಲ್, ಹಾಲಬಾವಿ ಸೇರಿ ಅನೇಕ ಗ್ರಾಮಗಳಲ್ಲಿ ರೈತರು ಬೆಳೆದ ಪಪ್ಪಾಯಿ ಗಿಡಗಳು ಗಾಳಿಯಿಂದ ನೆಲಕಚ್ಚಿವೆ. ಚಂದ್ಲಾಪುರ ಗ್ರಾಮದ ಬಳಿಯ ಹಸನಾಪುರ ಗ್ರಾಮದ ಜಗದೀಶ್ ನಂಬಾ ಎಂಬುವರ ಹೊಲದಲ್ಲಿ ಪಪ್ಪಾಯಿ ಗಿಡಗಳು ನೆಲಕ್ಕುರಳಿರುವುದರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಫಸಲು ಮಣ್ಣು ಪಾಲಾಗಿದೆ.

ಸಾಲ ಮಾಡಿ ಪಪ್ಪಾಯಿ ಬೆಳೆದಿದ್ದು, ಈಗ ಅಕಾಲಿಕ ಮಳೆಯಿಂದ ನಷ್ಟವಾಗಿದೆ. ಸರ್ಕಾರ ನಮ್ಮ ನೆರವಿಗೆ ಬರಬೇಕೆಂದು ರೈತರು ಮನವಿ ಮಾಡಿದ್ದಾರೆ.

ಸಿಡಿಲು ಬಡಿದು ಎತ್ತು ಸಾವು :

ತಾಲೂಕಿನ ಹಸನಾಪುರ ಗ್ರಾಮದ ರೈತ ಹನಮಂತ್ರಾಯ ಗೌಡ ಎಂಬುವರು ತಮ್ಮ ಜಮೀನಿನಲ್ಲಿ ಜಾನುವಾರರುಗಳನ್ನು ಕಟ್ಟಿದ್ದರು. ಈ ವೇಳೆ ಸಿಡಿಲು ಬಿಡಿದು ಒಂದು ಎತ್ತು ಸಾವನ್ನಪ್ಪಿದ್ದು, ಎರಡು ಎತ್ತುಗಳು ಗಾಯಗೊಂಡಿವೆ.

ಸುರಪುರ: ತಾಲೂಕಿನಲ್ಲಿ ಸುರಿದ ಅಕಾಲಿಕ ಮಳೆಗೆ ಹತ್ತಾರು ಎಕರೆ ಪಪ್ಪಾಯಿ ಬೆಳೆಗೆ ಹಾನಿಯಾಗಿದೆ. ಸಿಡಿಲು ಬಡಿದು ಜಾನುವಾರು ಸಾವನ್ನಪ್ಪಿದ್ದು, ರೈತ ಕಂಗಾಲಾಗಿದ್ದಾನೆ.

ಸುರಪುರದಲ್ಲಿ ಅಕಾಲಿಕ ಮಳೆ ಸೃಷ್ಟಿಸಿದ ಅವಾಂತರ

ನಿನ್ನೆ ರಾತ್ರಿ ಸುರಿದ ಅಕಾಲಿಕ ಮಳೆಗೆ ತಾಲೂಕಿನ ಹೆಮ್ಮಡಗಿ, ಚಂದ್ಲಾಪುರ, ದೇವತ್ಕಲ್, ಹಾಲಬಾವಿ ಸೇರಿ ಅನೇಕ ಗ್ರಾಮಗಳಲ್ಲಿ ರೈತರು ಬೆಳೆದ ಪಪ್ಪಾಯಿ ಗಿಡಗಳು ಗಾಳಿಯಿಂದ ನೆಲಕಚ್ಚಿವೆ. ಚಂದ್ಲಾಪುರ ಗ್ರಾಮದ ಬಳಿಯ ಹಸನಾಪುರ ಗ್ರಾಮದ ಜಗದೀಶ್ ನಂಬಾ ಎಂಬುವರ ಹೊಲದಲ್ಲಿ ಪಪ್ಪಾಯಿ ಗಿಡಗಳು ನೆಲಕ್ಕುರಳಿರುವುದರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಫಸಲು ಮಣ್ಣು ಪಾಲಾಗಿದೆ.

ಸಾಲ ಮಾಡಿ ಪಪ್ಪಾಯಿ ಬೆಳೆದಿದ್ದು, ಈಗ ಅಕಾಲಿಕ ಮಳೆಯಿಂದ ನಷ್ಟವಾಗಿದೆ. ಸರ್ಕಾರ ನಮ್ಮ ನೆರವಿಗೆ ಬರಬೇಕೆಂದು ರೈತರು ಮನವಿ ಮಾಡಿದ್ದಾರೆ.

ಸಿಡಿಲು ಬಡಿದು ಎತ್ತು ಸಾವು :

ತಾಲೂಕಿನ ಹಸನಾಪುರ ಗ್ರಾಮದ ರೈತ ಹನಮಂತ್ರಾಯ ಗೌಡ ಎಂಬುವರು ತಮ್ಮ ಜಮೀನಿನಲ್ಲಿ ಜಾನುವಾರರುಗಳನ್ನು ಕಟ್ಟಿದ್ದರು. ಈ ವೇಳೆ ಸಿಡಿಲು ಬಿಡಿದು ಒಂದು ಎತ್ತು ಸಾವನ್ನಪ್ಪಿದ್ದು, ಎರಡು ಎತ್ತುಗಳು ಗಾಯಗೊಂಡಿವೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.