ETV Bharat / state

ಯಾದಗಿರಿಯ ಯಾವ ಬಿಜೆಪಿ ನಾಯಕರಿಗೆ ಮಂತ್ರಿಗಿರಿ ನೀಡ್ತಾರೆ ಬಿಎಸ್​ವೈ?

ರಾಜ್ಯದ ಸಿಎಂ ಆಗಿ ಯಡಿಯೂರಪ್ಪ ಪದಗ್ರಹಣವಾದ ನಂತರ ರಾಜಕೀಯ ಚಟುವಟಿಕೆ ಗರಿಗೆದರಿದ್ದು,ಮಂತ್ರಿ ಪಟ್ಟ ಯಾರಿಗೆ ಒಲಿಯಲಿದೆ ಎಂಬ ಕುರಿತು ಚರ್ಚೆಗಳು ಆರಂಭವಾಗಿವೆ.

author img

By

Published : Jul 28, 2019, 1:43 AM IST

ಯಡಿಯೂರಪ್ಪ ನೂತನ ಸರ್ಕಾರದಲ್ಲಿ ಯಾರಾಗ್ತಾರೆ ಮಂತ್ರಿ..?

ಯಾದಗಿರಿ: ರಾಜ್ಯದ ನೂತನ ಸಿಎಂ ಆಗಿ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಜಿಲ್ಲೆಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಜಿಲ್ಲೆಯ ಯಾವ ಜಿಜೆಪಿ ಮುಖಂಡರಿಗೆ ಮಂತ್ರಿಗಿರಿ ಸಿಗಲಿದೆ ಎಂಬ ಚರ್ಚೆಗಳು ಜೋರಾಗಿ ನಡೆಯುತ್ತಿವೆ.

ಯಾದಗಿರಿ ಜಿಲ್ಲೆಯಲ್ಲಿ ಶಹಾಪುರ, ಸುರಪುರ , ಗುರುಮಿಠಕಲ್, ಹಾಗೂ ಯಾದಗಿರಿ ಸೇರಿ ಒಟ್ಟು ನಾಲ್ಕು ವಿಧಾನಸಭಾ ಕ್ಷೇತ್ರಗಳಿವೆ. ಅದರಲ್ಲಿ ಸುರಪುರ ಹಾಗೂ ಯಾದಗಿರಿ ವಿಧಾನಸಭಾ ಕ್ಷೇತ್ರಗಳು ಬಿಜೆಪಿ ತೆಕ್ಕೆಗೆ ಸೇರ್ಪಡೆಯಾಗಿವೆ. ಸುರಪುರ ವಿಧಾನಸಭಾ ಕ್ಷೇತ್ರದ ರಾಜುಗೌಡ ಹಾಗೂ ಯಾದಗಿರಿ ವಿಧಾನಸಭಾ ಕ್ಷೇತ್ರದ ವೆಂಕಟರೆಡ್ಡಿ ಮುದ್ನಾಳ ಬಿಜೆಪಿ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಶಹಾಪುರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಶರಣ ಬಸಪ್ಪ ದರ್ಶನಾಪುರ್ ಹಾಗೂ ಗುರುಮಿಠಕಲ್ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಪಕ್ಷದ ನಾಗಣ್ಣಗೌಡ ಕಂದಕೂರ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ಸುರಪುರ ವಿಧಾನಸಭಾ ಕ್ಷೇತ್ರದ ರಾಜುಗೌಡ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಯಡಿಯೂರಪ್ಪ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ. ಅಲ್ಲದೆ, ರಾಜುಗೌಡ ಎಸ್ಟಿ ಸಮುದಾಯದ ರಾಜ್ಯಾಧ್ಯಕ್ಷರಾಗಿದ್ದು, ನಾಯಕ ಸಮುದಾಯದಲ್ಲಿ ಅಪಾರ ಅಭಿಮಾನಿ ಬಳಗ ಹೊಂದಿದ್ದಾರೆ. ಅವರಿಗೆ ಅಭಿವೃದ್ಧಿ ಪರ ಕಾರ್ಯನಿರ್ವಹಿಸುವ ಹುಮ್ಮಸ್ಸಿದೆ ಎಂಬ ಮಾತುಗಳು ಕಮಲ ಪಕ್ಷದಲ್ಲಿ ಕೇಳಿ ಬರುತ್ತಿವೆ.

ಈ ಮೊದಲು ಬಿಎಸ್​ವೈ ಅಧಿಕಾರಾವಧಿಯಲ್ಲಿಯೆ ಯಾದಗಿರಿಯನ್ನು ಜಿಲ್ಲೆಯನ್ನಾಗಿ ಘೋಷಣೆ ಮಾಡಲಾಗಿತ್ತು. ಹಾಗಾಗಿ ಯಡಿಯೂರಪ್ಪ ಅವರಿಗೂ ಜಿಲ್ಲೆಗೂ ಅವಿನಾಭಾವ ನಂಟಿದೆ. ಜಿಲ್ಲೆಯಿಂದ ಯಾವ ನಾಯಕರಿಗೆ ಬಿಎಸ್​ವೈ ಮಂತ್ರಿಗಿರಿ ನೀಡ್ತಾರೆ ಎಂದು ಕಾದುನೋಡಬೇಕಿದೆ.

