ETV Bharat / sukhibhava

ಆತಂಕ ಮೂಡಿಸುತ್ತಿರುವ ಹೃದಯಾಘಾತ ಪ್ರಕರಣ; ಒಂದೇ ದಿನದಲ್ಲಿ ನಾಲ್ವರು ಯುವಕರ ಸಾವು

author img

By ETV Bharat Karnataka Team

Published : Sep 21, 2023, 4:58 PM IST

ಯುವಜನತೆಯಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿದ್ದು, ಸಾವಿನ ಪ್ರಕರಣ ವರದಿಯಾಗುತ್ತಿದೆ.

An alarming heart attack case Four youths died in a single day
An alarming heart attack case Four youths died in a single day

ಹೈದರಾಬಾದ್​: ಹೃದಯಾಘಾತ ಮತ್ತು ಹೃದಯಸ್ತಂಭನ ಇಂದು ಚಿಕ್ಕಮಕ್ಕಳಿಂದ ಹಿಡಿದು ಎಲ್ಲಾ ವಯಸ್ಸಿನವರಿಗೂ ಕಾಡುತ್ತಿರುವ ಬಹುದೊಡ್ಡ ಸಮಸ್ಯೆಯಾಗಿದೆ. ಕೆಲವೇ ಕ್ಷಣಗಳಲ್ಲಿ ಪ್ರಾಣಕ್ಕೆ ಎರವಾಗುತ್ತಿರುವ ಈ ಕಾಯಿಲೆ ದಿಢೀರ್​ ಜೀವ ತೆಗೆಯುತ್ತಿರುವುದು ಆತಂಕದ ವಿಷಯವಾಗಿದೆ. ಅದರಲ್ಲೂ ಯುವ ಜನತೆಯಲ್ಲಿ ಹೃದಯಾಘಾತದ ಘಟನೆಗಳು ಹೆಚ್ಚುತ್ತಿವೆ. ಉತ್ತರ ಪ್ರದೇಶದಲ್ಲಿ ನಿನ್ನೆ 9ನೇ ತರಗತಿ ಬಾಲಕ ತರಗತಿಯಲ್ಲಿಯೇ ಹೃದಯಾಘಾತಕ್ಕೆ ಬಲಿಯಾದ ಘಟನೆ ಮಾಸುವ ಮುನ್ನವೇ ನಾಲ್ವರು ಯುವಕರ ಪ್ರಾಣಪಕ್ಷಿ ಹಾರಿಹೋಗಿದೆ.

ರಾಜ್​ ಕೋಟ್​ನಲ್ಲಿ ಮೂವರ ಸಾವು: ಗುಜರಾತ್​ನ ರಾಜ್​​ಕೋಟ್​ನಲ್ಲಿ ಹೃದಯಘಾತಕ್ಕೆ 45 ವರ್ಷದೊಳಗಿನ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಎಚ್​ಡಿಎಫ್​ಸಿ ಬ್ಯಾಂಕ್​ ಉದ್ಯೋಗಿ 26 ವರ್ಷದ ಕಿಶನ್​ ಧಬಲಿಯಾಗೆ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣಕ್ಕೆ ಆತನನ್ನು ರಾಜ್​ಕೋಟ್​ ಸಿವಿಲ್​ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ವೇಳೆ ಕಾರ್ಡಿಯಾಕ್​ ಅರೆಸ್ಟ್​(ಹೃದಯಸ್ತಂಭನ) ಎಂದಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ ಇಬ್ಬರು ಹೆಣ್ಣುಮಕ್ಕಳ ತಂದೆ 40 ವರ್ಷದ ರಾಜೆಂದ್ರಸಿನ್ಹಾ ವಾಲಾ ಸಾವನ್ನಪ್ಪಿದ್ದಾರೆ. ಖಾಸಗಿ ಸಂಸ್ಥೆ ಉದ್ಯೋಗಿಯಾಗಿದ್ದ ಇವರಿಗೆ ತಕ್ಷಣಕ್ಕೆ ಎದೆನೋವು ಕಾಣಿಸಿಕೊಂಡಿದ್ದು, ಖಾಸಗಿ ಕ್ಲಿನಿಕ್​ಗೆ ಕರೆ ತರಲಾಗಿದೆ. ಅವರ ಆರೋಗ್ಯ ತಕ್ಷಣಕ್ಕೆ ಕ್ಷೀಣಿಸಿದ್ದು, ರಾಜ್​ಕೋಟ್​ ಸಿವಿಲ್​ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಈ ವೇಳೆ ಅವರು ಕೂಡ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಮೂರನೇ ಪ್ರಕರಣದಲ್ಲಿ ಮಹೇಂದ್ರ ಎಂಬುವವರು ತೀವ್ರ ಎದೆ ನೋವಿನಿಂದ ತಕ್ಷಣಕ್ಕೆ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ತಕ್ಷಣಕ್ಕೆ ಅವರಿಗೆ ಚಿಕಿತ್ಸೆ ನೀಡಲಾಯಿತು. ಆದರೂ ಅವರು ಬದುಕಿ ಉಳಿಯಲಿಲ್ಲ.

