ETV Bharat / state

'ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ, ಶೀಘ್ರ ಪರಿಹರಿಸಬೇಕು'

ಸಾರ್ವಜನಿಕರ ಸಮಸ್ಯೆಗಳನ್ನು ಆತ್ಮೀಯತೆಯಿಂದ ಆಲಿಸಿ, ಪರಿಹಾರ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕ ಉಮೇಶ ಬಿ.ಚಿಕ್ಕಮಠ ಸೂಚಿಸಿದರು.

author img

By

Published : Jan 18, 2020, 5:05 AM IST

police-department-meeting
ಸಾರ್ವಜನಿಕರ ಕುಂದು-ಕೊರತೆಗಳ ಅಹವಾಲು ಸ್ವೀಕಾರ ಸಭೆ

ಯಾದಗಿರಿ: ಸರ್ಕಾರಿ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳನ್ನು ಆತ್ಮೀಯತೆಯಿಂದ ಆಲಿಸಿ, ಅವುಗಳನ್ನು ಶೀಘ್ರ ಪರಿಹರಿಸಬೇಕು ಎಂದು ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕ ಉಮೇಶ ಬಿ.ಚಿಕ್ಕಮಠ ಅವರು ಅಧಿಕಾರಿಗಳಿಗೆ ಸೂಚಿಸಿದರು.

ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಾರ್ವಜನಿಕರ ಕುಂದು-ಕೊರತೆಗಳ ಅಹವಾಲು ಸ್ವೀಕಾರ ಸಭೆಯಲ್ಲಿ ಮಾತನಾಡಿದ ಅವರು, ನಿತ್ಯ ಪತ್ರಿಕೆಗಳು ಕೂಡ ಸಾರ್ವಜನಿಕರ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುತ್ತವೆ. ಅವುಗಳನ್ನು ಅನುಸರಿಸಿ, ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವುದು ಅಧಿಕಾರಿಗಳ ಕರ್ತವ್ಯ. ಅರ್ಜಿಗಳನ್ನು ನಿಗದಿತ ಅವಧಿಯಲ್ಲಿ ವಿಲೇವಾರಿ ಮಾಡಬೇಕು ಎಂದರು.

ಇತ್ತೀಚಿಗೆ ಪರವಾನಗಿ ಪಡೆಯದೇ ಮೆಡಿಕಲ್​​ ಕೇಂದ್ರಗಳನ್ನು ತೆರೆದಿರುವುದು ಕಂಡುಬರುತ್ತಿದೆ. ಈ ಮೂಲಕ ಸಾರ್ವಜನಿಕರ ಜೀವದ ಜೊತೆಗೆ ಚೆಲ್ಲಾಟವಾಡುತ್ತಿದ್ದಾರೆ. ಜೀವ ಹಾನಿ ಕೂಡ ಸಂಭವಿಸಬಹುದು. ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಯಾದಗಿರಿ: ಸರ್ಕಾರಿ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳನ್ನು ಆತ್ಮೀಯತೆಯಿಂದ ಆಲಿಸಿ, ಅವುಗಳನ್ನು ಶೀಘ್ರ ಪರಿಹರಿಸಬೇಕು ಎಂದು ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕ ಉಮೇಶ ಬಿ.ಚಿಕ್ಕಮಠ ಅವರು ಅಧಿಕಾರಿಗಳಿಗೆ ಸೂಚಿಸಿದರು.

ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಾರ್ವಜನಿಕರ ಕುಂದು-ಕೊರತೆಗಳ ಅಹವಾಲು ಸ್ವೀಕಾರ ಸಭೆಯಲ್ಲಿ ಮಾತನಾಡಿದ ಅವರು, ನಿತ್ಯ ಪತ್ರಿಕೆಗಳು ಕೂಡ ಸಾರ್ವಜನಿಕರ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುತ್ತವೆ. ಅವುಗಳನ್ನು ಅನುಸರಿಸಿ, ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವುದು ಅಧಿಕಾರಿಗಳ ಕರ್ತವ್ಯ. ಅರ್ಜಿಗಳನ್ನು ನಿಗದಿತ ಅವಧಿಯಲ್ಲಿ ವಿಲೇವಾರಿ ಮಾಡಬೇಕು ಎಂದರು.

