ETV Bharat / state

ಯಾದಗಿರಿಯಲ್ಲಿ ಕಾಲುವೆ ನವೀಕರಣಕ್ಕೆ ಒತ್ತಾಯ.. ಶೋಷಿತರ ಪರ ಹೋರಾಟ ಸಮಿತಿ ಪ್ರತಿಭಟನೆ.. - ಕೃಷ್ಣಾ ಭಾಗ್ಯ ಜಲನಿಗಮ ವ್ಯಾಪ್ತಿಯ ಎಡದಂಡೆ ಕಾಲುವೆ ನವೀಕರಣಕ್ಕೆ ಒತ್ತಾಯ

ಕಾಲುವೆಯ ಕೊನೆ ಭಾಗದವರೆಗೂ ನೀರು ತಲುಪಿಸುವಂತೆ ಕಾಲುವೆಯ ರಿಪೇರಿ ಕಾಮಗಾರಿ ಮಾಡುವಂತೆ ಪ್ರತಿಭಟನಾನಿರತ ಕಾರ್ಯಕರ್ತರು ಒತ್ತಾಯಿಸಿದರು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದೆಂದು ಈ ಸಂದರ್ಭದಲ್ಲಿ ಎಚ್ಚರಿಕೆ ನೀಡಿದರು.

protest-for-build-canal-of-krishna-bhagya-water-board-in-yadagiri
ಕಾಲುವೆ ನವೀಕರಣಕ್ಕೆ ಒತ್ತಾಯಿಸಿ ಶೋಷಿತರ ಪರ ಹೋರಾಟ ಸಮಿತಿ ಕಾರ್ಯಕರ್ತರಿಂದ ಪ್ರತಿಭಟನೆ
author img

By

Published : Feb 18, 2020, 12:18 PM IST

ಯಾದಗಿರಿ: ಕಾಲುವೆ ನವೀಕರಣಕ್ಕೆ ಒತ್ತಾಯಿಸಿ ಶೋಷಿತರ ಪರ ಹೋರಾಟ ಸಮಿತಿ ಕಾರ್ಯಕರ್ತರು ರಸ್ತೆ ತಡೆದು ಸುರಪುರದಲ್ಲಿ ಪ್ರತಿಭಟನೆ ನಡೆಸಿದ್ರು.

ನಗರದ ಗಾಂಧಿ ವೃತ್ತದ ಬಳಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರದ ಕೃಷ್ಣ ಭಾಗ್ಯ ಜಲ ನಿಗಮ ವ್ಯಾಪ್ತಿಯ ಎಡದಂಡೆ ಕಾಲುವೆ ನವೀಕರಣಕ್ಕೆ ಒತ್ತಾಯಿಸಿದರು.

ಕಾಲುವೆ ನವೀಕರಣಕ್ಕೆ ಒತ್ತಾಯಿಸಿ ಶೋಷಿತರ ಪರ ಹೋರಾಟ ಸಮಿತಿಯಿಂದ ಪ್ರತಿಭಟನೆ..

ಶಹಾಪುರದ ಭೀಮರಾಯನಗುಡಿ ವ್ಯಾಪ್ತಿ ಓಎಂ ಡಿವಿಜನ್ ಉಪಕಾಲುವೆ ನಂ.6,8 ಡಿಸ್ಟ್ರಬ್ಯೂಟರ್‌ನ ಕಾಲುವೆಗಳು ಅಲ್ಲಲ್ಲಿ ಒಡೆದು ಹಾಳಾಗಿ ಕಾಲುವೆ ನೀರು ವ್ಯರ್ಥವಾಗ್ತಿದೆ. ಈಗಾಗಲೇ ಕೇಂದ್ರ ಸರ್ಕಾರ 2019-20ರಲ್ಲಿ ಕ್ಯಾನಲ್ ರಿಪೇರಿಗೆ ಹಣ ಬಿಡುಗಡೆ ಮಾಡಿದೆ. ಸರ್ಕಾರ ಈಗಾಗಲೇ ಟೆಂಡರ್ ಕರೆಯಲು ಮುಂದಾಗಿದೆ. ಕೆಬಿಜೆಎನ್ ಎಲ್ ವ್ಯಾಪ್ತಿಯ ಕ್ಲೂಜರ್ ಪ್ರಕಾರ ಕಾಲುವೆ ರಿಪೇರಿ ಮಾಡ್ಬೇಕು. ಅಧಿಕಾರಿಗಳು ರಿಪೇರಿಗೆ ಬಂದ ಹಣವನ್ನು ಪ್ರಭಾವಿಗಳ ಒತ್ತಡದಿಂದ ದುರುಪಯೋಗ ಪಡಿಸಿಕೊಳ್ಳಬಾರದು ಎಂದು ಆಗ್ರಹಿಸಿದ್ರು.