ಯಾದಗಿರಿ: ರಾಜ್ಯದ ನೂತನ ಸಿಎಂ ಆಗಿ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಜಿಲ್ಲೆಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಜಿಲ್ಲೆಯ ಯಾವ ಜಿಜೆಪಿ ಮುಖಂಡರಿಗೆ ಮಂತ್ರಿಗಿರಿ ಸಿಗಲಿದೆ ಎಂಬ ಚರ್ಚೆಗಳು ಜೋರಾಗಿ ನಡೆಯುತ್ತಿವೆ.

ಯಾದಗಿರಿ ಜಿಲ್ಲೆಯಲ್ಲಿ ಶಹಾಪುರ, ಸುರಪುರ , ಗುರುಮಿಠಕಲ್, ಹಾಗೂ ಯಾದಗಿರಿ ಸೇರಿ ಒಟ್ಟು ನಾಲ್ಕು ವಿಧಾನಸಭಾ ಕ್ಷೇತ್ರಗಳಿವೆ. ಅದರಲ್ಲಿ ಸುರಪುರ ಹಾಗೂ ಯಾದಗಿರಿ ವಿಧಾನಸಭಾ ಕ್ಷೇತ್ರಗಳು ಬಿಜೆಪಿ ತೆಕ್ಕೆಗೆ ಸೇರ್ಪಡೆಯಾಗಿವೆ. ಸುರಪುರ ವಿಧಾನಸಭಾ ಕ್ಷೇತ್ರದ ರಾಜುಗೌಡ ಹಾಗೂ ಯಾದಗಿರಿ ವಿಧಾನಸಭಾ ಕ್ಷೇತ್ರದ ವೆಂಕಟರೆಡ್ಡಿ ಮುದ್ನಾಳ ಬಿಜೆಪಿ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಶಹಾಪುರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಶರಣ ಬಸಪ್ಪ ದರ್ಶನಾಪುರ್ ಹಾಗೂ ಗುರುಮಿಠಕಲ್ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಪಕ್ಷದ ನಾಗಣ್ಣಗೌಡ ಕಂದಕೂರ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ಸುರಪುರ ವಿಧಾನಸಭಾ ಕ್ಷೇತ್ರದ ರಾಜುಗೌಡ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಯಡಿಯೂರಪ್ಪ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ. ಅಲ್ಲದೆ, ರಾಜುಗೌಡ ಎಸ್ಟಿ ಸಮುದಾಯದ ರಾಜ್ಯಾಧ್ಯಕ್ಷರಾಗಿದ್ದು, ನಾಯಕ ಸಮುದಾಯದಲ್ಲಿ ಅಪಾರ ಅಭಿಮಾನಿ ಬಳಗ ಹೊಂದಿದ್ದಾರೆ. ಅವರಿಗೆ ಅಭಿವೃದ್ಧಿ ಪರ ಕಾರ್ಯನಿರ್ವಹಿಸುವ ಹುಮ್ಮಸ್ಸಿದೆ ಎಂಬ ಮಾತುಗಳು ಕಮಲ ಪಕ್ಷದಲ್ಲಿ ಕೇಳಿ ಬರುತ್ತಿವೆ.

ಈ ಮೊದಲು ಬಿಎಸ್​ವೈ ಅಧಿಕಾರಾವಧಿಯಲ್ಲಿಯೆ ಯಾದಗಿರಿಯನ್ನು ಜಿಲ್ಲೆಯನ್ನಾಗಿ ಘೋಷಣೆ ಮಾಡಲಾಗಿತ್ತು. ಹಾಗಾಗಿ ಯಡಿಯೂರಪ್ಪ ಅವರಿಗೂ ಜಿಲ್ಲೆಗೂ ಅವಿನಾಭಾವ ನಂಟಿದೆ. ಜಿಲ್ಲೆಯಿಂದ ಯಾವ ನಾಯಕರಿಗೆ ಬಿಎಸ್​ವೈ ಮಂತ್ರಿಗಿರಿ ನೀಡ್ತಾರೆ ಎಂದು ಕಾದುನೋಡಬೇಕಿದೆ.

Intro:ಯಾದಗಿರಿ : ರಾಜ್ಯದ ನೂತನ ಸಿ ಎಂ ಆಗಿ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಜಿಲ್ಲೆಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೇದರಿದ್ದು ಜಿಲ್ಲಾ ಜಿಜೆಪಿ ಮುಖಂಡರಿಗೆ ಹಾಗೂ ಕಾರ್ಯಕರ್ತರಿಗೆ ಮಂತ್ರಗಿರಿ ಯಾರಿಗೆ ? ಎಂಬ ಪ್ರಶ್ನೆಗಳು ಕಾಡುತ್ತಿವೆ.

