ಗುರುಮಠಕಲ್: ನ. 2ರಂದು ಗುರುಮಠಕಲ್ ಪುರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಪರ ಮತ ಚಲಾಯಿಸುವಂತೆ ಪಕ್ಷದ ಸದಸ್ಯರಿಗೆ ಬ್ಲಾಕ್ ಘಟಕದ ಅಧ್ಯಕ್ಷ ಮಹಿಪಾಲರೆಡ್ಡಿ ಸೂಚಿಸಿದ್ದಾರೆ.
ಪಕ್ಷದ ಕಾರ್ಯಾಲಯದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಅಧಿಕೃತ ಅಭ್ಯರ್ಥಿ ಸೈಯದ್ ಖಾಜಾ ಮೈನೋದ್ದಿನ್ ಆಯ್ಕೆಗೆ ಪಕ್ಷದ ಎಲ್ಲಾ ಸದಸ್ಯರು ಮತ ಚಲಾಯಿಸಬೇಕು.
ಯಾರದ್ರು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದರೆ ವಿಪ್ ಜಾರಿ ಮಾಡಲಾಗುವುದು ಎಂದು ಎಚ್ಚರಿಸಿದರು. ಪುರಸಭೆಯನ್ನು ಪ್ರತಿನಿಧಿಸುತ್ತಿರುವ ಕಾಂಗ್ರೆಸ್ನ 12 ಸದಸ್ಯರಲ್ಲಿ 9 ಜನ ಸಭೆಗೆ ಹಾಜರಾಗಿದ್ದು, ಮೂವರು ಗೈರಾಗಿದ್ದಾರೆ ಎಂಬ ಮಾಹಿತಿ ಇದೆ.