ETV Bharat / state

ಉಚಿತ ರೇಷನ್​ ನೀಡಲು ಹಣ ಪಡೆದ ಆರೋಪ: ವಿಡಿಯೋ ವೈರಲ್​​​ - Baikaballa village fair price shop video

ಸಂಗಣ್ಣ ಅಗ್ನಿ ಎಂಬುವರಿಗೆ ಸೇರಿದ ನ್ಯಾಯಬೆಲೆ ಅಂಗಡಿ ಸಂಖ್ಯೆ 18ರಲ್ಲಿ ನೀಲಕಂಠ ರತ್ತಾಳ ಎಂಬ ವ್ಯಕ್ತಿ ಹಣ ವಸೂಲಿ ಮಾಡುತ್ತಿರುವುದಾಗಿ ತಿಳಿದು ಬಂದಿದ್ದು, ವರ್ತಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

surapura-fair-price-shop-video-viral
ಬೈಚಬಾಳ ಗ್ರಾಮದ ನ್ಯಾಯಬೆಲೆ ಅಂಗಡಿ
author img

By

Published : Mar 20, 2021, 10:56 PM IST

ಸುರಪುರ: ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಬೈಚಬಾಳ ಗ್ರಾಮದ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರದಾರರಿಂದ ಹಣ ಪಡೆಯುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ವೈರಲ್​​​ ವಿಡಿಯೋ

ಸರ್ಕಾರ ಕೊಡುವ ಉಚಿತ ಪಡಿತರ ಅಕ್ಕಿ ಬೇಕಂದ್ರೆ 10 ರೂ. ಜೊತೆಗೆ ನ್ಯಾಯಬೆಲೆ ಅಂಗಡಿ ವರ್ತಕ ಬೆರಳಚ್ಚು ಪಡೆಯುವುದಕ್ಕೂ 10 ರೂ. ಪಡೆಯುತ್ತಾರೆ ಒಟ್ಟು 20 ರೂ ವಸೂಲಿ ಮಾಡುತ್ತಾರೆ ಎಂಬ ಆರೋಪ ಕೇಳಿಬಂದಿದೆ.

ಸಂಗಣ್ಣ ಅಗ್ನಿ ಎಂಬುವರಿಗೆ ಸೇರಿದ ನ್ಯಾಯ ಬೆಲೆ ಅಂಗಡಿ ಸಂಖ್ಯೆ 18ರಲ್ಲಿ ನೀಲಕಂಠ ರತ್ತಾಳ ಎಂಬ ವ್ಯಕ್ತಿ ಹಣ ವಸೂಲಿ ಮಾಡುತ್ತಿರುವುದಾಗಿ ತಿಳಿದು ಬಂದಿದ್ದು, ವರ್ತಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಹಣ ಪಡೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದೆ.

ಸುರಪುರ: ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಬೈಚಬಾಳ ಗ್ರಾಮದ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರದಾರರಿಂದ ಹಣ ಪಡೆಯುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ವೈರಲ್​​​ ವಿಡಿಯೋ

ಸರ್ಕಾರ ಕೊಡುವ ಉಚಿತ ಪಡಿತರ ಅಕ್ಕಿ ಬೇಕಂದ್ರೆ 10 ರೂ. ಜೊತೆಗೆ ನ್ಯಾಯಬೆಲೆ ಅಂಗಡಿ ವರ್ತಕ ಬೆರಳಚ್ಚು ಪಡೆಯುವುದಕ್ಕೂ 10 ರೂ. ಪಡೆಯುತ್ತಾರೆ ಒಟ್ಟು 20 ರೂ ವಸೂಲಿ ಮಾಡುತ್ತಾರೆ ಎಂಬ ಆರೋಪ ಕೇಳಿಬಂದಿದೆ.

ಸಂಗಣ್ಣ ಅಗ್ನಿ ಎಂಬುವರಿಗೆ ಸೇರಿದ ನ್ಯಾಯ ಬೆಲೆ ಅಂಗಡಿ ಸಂಖ್ಯೆ 18ರಲ್ಲಿ ನೀಲಕಂಠ ರತ್ತಾಳ ಎಂಬ ವ್ಯಕ್ತಿ ಹಣ ವಸೂಲಿ ಮಾಡುತ್ತಿರುವುದಾಗಿ ತಿಳಿದು ಬಂದಿದ್ದು, ವರ್ತಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಹಣ ಪಡೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.