ಯಾದಗಿರಿ: ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಅಕಾಲಿಕ ಆಲಿಕಲ್ಲು ಮಳೆಯಿಂದ ಬೆಳೆ ಹಾನಿಯಾದ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಎಂ.ಕೂರ್ಮಾ ರಾವ್ ಭೇಟಿ ನೀಡಿ ಪರಿಶೀಲಿಸಿದರು.
![ಬೆಳೆಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ](https://etvbharatimages.akamaized.net/etvbharat/prod-images/kn-ydr-04-13-belehani-parishilane-av-7208689_13042020222315_1304f_1586796795_398.jpg)
ಕಳೆದ ಏಪ್ರಿಲ್ 7ರಂದು ಯಾದಗಿರಿ ಜಿಲ್ಲೆಯಲ್ಲಿ ಅಕಾಲಿಕ ಆಲಿಕಲ್ಲು ಮಳೆಯಿಂದ ಬೇಸಿಗೆ ಹಂಗಾಮಿನಲ್ಲಿ ಬೆಳೆಯಲಾದ ಭತ್ತ ಮತ್ತು ಸಜ್ಜೆ ಬೆಳೆಗಳು ಹಾನಿಯಾಗಿದ್ದವು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಶಹಾಪುರ ಮತ್ತು ವಡಗೇರಾ ತಾಲೂಕಿನ ಐಕೂರ್, ಅನಕಸೂಗೂರು, ಕುರಿಹಾಳ ಮತ್ತು ತುಮಕೂರು ಗ್ರಾಮಗಳಲ್ಲಿ ಬೆಳೆಹಾನಿಯಾದ ಪ್ರದೇಶಗಳಿಗೆ ಭೇಟಿ ನೀಡಿ, ರೈತರು ಹಾಗೂ ಅಧಿಕಾರಿಗಳಿಂದ ಹಾನಿಯಾದ ಬಗ್ಗೆ ಮಾಹಿತಿ ಪಡೆದರು.
![ಬೆಳೆಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ](https://etvbharatimages.akamaized.net/etvbharat/prod-images/kn-ydr-04-13-belehani-parishilane-av-7208689_13042020222315_1304f_1586796795_41.jpeg)
ಕೃಷಿ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಜಂಟಿ ಸಮೀಕ್ಷೆ ಮಾಡಿ ತಕ್ಷಣ ವರದಿ ಸಲ್ಲಿಸಲು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಸುರೇಶ ಅಂಕಲಗಿ ಮತ್ತು ಶಹಾಪುರ ಸಹಾಯಕ ಕೃಷಿ ನಿರ್ದೇಶಕ ಗೌತಮ ಹಾಜರಿದ್ದರು.