ಯಾದಗಿರಿ ಜಿಲ್ಲೆಯು ನಾಲ್ಕು ವಿಧಾನಸಭಾ ಕ್ಷೇತ್ರಗಳು ಹೊಂದಿದ್ದು ಶಹಾಪುರ, ಸುರಪೂರ , ಗುರುಮಿಠಕಲ್, ಹಾಗೂ ಯಾದಗಿರಿ ವಿಧಾನಸಭಾ ಕ್ಷೇತ್ರಗಳಿವೆ. ಅದರಲ್ಲಿ ಸುರಪುರ ಹಾಗೂ ಯಾದಗಿರಿ ವಿಧಾನಸಭಾ ಕ್ಷೇತ್ರಗಳು ಬಿಜೆಪಿ ತೆಕ್ಕೆಗೆ ಸೇರ್ಪಡೆಯಾಗಿವೆ.

ಸುರಪೂರ ವಿಧಾನಸಭಾ ಕ್ಷೇತ್ರದ ಶಾಸಕ ರಾಜುಗೌಡ ಹಾಗೂ ಯಾದಗಿರಿ ವಿಧಾನಸಭಾ ಕ್ಷೇತ್ರದಿಂದ ವೆಂಕಟರೆಡ್ಡಿ ಮುದ್ನಾಳ ಬಿಜಿಪಿ ಪಕ್ಷದಿಂದ ಆಯ್ಕೆಯಾಗಿದ್ದಾರೆ. ಶಹಾಪುರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದಿಂದ ಶರಣ ಬಸಪ್ಪ ದರ್ಶನಾಪುರ್ ಹಾಗೂ ಗುರುಮಿಠಕಲ್ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದಿಂದ ನಾಗಣ್ಣಗೌಡ ಕಂದಕೂರ ಆಯ್ಕೆಯಾಗಿದ್ದಾರೆ.

ಇತ್ತ ಸುರಪೂರ ವಿಧಾನಸಭಾ ಕ್ಷೇತ್ರದ ಶಾಸಕ ರಾಜುಗೌಡ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು ಯಡಿಯೂರಪ್ಪ ವಲಯದಲ್ಲಿ ಆಪ್ತರಾಗಿ ಗುರುತಿಸಿಕೊಂಡಿದ್ದಾರೆ. _2008 _ರಲ್ಲಿ ಯಡಿಯೂರಪ್ಪ ಸಚಿವ ಸಂಪೂಟದಲ್ಲಿ ಸಣ್ಣ ಕೈಗಾರಿಕೆ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. ಇತ್ತ ವೆಂಕಟರೆಡ್ಡಿ ಮುದ್ನಾಳ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದು ಯಡಿಯೂರಪ್ಪ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ.




Body:ಯಾದಗಿರಿ ಜಿಲ್ಲೆಗೆ ಯಡಿಯೂರಪ್ಪಗೆ ಅವಿನಾಭವ ಸಂಬಂಧವಿದೆ. ಇವರ ಅವಧಿಯಲ್ಲಿ ಯಾದಗಿರಿಯನ್ನು ಜಿಲ್ಲೆಯನ್ನಾಗಿ ಮಾಡಲಾಗಿದೆ. ಜೆಡಿಎಸ್ ಶಾಸಕ ನಾಗಣ್ಣಗೌಡ ಕಂದಕೂರ ಮಗ ಶರಣಗೌಡ ಕಂದಕೂರ ಆಡೀಯೋ ಕ್ಯಾಸೆಟ್ ಪ್ರಕರಣ ಮುಚ್ಚಿಹಾಕಲು ರಾಜುಗೌಡರಿಗೆ ಮಂತ್ರಗಿರಿ ಸ್ಥಾನವನ್ನು ನೀಡುವ ಮುಖಾಂತರ ಜಿಲ್ಲೆಯ ಹಿಡಿತ ಸಾಧಿಸಲು ಯಡಿಯೂರಪ್ಪ ಪ್ರಯತ್ನಿಸಬಹುದು ಎಂದು ಸಾರ್ವಜನಿಕರಲ್ಲಿ ಕೇಳಿಬರುತ್ತಿದೆ.




Conclusion:ಇತ್ತ ರಾಜುಗೌಡ ಎಸ್ಟಿ ಸಮುದಾಯದ ರಾಜ್ಯಧ್ಯಕ್ಷರಾಗಿದ್ದು ನಾಯಕ ಸಮುದಾಯದ ಜನರ ಅಪಾರ ಅಭಿಮಾನ ಬಳಗ ಹೊಂದಿದ್ದಾರೆ.ಅಭಿವೃದ್ಧಿ ಪರವಾಗಿ ಕಾರ್ಯನಿರ್ವಹಿಸುವ ಹುಮ್ಮಸ್ಸಿದೆ ಎಂದು ಕಮಲ ಪಕ್ಷದಲ್ಲಿ ಕೇಳಿ ಬರುತ್ತಿದೆ. ಆದ್ರೆ ಯಾರಿಗೆ ಮಂತ್ರಗಿರಿ ಸಿಗಲಿದೆ ಎಂದು ಕಾದನೋಡಬೇಕಾಗಿದೆ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.