ಯಾದಗಿರಿ: ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಇಂದು ಜಿಲ್ಲೆಗೆ ಭೇಟಿ ನೀಡಿದ್ದು, ಸಾಮಾಜಿಕ ಅಂತರ ಮೆರೆಯುವ ಮೂಲಕ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.
ಅಧಿಕಾರಿಗಳ ಜೊತೆ ಕೋವಿಡ್ 19 ಸಭೆ ಸೇರಿದಂತೆ ಹಲವು ಸರ್ಕಾರಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಸಚಿವರು ಜಿಲ್ಲೆಗೆ ಭೇಟಿ ನೀಡಿದ್ದರು. ಮೊದಲಿಗೆ ನಗರದ ಹಳೆ ಜಿಲ್ಲಾಸ್ಪತ್ರೆಯ ಆವರಣದಲ್ಲಿ ಆಯೋಜಿಸಲಾಗಿದ್ದ ಕೊರೊನಾ ಟೆಸ್ಟಿಂಗ್ ಲ್ಯಾಬ್ ಉದ್ಘಾಟಿಸಿದರು. ಈ ವೇಳೆ ಪ್ರಭು ಚವ್ಹಾಣ್ ಜೊತೆ ನೂರಾರು ಜನರ ಗುಂಪು ಸೇರಿದ್ರು. ಸ್ವತಃ ಸಚಿವ ಪ್ರಭು ಚವ್ಹಣ್ ಅವರಿಂದಲೇ ಸಾಮಾಜಿಕ ಅಂತರ ಉಲ್ಲಂಘನೆಯಾಗಿದೆ ಎಂಬ ಆರೋಪಗಳು ಕೇಳಿ ಬಂದಿವೆ.
ಸಚಿವರ ಜೊತೆ ಶಾಸಕರು, ಅಧಿಕಾರಿಗಳು ಕೂಡ ಸ್ಥಳದಲ್ಲಿದ್ದು, ಶಾಸಕರು ಹಾಗೂ ಅಧಿಕಾರಿಗಳಿಂದಲೂ ಸಾಮಾಜಿಕ ಅಂತರ ಮರಿಚಿಕೆಯಾಗಿದ್ದು ತೀವ್ರ ಮುಜುಗರಕ್ಕೆ ಕಾರಣವಾಯಿತು.
ಇನ್ನು, ಸಚಿವ ಪ್ರಭು ಚವ್ಹಾಣ್ ಭೇಟಿ ವೇಳ ಜಿಲ್ಲಾಧಿಕಾರಿ ಎಂ ಕುರ್ಮಾರಾವ್ ಹಾಗೂ ಪೊಲೀಸ್ ವರಿಷ್ಟಾಧಿಕಾರಿ ಋಷಿಕೇಶ್ ಭಗವಾನ್ ಉಪಸ್ಥಿತರಿದ್ದರು.