ETV Bharat / state

ಯಾದಗಿರಿ ಅಡುಗೆ ಅನಿಲ ಸಿಲಿಂಡರ್ ಸ್ಫೋಟ ಪ್ರಕರಣ : ಮೃತರ ಸಂಖ್ಯೆ 7ಕ್ಕೆ ಏರಿಕೆ

author img

By

Published : Mar 2, 2022, 3:41 PM IST

ಫೆಬ್ರವರಿ 25ರಂದು ಯಾದಗಿರಿಯಲ್ಲಿ ಸಂಭವಿಸಿದ್ದ ಸಿಲಿಂಡರ್ ಸ್ಫೋಟ ಅವಘಡಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಮೃತಪಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.

yadgiri-cylinder-blast-updates
ಅಡುಗೆ ಅನಿಲ ಸ್ಫೋಟ : ಮೃತಪಟ್ಟವರ ಸಂಖ್ಯೆ 7 ಏರಿಕೆ

ಯಾದಗಿರಿ: ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿಯ ಗ್ರಾಮದ ಕ್ಯಾಂಪಿನ ಮನೆಯೊಂದರಲ್ಲಿ ಫೆ.25ರಂದು ನಡೆಯುತ್ತಿದ್ದ ಸೀಮಂತ ಕಾರ್ಯಕ್ರಮದ ವೇಳೆ ಸಿಲಿಂಡರ್ ಸ್ಫೋಟಗೊಂಡು ನಡೆದ ದುರಂತದಲ್ಲಿ, ಕಲಬುರಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 19 ಗಾಯಾಳುಗಳ ಪೈಕಿ ಬುಧವಾರ ಮತ್ತಿಬ್ಬರು ಮೃತಪಟ್ಟಿದ್ದಾರೆ.

ಈ ದುರ್ಘಟನೆಯಲ್ಲಿ ಈವರೆಗೆ ಮೂವರು ಮಕ್ಕಳು ಸೇರಿ ಒಟ್ಟು 7 ಜನರು ಜೀವ ಕಳೆದುಕೊಂಡಂತಾಗಿದೆ. ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ಭೀಮರಾಯ (78) ಹಾಗೂ ವೀರಬಸಪ್ಪ (28) ಎನ್ನುವವರು ಸತತ ಐದು ದಿನಗಳ ಕಾಲ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ.

yadgiri-cylinder-blast-updates
ಮೃತಪಟ್ಟ ವೀರಬಸಪ್ಪ, ಭೀಮರಾಯ

ಒಂದೂವರೆ ವರ್ಷದ ಮಹಾಂತೇಶ್, ಆದ್ಯ (3), ಶ್ವೇತಾ (6), ವೀರಬಸಪ್ಪ (28), ಗಂಗಮ್ಮ (45), ಭೀಮರಾಯ (78), ನಿಂಗಮ್ಮ (80) ಈ ದುರಂತದಲ್ಲಿ ಈವರೆಗೆ ಮೃತಪಟ್ಟಿದ್ದು, ಇವರೆಲ್ಲರೂ ದೋರನಹಳ್ಳಿ ಗ್ರಾಮಸ್ಥರಾಗಿದ್ದಾರೆ.

ಕಲಬುರಗಿ ಜಿಮ್ಸ್ ಹಾಗೂ ಬಸವೇಶ್ವರ ಆಸ್ಪತ್ರೆ ಸೇರಿದಂತೆ ವಿವಿಧ ಖಾಸಗಿ ಆಸ್ಪತ್ರೆಗಳಲ್ಲಿ ಇನ್ನೂ 17 ಜನರು ಚಿಕಿತ್ಸೆ ಪಡೆಯುತ್ತಿದ್ದು, ಮೂರ್ನಾಲ್ಕು ಜನರ ಸ್ಥಿತಿ ಗಂಭೀರವಾಗಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಪ್ರಿಯಕರನ ಜೊತೆ ಸೇರಿ ಪುತ್ರನ ಹತ್ಯೆಗೈದ ತಾಯಿ; ಮೂವರು ಆರೋಪಿಗಳ ಬಂಧನ

ಗಾಯಾಳುಗಳ ಚಿಕಿತ್ಸೆ ವೆಚ್ಚವನ್ನು ಸರ್ಕಾರವೇ ಭರಿಸುವುದಾಗಿ ಹಾಗೂ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ.

