ಯಾದಗಿರಿ : ಸಾರಿಗೆ ನೌಕರರ ಮುಷ್ಕರ ಹಿನ್ನೆಲೆ ಸರ್ಕಾರಿ ಬಸ್ಗಳಿಗೆ ಪರ್ಯಾಯವಾಗಿ ರಸ್ತೆಗಿಳಿದಿರುವ ಖಾಸಗಿ ಬಸ್ನವರು ಪ್ರಯಾಣಿಕರಿಂದ ದುಪ್ಪಟ್ಟು ಹಣ ಸುಲಿಗೆ ಮಾಡುತ್ತಿರುವ ಆರೋಪಗಳು ಕೇಳಿ ಬಂದಿವೆ.
ಖಾಸಗಿ ಬಸ್ನವರು ಹೆಚ್ಚಿನ ಹಣ ಕೇಳಿದ್ದರಿಂದ ಜ್ವರದಿಂದ ಬಳಲುತ್ತಿದ್ದ ಮಗುವಿನ ಚಿಕಿತ್ಸೆಗಾಗಿ ರಾಯಚೂರು ನಗರಕ್ಕೆ ತೆರಳಲು ಯಾದಗಿರಿ ಕೇಂದ್ರ ಬಸ್ ನಿಲ್ದಾಣಕ್ಕೆ ಹೊಸಹಳ್ಳಿ ಗ್ರಾಮದ ಮಹಿಳೆಯೊಬ್ಬರು ಸಂಕಷ್ಟ ಅನುಭವಿಸುವಂತಾಯಿತು.
ಓದಿ : ಖಾಸಗಿ ಬಸ್ನಿಂದ ದುಪ್ಪಟ್ಟು ದರ ವಸೂಲಿ: ತರೀಕೆರೆಯಿಂದ ಶಿವಮೊಗ್ಗಕ್ಕೆ 80 ರೂ.!
ಖಾಸಗಿ ಬಸ್ನವರು ರಾಯಚೂರಿಗೆ ಕರೆದುಕೊಂಡು ಹೋಗಲು 1600 ರಿಂದ 2 ಸಾವಿರ ರೂ. ಕೇಳಿದ್ದರು. ಅಷ್ಟು ಹಣ ಕೊಡಲು ಸಾಧ್ಯವಾಗದೆ ಮಹಿಳೆ ಬಸ್ ನಿಲ್ದಾಣದಲ್ಲಿ ದಿಕ್ಕು ತೋಚದೆ ನಿಂತಿದ್ದರು.