ಎನ್​ಸಿಸಿ ಕೆಡೆಟ್​ಗಳನ್ನು ಅಭಿನಂದಿಸಿದ ಸಿಎಂ ಬಸವರಾಜ ಬೊಮ್ಮಾಯಿ

By

Published : Mar 12, 2022, 8:43 PM IST

Updated : Feb 3, 2023, 8:19 PM IST

thumbnail
ಬೆಂಗಳೂರು: ಈ ಬಾರಿ ನವದೆಹಲಿಯಲ್ಲಿ ನಡೆದಿದ್ದ ಗಣರಾಜ್ಯೋತ್ಸವ ಪರೇಡ್​ನಲ್ಲಿ ಭಾಗವಹಿಸಿದ್ದ ಎನ್​ಸಿಸಿ ಕೆಡೆಟ್​ಗಳೊಂದಿಗೆ ಭಾವಚಿತ್ರ ತೆಗೆಸಿಕೊಳ್ಳುವ ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ ಭಾಗವಹಿಸಿದ್ದರು. ಶನಿವಾರ ಸಂಜೆ ವಿಧಾನಸೌಧ ಮುಂಭಾಗ ಎನ್​ಸಿಸಿ ಕೆಡೆಟ್​ಗಳೊಂದಿಗೆ ಭಾವಚಿತ್ರ ತೆಗೆಸಿಕೊಂಡು ಕೆಡೆಟ್​ಗಳನ್ನು ಅಭಿನಂದಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ಶಾಸಕ ನಾರಾಯಣಸ್ವಾಮಿ ಹಾಗೂ ಎನ್​ಸಿಸಿ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಈ ವೇಳೆ ಎನ್​ಸಿಸಿ ಕೆಡೆಟ್​ಗಳು ನಡೆಸಿಕೊಟ್ಟ ಸಾಂಸ್ಕೃತಿಕ ಕಾರ್ಯಕ್ರಮ ನೆರೆದಿದ್ದವರನ್ನು ರಂಜಿಸಿತು.
Last Updated : Feb 3, 2023, 8:19 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.