ಯಾದಗಿರಿ: ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿಯ ಗ್ರಾಮದ ಕ್ಯಾಂಪಿನ ಮನೆಯೊಂದರಲ್ಲಿ ಫೆ.25ರಂದು ನಡೆಯುತ್ತಿದ್ದ ಸೀಮಂತ ಕಾರ್ಯಕ್ರಮದ ವೇಳೆ ಸಿಲಿಂಡರ್ ಸ್ಫೋಟಗೊಂಡು ನಡೆದ ದುರಂತದಲ್ಲಿ, ಕಲಬುರಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 19 ಗಾಯಾಳುಗಳ ಪೈಕಿ ಬುಧವಾರ ಮತ್ತಿಬ್ಬರು ಮೃತಪಟ್ಟಿದ್ದಾರೆ.

ಈ ದುರ್ಘಟನೆಯಲ್ಲಿ ಈವರೆಗೆ ಮೂವರು ಮಕ್ಕಳು ಸೇರಿ ಒಟ್ಟು 7 ಜನರು ಜೀವ ಕಳೆದುಕೊಂಡಂತಾಗಿದೆ. ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ಭೀಮರಾಯ (78) ಹಾಗೂ ವೀರಬಸಪ್ಪ (28) ಎನ್ನುವವರು ಸತತ ಐದು ದಿನಗಳ ಕಾಲ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ.

yadgiri-cylinder-blast-updates
ಮೃತಪಟ್ಟ ವೀರಬಸಪ್ಪ, ಭೀಮರಾಯ

ಒಂದೂವರೆ ವರ್ಷದ ಮಹಾಂತೇಶ್, ಆದ್ಯ (3), ಶ್ವೇತಾ (6), ವೀರಬಸಪ್ಪ (28), ಗಂಗಮ್ಮ (45), ಭೀಮರಾಯ (78), ನಿಂಗಮ್ಮ (80) ಈ ದುರಂತದಲ್ಲಿ ಈವರೆಗೆ ಮೃತಪಟ್ಟಿದ್ದು, ಇವರೆಲ್ಲರೂ ದೋರನಹಳ್ಳಿ ಗ್ರಾಮಸ್ಥರಾಗಿದ್ದಾರೆ.

ಕಲಬುರಗಿ ಜಿಮ್ಸ್ ಹಾಗೂ ಬಸವೇಶ್ವರ ಆಸ್ಪತ್ರೆ ಸೇರಿದಂತೆ ವಿವಿಧ ಖಾಸಗಿ ಆಸ್ಪತ್ರೆಗಳಲ್ಲಿ ಇನ್ನೂ 17 ಜನರು ಚಿಕಿತ್ಸೆ ಪಡೆಯುತ್ತಿದ್ದು, ಮೂರ್ನಾಲ್ಕು ಜನರ ಸ್ಥಿತಿ ಗಂಭೀರವಾಗಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಪ್ರಿಯಕರನ ಜೊತೆ ಸೇರಿ ಪುತ್ರನ ಹತ್ಯೆಗೈದ ತಾಯಿ; ಮೂವರು ಆರೋಪಿಗಳ ಬಂಧನ

ಗಾಯಾಳುಗಳ ಚಿಕಿತ್ಸೆ ವೆಚ್ಚವನ್ನು ಸರ್ಕಾರವೇ ಭರಿಸುವುದಾಗಿ ಹಾಗೂ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.