ಡ್ಯಾನ್ಸ್​ ಮಾಡುವಾಗಲೇ ಹೃದಯಾಘಾತ: ಆಂದ್ರಪ್ರದೇಶ ಧರ್ಮಾವರಂ ನಗರದಲ್ಲಿ ಗಣೇಶ ಮಂಟಪದಲ್ಲಿ ನೃತ್ಯ ಮಾಡುತ್ತಿದ್ದ 26 ವರ್ಷ ಪ್ರಸಾದ್​ ಎಂಬ ಯುವಕ ತಕ್ಷಣಕ್ಕೆ ಕುಸಿದು ಬಿದ್ದಿದ್ದಾನೆ. ಕೂಡಲೇ ಆತನನ್ನು ಧರ್ಮಾವರಂನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಆತ ಸಾವನ್ನಪ್ಪಿದ್ದಾನೆ ಎಂದು ವೈದ್ಯರು ತಿಳಿಸಿದ್ದರು.

ಇನ್ನು ಯುವಕ ಗಣೇಶ ಮಂಟಪದಲ್ಲಿ ಸ್ನೇಹಿತರ ಜೊತೆ ಖುಷಿಯಿಂದ ನೃತ್ಯ ಮಾಡುತ್ತಿದ್ದಾಗ ನಡೆದ ಈ ಅನಾಹುತದ ವಿಡಿಯೋಗಳು ಇದೀಗ ಸಾಮಾಹಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿವೆ.

ಸಾಂಕ್ರಾಮಿಕತೆ ಬಳಿಕ ಯುವ ಜನತೆಯಲ್ಲಿ ಈ ರೀತಿಯ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿದ್ದು, ಇದು ವೈದ್ಯಕೀಯ ತಜ್ಞರು ಮತ್ತು ಸಾರ್ವಜನಿಕರಲ್ಲಿ ಆತಂಕ ಮೂಡಿಸುತ್ತಿದೆ. ಆರೋಗ್ಯಕರ ಜೀವನಶೈಲಿ ನಿರ್ವಹಣೆ ಮಾಡದಿರುವುದು, ದೈಹಿಕ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳದಿರುವುದು ಇದಕ್ಕೆ ಪ್ರಮುಖ ಕಾರಣಗಳಲ್ಲಿ ಒಂದಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. (ಐಎಎನ್​ಎಸ್​)

ಇದನ್ನೂ ಓದಿ: 9ನೇ ತರಗತಿ ಬಾಲಕನಿಗೆ ಹೃದಯಾಘಾತ! ತರಗತಿಯಲ್ಲೇ ಕುಸಿದು ಬಿದ್ದು ಸಾವು

ಹೈದರಾಬಾದ್​: ಹೃದಯಾಘಾತ ಮತ್ತು ಹೃದಯಸ್ತಂಭನ ಇಂದು ಚಿಕ್ಕಮಕ್ಕಳಿಂದ ಹಿಡಿದು ಎಲ್ಲಾ ವಯಸ್ಸಿನವರಿಗೂ ಕಾಡುತ್ತಿರುವ ಬಹುದೊಡ್ಡ ಸಮಸ್ಯೆಯಾಗಿದೆ. ಕೆಲವೇ ಕ್ಷಣಗಳಲ್ಲಿ ಪ್ರಾಣಕ್ಕೆ ಎರವಾಗುತ್ತಿರುವ ಈ ಕಾಯಿಲೆ ದಿಢೀರ್​ ಜೀವ ತೆಗೆಯುತ್ತಿರುವುದು ಆತಂಕದ ವಿಷಯವಾಗಿದೆ. ಅದರಲ್ಲೂ ಯುವ ಜನತೆಯಲ್ಲಿ ಹೃದಯಾಘಾತದ ಘಟನೆಗಳು ಹೆಚ್ಚುತ್ತಿವೆ. ಉತ್ತರ ಪ್ರದೇಶದಲ್ಲಿ ನಿನ್ನೆ 9ನೇ ತರಗತಿ ಬಾಲಕ ತರಗತಿಯಲ್ಲಿಯೇ ಹೃದಯಾಘಾತಕ್ಕೆ ಬಲಿಯಾದ ಘಟನೆ ಮಾಸುವ ಮುನ್ನವೇ ನಾಲ್ವರು ಯುವಕರ ಪ್ರಾಣಪಕ್ಷಿ ಹಾರಿಹೋಗಿದೆ.

