ETV Bharat / state

ಕೊರೊನಾ ವಾರಿಯರ್ಸ್​ಗೆ ಶಾಸಕರಿಂದ 'ಪುಷ್ಪಾರ್ಚನೆ'..

author img

By

Published : May 6, 2020, 7:58 PM IST

ಬೆಂಗಳೂರು ಹಾಗೂ ಮೊದಲಾದ ಭಾಗದಿಂದ ಊರಿಗೆ ಬಂದ ಜನರ ಬಗ್ಗೆ ಎಚ್ಚರದಿಂದ ಇರಬೇಕು, ಇಂತವರ ಬಗ್ಗೆ ಆಶಾಕಾರ್ಯಕರ್ತೆಯರಿಗೆ ಗ್ರಾಮಸ್ಥರು ಮಾಹಿತಿ ನೀಡಬೇಕು ಎಂದು ಶಾಸಕ ವೆಂಕಟರೆಡ್ಡಿ ಮುದ್ನಾಳ ಜನರಿಗೆ ಸೂಚಿಸಿದ್ದಾರೆ.

Tribute to the Corona Warriors
ಕೊರೊನಾ ವಾರಿಯರ್ಸ್​ಗೆ ಶಾಸಕರಿಂದ 'ಪುಷ್ಪಾರ್ಚನೆ

ಯಾದಗಿರಿ : ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದ ಗ್ರಾಮ ಪಂಚಾಯತ್ ಕಾರ್ಯಾಲಯದ ಆವರಣದಲ್ಲಿ ಶಾಸಕ ವೆಂಕಟರೆಡ್ಡಿ ಮುದ್ನಾಳ ಅವರಿಂದ ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಸಿಬ್ಬಂದಿ,ಪೊಲೀಸ್​ ಸಿಬ್ಬಂದಿಗೆ ಪುಷ್ಪವನ್ನು ಹಾಕಿ ಗೌರವ ಸಲ್ಲಿಸಲಾಯಿತು.

ಲಾಕ್​ಡೌನ್​ ಆರಂಭವಾದ ದಿನದಿಂದ ಈವರೆಗೆ ಜೀವದ ಹಂಗು ತೊರೆದು ಕೊವೀಡ್-19 ವಿರುದ್ಧ ಹಗಲಿರುಳು ಹೋರಾಟ ಮಾಡುತ್ತಿರುವ ಕೊರೊನಾ ವಾರಿಯರ್ಸ್​ಗಳಿಗೆ ಪುಷ್ಪ ಅರ್ಪಿಸಿ ಗೌರವಿಸಲಾಯಿತು.

ಕೊರೊನಾ ವಾರಿಯರ್ಸ್​ಗೆ ಶಾಸಕರಿಂದ 'ಪುಷ್ಪಾರ್ಚನೆ..

ಈ ವೇಳೆ ಮಾತನಾಡಿದ ಶಾಸಕರು, ಬೆಂಗಳೂರು ಹಾಗೂ ಮೊದಲಾದ ಭಾಗದಿಂದ ಊರಿಗೆ ಬಂದ ಜನರ ಬಗ್ಗೆ ಎಚ್ಚರದಿಂದ ಇರಬೇಕು, ಇಂತವರ ಬಗ್ಗೆ ಆಶಾಕಾರ್ಯಕರ್ತೆಯರಿಗೆ ಗ್ರಾಮಸ್ಥರು ಮಾಹಿತಿ ನೀಡಬೇಕು, ಹಳ್ಳಿಯಲ್ಲಿ ಗುಂಪು ಗುಂಪಾಗಿ ಕುಳಿತುಕೊಳ್ಳದೆ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕೆಂದರು.

ಯಾದಗಿರಿ : ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದ ಗ್ರಾಮ ಪಂಚಾಯತ್ ಕಾರ್ಯಾಲಯದ ಆವರಣದಲ್ಲಿ ಶಾಸಕ ವೆಂಕಟರೆಡ್ಡಿ ಮುದ್ನಾಳ ಅವರಿಂದ ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಸಿಬ್ಬಂದಿ,ಪೊಲೀಸ್​ ಸಿಬ್ಬಂದಿಗೆ ಪುಷ್ಪವನ್ನು ಹಾಕಿ ಗೌರವ ಸಲ್ಲಿಸಲಾಯಿತು.

ಲಾಕ್​ಡೌನ್​ ಆರಂಭವಾದ ದಿನದಿಂದ ಈವರೆಗೆ ಜೀವದ ಹಂಗು ತೊರೆದು ಕೊವೀಡ್-19 ವಿರುದ್ಧ ಹಗಲಿರುಳು ಹೋರಾಟ ಮಾಡುತ್ತಿರುವ ಕೊರೊನಾ ವಾರಿಯರ್ಸ್​ಗಳಿಗೆ ಪುಷ್ಪ ಅರ್ಪಿಸಿ ಗೌರವಿಸಲಾಯಿತು.

ಕೊರೊನಾ ವಾರಿಯರ್ಸ್​ಗೆ ಶಾಸಕರಿಂದ 'ಪುಷ್ಪಾರ್ಚನೆ..

ಈ ವೇಳೆ ಮಾತನಾಡಿದ ಶಾಸಕರು, ಬೆಂಗಳೂರು ಹಾಗೂ ಮೊದಲಾದ ಭಾಗದಿಂದ ಊರಿಗೆ ಬಂದ ಜನರ ಬಗ್ಗೆ ಎಚ್ಚರದಿಂದ ಇರಬೇಕು, ಇಂತವರ ಬಗ್ಗೆ ಆಶಾಕಾರ್ಯಕರ್ತೆಯರಿಗೆ ಗ್ರಾಮಸ್ಥರು ಮಾಹಿತಿ ನೀಡಬೇಕು, ಹಳ್ಳಿಯಲ್ಲಿ ಗುಂಪು ಗುಂಪಾಗಿ ಕುಳಿತುಕೊಳ್ಳದೆ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕೆಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.