ಇತ್ತೀಚಿಗೆ ಪರವಾನಗಿ ಪಡೆಯದೇ ಮೆಡಿಕಲ್​​ ಕೇಂದ್ರಗಳನ್ನು ತೆರೆದಿರುವುದು ಕಂಡುಬರುತ್ತಿದೆ. ಈ ಮೂಲಕ ಸಾರ್ವಜನಿಕರ ಜೀವದ ಜೊತೆಗೆ ಚೆಲ್ಲಾಟವಾಡುತ್ತಿದ್ದಾರೆ. ಜೀವ ಹಾನಿ ಕೂಡ ಸಂಭವಿಸಬಹುದು. ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

Intro:ಜನರ ಸಮಸ್ಯೆ ನಿಗಧಿತ ಸಮಯದಲ್ಲಿ ಪರಿಹರಿಸಿ,ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರಿಂದ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ

ಯಾದಗಿರಿ: ಸರ್ಕಾರಿ ಇಲಾಖೆಗಳಲ್ಲಿ ಕೆಲಸ ಮಾಡುವ ಅಧಿಕಾರಿಗಳು ಸಾರ್ವಜನಿಕ ಸಮಸ್ಯೆಗಳನ್ನು ಆತ್ಮೀಯತೆಯಿಂದ ಆಲಿಸುವ ಜೊತೆಗೆ ಶೀಘ್ರ ಪರಿಹರಿಸಬೇಕು ಎಂದು,ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರಾದ ಉಮೇಶ ಬಿ . ಚಿಕ್ಕಮಠ ಅಧಿಕಾರಿಗಳಿಗೆ ಸಲಹೆ ನೀಡಿದ್ದಾರೆ.

Body:ನಗರದ ತಾಲ್ಲೂಕು ಪಂಚಾಯಿತಿ ಸಭಾಗಂಣದಲ್ಲಿ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳಿಂದ ಹಮ್ಮಿಕೊಂಡಿದ್ದ ಸಾರ್ವಜನಿಕರ ದೂರು , ಕುಂದು ಕೊರತೆಗಳ ಅಹವಾಲು ಸ್ವೀಕಾರ ಸಭೆಯಲ್ಲಿ ಈ ಬಗ್ಗೆ ಮಾತನಾಡಿದ ಅವರು, ದಿನನಿತ್ಯ ಪತ್ರಿಕೆಗಳು ಕೂಡ ಸಾರ್ವಜನಿಕರ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುತ್ತವೆ. ಅವುಗಳನ್ನು ಕೂಡ ಓದಿ ತಿಳಿದುಕೊಂಡು ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವುದು ಅಧಿಕಾರಿಗಳ ಕರ್ತವ್ಯ . ಸಾರ್ವಜನಿಕರ ಕೆಲಸ - ಕಾರ್ಯಗಳಿಗಾಗಿ ಹಣಕ್ಕಾಗಿ ಪೀಡಿಸುವುದು ಶಿಕ್ಷಾರ್ಹ ಅಪರಾಧ , ಸಾರ್ವಜನಿಕರ ಅರ್ಜಿಗಳನ್ನು ನಿಗದಿತ ಅವಧಿಯಲ್ಲಿ ವಿಲೇವಾರಿ ಮಾಡಬೇಕು ಎಂದ್ರು.

Conclusion:ಇನ್ನೂ ಇತ್ತಿಚೀಗೆ ಮೆಡಿಕಲ್‌ಗಳಲ್ಲಿ ಪರವಾನಗಿ ಪಡೆಯದ ವ್ಯಕ್ತಿಗಳು ಔಷಧ ವಿತರಣೆ ಮಾಡುವುದು ಕಂಡುಬರುತ್ತಿದೆ, ಇದರಿಂದ ಸಾರ್ವಜನಿಕರ ಜೀವದ ಜೊತೆಗೆ ಚೆಲ್ಲಾಟವಾಡಿದಂತಾಗುತ್ತದೆ,ಜೀವ ಹಾನಿ ಕೂಡ ಸಂಭವಿಸಬಹುದು . ಆದ್ದರಿಂದ ಪರವಾನಗಿ ಹೊಂದಿದ ವ್ಯಕ್ತಿಗಳು ಮಾತ್ರ ಔಷಧ ವಿತರಣೆ ಮಾಡುಂವತೆ ಸಂಬಂಧಿಸಿದ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ತಿಳಿಸಿದ್ರು..
ETV Bharat Logo

Copyright © 2024 Ushodaya Enterprises Pvt. Ltd., All Rights Reserved.