ರಾಜ್​ ಕೋಟ್​ನಲ್ಲಿ ಮೂವರ ಸಾವು: ಗುಜರಾತ್​ನ ರಾಜ್​​ಕೋಟ್​ನಲ್ಲಿ ಹೃದಯಘಾತಕ್ಕೆ 45 ವರ್ಷದೊಳಗಿನ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಎಚ್​ಡಿಎಫ್​ಸಿ ಬ್ಯಾಂಕ್​ ಉದ್ಯೋಗಿ 26 ವರ್ಷದ ಕಿಶನ್​ ಧಬಲಿಯಾಗೆ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣಕ್ಕೆ ಆತನನ್ನು ರಾಜ್​ಕೋಟ್​ ಸಿವಿಲ್​ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ವೇಳೆ ಕಾರ್ಡಿಯಾಕ್​ ಅರೆಸ್ಟ್​(ಹೃದಯಸ್ತಂಭನ) ಎಂದಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ ಇಬ್ಬರು ಹೆಣ್ಣುಮಕ್ಕಳ ತಂದೆ 40 ವರ್ಷದ ರಾಜೆಂದ್ರಸಿನ್ಹಾ ವಾಲಾ ಸಾವನ್ನಪ್ಪಿದ್ದಾರೆ. ಖಾಸಗಿ ಸಂಸ್ಥೆ ಉದ್ಯೋಗಿಯಾಗಿದ್ದ ಇವರಿಗೆ ತಕ್ಷಣಕ್ಕೆ ಎದೆನೋವು ಕಾಣಿಸಿಕೊಂಡಿದ್ದು, ಖಾಸಗಿ ಕ್ಲಿನಿಕ್​ಗೆ ಕರೆ ತರಲಾಗಿದೆ. ಅವರ ಆರೋಗ್ಯ ತಕ್ಷಣಕ್ಕೆ ಕ್ಷೀಣಿಸಿದ್ದು, ರಾಜ್​ಕೋಟ್​ ಸಿವಿಲ್​ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಈ ವೇಳೆ ಅವರು ಕೂಡ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಮೂರನೇ ಪ್ರಕರಣದಲ್ಲಿ ಮಹೇಂದ್ರ ಎಂಬುವವರು ತೀವ್ರ ಎದೆ ನೋವಿನಿಂದ ತಕ್ಷಣಕ್ಕೆ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ತಕ್ಷಣಕ್ಕೆ ಅವರಿಗೆ ಚಿಕಿತ್ಸೆ ನೀಡಲಾಯಿತು. ಆದರೂ ಅವರು ಬದುಕಿ ಉಳಿಯಲಿಲ್ಲ.

ಡ್ಯಾನ್ಸ್​ ಮಾಡುವಾಗಲೇ ಹೃದಯಾಘಾತ: ಆಂದ್ರಪ್ರದೇಶ ಧರ್ಮಾವರಂ ನಗರದಲ್ಲಿ ಗಣೇಶ ಮಂಟಪದಲ್ಲಿ ನೃತ್ಯ ಮಾಡುತ್ತಿದ್ದ 26 ವರ್ಷ ಪ್ರಸಾದ್​ ಎಂಬ ಯುವಕ ತಕ್ಷಣಕ್ಕೆ ಕುಸಿದು ಬಿದ್ದಿದ್ದಾನೆ. ಕೂಡಲೇ ಆತನನ್ನು ಧರ್ಮಾವರಂನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಆತ ಸಾವನ್ನಪ್ಪಿದ್ದಾನೆ ಎಂದು ವೈದ್ಯರು ತಿಳಿಸಿದ್ದರು.

ಇನ್ನು ಯುವಕ ಗಣೇಶ ಮಂಟಪದಲ್ಲಿ ಸ್ನೇಹಿತರ ಜೊತೆ ಖುಷಿಯಿಂದ ನೃತ್ಯ ಮಾಡುತ್ತಿದ್ದಾಗ ನಡೆದ ಈ ಅನಾಹುತದ ವಿಡಿಯೋಗಳು ಇದೀಗ ಸಾಮಾಹಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿವೆ.

ಸಾಂಕ್ರಾಮಿಕತೆ ಬಳಿಕ ಯುವ ಜನತೆಯಲ್ಲಿ ಈ ರೀತಿಯ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿದ್ದು, ಇದು ವೈದ್ಯಕೀಯ ತಜ್ಞರು ಮತ್ತು ಸಾರ್ವಜನಿಕರಲ್ಲಿ ಆತಂಕ ಮೂಡಿಸುತ್ತಿದೆ. ಆರೋಗ್ಯಕರ ಜೀವನಶೈಲಿ ನಿರ್ವಹಣೆ ಮಾಡದಿರುವುದು, ದೈಹಿಕ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳದಿರುವುದು ಇದಕ್ಕೆ ಪ್ರಮುಖ ಕಾರಣಗಳಲ್ಲಿ ಒಂದಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. (ಐಎಎನ್​ಎಸ್​)

ಇದನ್ನೂ ಓದಿ: 9ನೇ ತರಗತಿ ಬಾಲಕನಿಗೆ ಹೃದಯಾಘಾತ! ತರಗತಿಯಲ್ಲೇ ಕುಸಿದು ಬಿದ್ದು ಸಾವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.