ಕಾಲುವೆಯ ಕೊನೆ ಭಾಗದವರೆಗೂ ನೀರು ತಲುಪಿಸುವಂತೆ ಕಾಲುವೆಯ ರಿಪೇರಿ ಕಾಮಗಾರಿ ಮಾಡುವಂತೆ ಪ್ರತಿಭಟನಾನಿರತ ಕಾರ್ಯಕರ್ತರು ಒತ್ತಾಯಿಸಿದರು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದೆಂದು ಈ ಸಂದರ್ಭದಲ್ಲಿ ಎಚ್ಚರಿಕೆ ನೀಡಿದರು.

ಯಾದಗಿರಿ: ಕಾಲುವೆ ನವೀಕರಣಕ್ಕೆ ಒತ್ತಾಯಿಸಿ ಶೋಷಿತರ ಪರ ಹೋರಾಟ ಸಮಿತಿ ಕಾರ್ಯಕರ್ತರು ರಸ್ತೆ ತಡೆದು ಸುರಪುರದಲ್ಲಿ ಪ್ರತಿಭಟನೆ ನಡೆಸಿದ್ರು.

ನಗರದ ಗಾಂಧಿ ವೃತ್ತದ ಬಳಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರದ ಕೃಷ್ಣ ಭಾಗ್ಯ ಜಲ ನಿಗಮ ವ್ಯಾಪ್ತಿಯ ಎಡದಂಡೆ ಕಾಲುವೆ ನವೀಕರಣಕ್ಕೆ ಒತ್ತಾಯಿಸಿದರು.

ಕಾಲುವೆ ನವೀಕರಣಕ್ಕೆ ಒತ್ತಾಯಿಸಿ ಶೋಷಿತರ ಪರ ಹೋರಾಟ ಸಮಿತಿಯಿಂದ ಪ್ರತಿಭಟನೆ..

ಶಹಾಪುರದ ಭೀಮರಾಯನಗುಡಿ ವ್ಯಾಪ್ತಿ ಓಎಂ ಡಿವಿಜನ್ ಉಪಕಾಲುವೆ ನಂ.6,8 ಡಿಸ್ಟ್ರಬ್ಯೂಟರ್‌ನ ಕಾಲುವೆಗಳು ಅಲ್ಲಲ್ಲಿ ಒಡೆದು ಹಾಳಾಗಿ ಕಾಲುವೆ ನೀರು ವ್ಯರ್ಥವಾಗ್ತಿದೆ. ಈಗಾಗಲೇ ಕೇಂದ್ರ ಸರ್ಕಾರ 2019-20ರಲ್ಲಿ ಕ್ಯಾನಲ್ ರಿಪೇರಿಗೆ ಹಣ ಬಿಡುಗಡೆ ಮಾಡಿದೆ. ಸರ್ಕಾರ ಈಗಾಗಲೇ ಟೆಂಡರ್ ಕರೆಯಲು ಮುಂದಾಗಿದೆ. ಕೆಬಿಜೆಎನ್ ಎಲ್ ವ್ಯಾಪ್ತಿಯ ಕ್ಲೂಜರ್ ಪ್ರಕಾರ ಕಾಲುವೆ ರಿಪೇರಿ ಮಾಡ್ಬೇಕು. ಅಧಿಕಾರಿಗಳು ರಿಪೇರಿಗೆ ಬಂದ ಹಣವನ್ನು ಪ್ರಭಾವಿಗಳ ಒತ್ತಡದಿಂದ ದುರುಪಯೋಗ ಪಡಿಸಿಕೊಳ್ಳಬಾರದು ಎಂದು ಆಗ್ರಹಿಸಿದ್ರು.

ಕಾಲುವೆಯ ಕೊನೆ ಭಾಗದವರೆಗೂ ನೀರು ತಲುಪಿಸುವಂತೆ ಕಾಲುವೆಯ ರಿಪೇರಿ ಕಾಮಗಾರಿ ಮಾಡುವಂತೆ ಪ್ರತಿಭಟನಾನಿರತ ಕಾರ್ಯಕರ್ತರು ಒತ್ತಾಯಿಸಿದರು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದೆಂದು ಈ ಸಂದರ್ಭದಲ್ಲಿ ಎಚ್ಚರಿಕೆ ನೀಡಿದರು.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.