ETV Bharat / state

ಟಂಟಂ-ಲಾರಿ ನಡುವೆ ಭೀಕರ ಅಪಘಾತ; ಸ್ಥಳದಲ್ಲೇ ಐವರ ಸಾವು

author img

By

Published : Apr 21, 2021, 11:53 AM IST

Updated : Apr 21, 2021, 1:25 PM IST

Terrible accident between auto and lorry
ಭೀಕರ ಅಪಘಾತ

11:50 April 21

ಕೂಲಿ ಕೆಲಸಕ್ಕೆ ಹೋಗುತ್ತಿದ್ದ ಕಾರ್ಮಿಕರ ದುರ್ಮರಣ

ಭೀಕರ ಅಪಘಾತದ ದೃಶ್ಯ

ಯಾದಗಿರಿ : ಟಂ ಟಂ ಆಟೋ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಸ್ಥಳದಲ್ಲಿಯೇ ಐವರು ಕಾರ್ಮಿಕರು ಮೃತಪಟ್ಟಿರುವ ಘಟನೆ ಜಿಲ್ಲೆಯ ಶಹಾಪುರ ತಾಲೂಕಿನ ಕೊಲ್ಲೂರು ಎಂ ಗ್ರಾಮದ ಬಳಿ ನಡೆದಿದೆ. 

ಅಯ್ಯಮ್ಮ (40), ಶರಣಮ್ಮ (40), ಕಾಸಿಂಬೀ (40), ಭೀಮಬಾಯಿ (40), ದೇವೆಂದ್ರಮ್ಮ (70) ಮೃತಪಟ್ಟ ದುರ್ದೈವಿಗಳು ಎಂದು ತಿಳಿದು ಬಂದಿದೆ. ಮೃತರೆಲ್ಲರೂ ವಡಗೇರಾ ತಾಲೂಕಿನ ಮುನಮುಟಗಿ ಗ್ರಾಮದವರಾಗಿದ್ದು ಗಾಯಾಳುಗಳನ್ನ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. 

ಕಾರ್ಮಿಕರು ಮುನಮುಟಗಿ ಗ್ರಾಮದಿಂದ ದೇವದುರ್ಗದ ಕಡೆ ಕೂಲಿ ಕೆಲಸಕ್ಕಾಗಿ ಟಂಟಂನಲ್ಲಿ ತೆರಳುತ್ತಿದ್ದ ವೇಳೆ ಈ ಘೋರ ದುರಂತ ಸಂಭವಿಸಿದೆ. ಇನ್ನು ಸ್ಥಳಕ್ಕೆ ಆಗಮಿಸಿದ ಶಹಾಪುರ​ ಠಾಣಾ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

11:50 April 21

ಕೂಲಿ ಕೆಲಸಕ್ಕೆ ಹೋಗುತ್ತಿದ್ದ ಕಾರ್ಮಿಕರ ದುರ್ಮರಣ

ಭೀಕರ ಅಪಘಾತದ ದೃಶ್ಯ

ಯಾದಗಿರಿ : ಟಂ ಟಂ ಆಟೋ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಸ್ಥಳದಲ್ಲಿಯೇ ಐವರು ಕಾರ್ಮಿಕರು ಮೃತಪಟ್ಟಿರುವ ಘಟನೆ ಜಿಲ್ಲೆಯ ಶಹಾಪುರ ತಾಲೂಕಿನ ಕೊಲ್ಲೂರು ಎಂ ಗ್ರಾಮದ ಬಳಿ ನಡೆದಿದೆ. 

ಅಯ್ಯಮ್ಮ (40), ಶರಣಮ್ಮ (40), ಕಾಸಿಂಬೀ (40), ಭೀಮಬಾಯಿ (40), ದೇವೆಂದ್ರಮ್ಮ (70) ಮೃತಪಟ್ಟ ದುರ್ದೈವಿಗಳು ಎಂದು ತಿಳಿದು ಬಂದಿದೆ. ಮೃತರೆಲ್ಲರೂ ವಡಗೇರಾ ತಾಲೂಕಿನ ಮುನಮುಟಗಿ ಗ್ರಾಮದವರಾಗಿದ್ದು ಗಾಯಾಳುಗಳನ್ನ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. 

ಕಾರ್ಮಿಕರು ಮುನಮುಟಗಿ ಗ್ರಾಮದಿಂದ ದೇವದುರ್ಗದ ಕಡೆ ಕೂಲಿ ಕೆಲಸಕ್ಕಾಗಿ ಟಂಟಂನಲ್ಲಿ ತೆರಳುತ್ತಿದ್ದ ವೇಳೆ ಈ ಘೋರ ದುರಂತ ಸಂಭವಿಸಿದೆ. ಇನ್ನು ಸ್ಥಳಕ್ಕೆ ಆಗಮಿಸಿದ ಶಹಾಪುರ​ ಠಾಣಾ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Last Updated : Apr 21, 2021, 1:25 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.