ETV Bharat / state

ಕೃಷ್ಣಾ ಎಡದಂಡೆ ಕಾಲುವೆಯ ಸೇತುವೆಗೆ ಕಾರು ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ಕಾಲುವೆಯ ಸೇತುವಗೆ ಕಾರು ಗುದ್ದಿ ಸ್ಥಳದಲ್ಲೇ ಇಬ್ಬರ ಸಾವು - ಕೃಷ್ಣಾ ಎಡದಂಡೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಅವಘಡ.

author img

By

Published : Jan 1, 2023, 10:16 PM IST

two-people-died-on-the-spot-after-the-car-collided
ಕಾಲುವೆಯ ಸೇತುವೆಗೆ ಕಾರು ಡಿಕ್ಕಿ: ಸ್ಥಳದಲ್ಲಿಯೇ ಇಬ್ಬರು ಸಾವು

ಯಾದಗಿರಿ: ಜಿಲ್ಲೆಯ ಹುಣಸಗಿ ತಾಲೂಕಿನ ಕೊಡೆಕಲ್ ಸಮೀಪದ ರಾಜನಕೋಳೂರು ಬಳಿಯ ಕೃಷ್ಣಾ ಎಡದಂಡೆ ಕಾಲುವೆ ಬಳಿ ಕಾಲುವೆಯ ಸೇತುವೆಗೆ ಕಾರು ಡಿಕ್ಕಿ ಹೊಡೆದು ಇಬ್ಬರು ದುರ್ಮರಣಕ್ಕೀಡಾಗಿದ್ದಾರೆ. ಕೃಷ್ಣಾ ಎಡದಂಡೆ ಕಾಲುವೆಯಲ್ಲಿ ಬರುತ್ತಿರುವಾಗ ಡಿವೈಡರ್‌ಗೆ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ.

ಬಲಶೆಟ್ಟಿಹಾಳ ಗ್ರಾಮದಿಂದ ನಾರಾಯಣಪುರ ಗ್ರಾಮದ ಕಡೆಗೆ ಕಾರು ಪ್ರಯಾಣಿಸುತ್ತಿದ್ದ ವೇಳೆ ಡಿಕ್ಕಿಯಾಗಿದೆ. ಕಾರಿನಲ್ಲಿದ್ದ ಮಲ್ಲಿಕಾರ್ಜುನ ಮಡಿವಾಳ (35) ಮತ್ತು ಪರಸಪ್ಪ ಚಲವಾದಿ (32) ಎಂಬುವರು ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಡಿವೈಎಸ್‌ಪಿ ಟಿ. ಮಂಜುನಾಥ ಮತ್ತು ಸಿಪಿಐ ಎಂ.ಬಿ. ಚಿಕ್ಕಣ್ಣನವರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಕುರಿತು ಕೊಡೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಭೀಕರ ರಸ್ತೆ ಅಪಘಾತ: ದೇವಸ್ಥಾನಕ್ಕೆ ಬಂದಿದ್ದ ಎಂಟು ಜನರ ದುರ್ಮರಣ

ಯಾದಗಿರಿ: ಜಿಲ್ಲೆಯ ಹುಣಸಗಿ ತಾಲೂಕಿನ ಕೊಡೆಕಲ್ ಸಮೀಪದ ರಾಜನಕೋಳೂರು ಬಳಿಯ ಕೃಷ್ಣಾ ಎಡದಂಡೆ ಕಾಲುವೆ ಬಳಿ ಕಾಲುವೆಯ ಸೇತುವೆಗೆ ಕಾರು ಡಿಕ್ಕಿ ಹೊಡೆದು ಇಬ್ಬರು ದುರ್ಮರಣಕ್ಕೀಡಾಗಿದ್ದಾರೆ. ಕೃಷ್ಣಾ ಎಡದಂಡೆ ಕಾಲುವೆಯಲ್ಲಿ ಬರುತ್ತಿರುವಾಗ ಡಿವೈಡರ್‌ಗೆ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ.

ಬಲಶೆಟ್ಟಿಹಾಳ ಗ್ರಾಮದಿಂದ ನಾರಾಯಣಪುರ ಗ್ರಾಮದ ಕಡೆಗೆ ಕಾರು ಪ್ರಯಾಣಿಸುತ್ತಿದ್ದ ವೇಳೆ ಡಿಕ್ಕಿಯಾಗಿದೆ. ಕಾರಿನಲ್ಲಿದ್ದ ಮಲ್ಲಿಕಾರ್ಜುನ ಮಡಿವಾಳ (35) ಮತ್ತು ಪರಸಪ್ಪ ಚಲವಾದಿ (32) ಎಂಬುವರು ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಡಿವೈಎಸ್‌ಪಿ ಟಿ. ಮಂಜುನಾಥ ಮತ್ತು ಸಿಪಿಐ ಎಂ.ಬಿ. ಚಿಕ್ಕಣ್ಣನವರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಕುರಿತು ಕೊಡೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಭೀಕರ ರಸ್ತೆ ಅಪಘಾತ: ದೇವಸ್ಥಾನಕ್ಕೆ ಬಂದಿದ್ದ ಎಂಟು ಜನರ ದುರ್ಮರಣ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.