ಆಹಾರ ಕೊಡ್ತಿರೋ.. ಒಳಗೆ ಬರ್ಲೋ.. ಕಾಡಾನೆ ಆರ್ಭಟಕ್ಕೆ ಬೆಚ್ಚಿಬಿದ್ದ ಬಸ್ ಪ್ರಯಾಣಿಕರು! - ಆನೆ ಕಂಡು ಗಾಬರಿಗೊಂಡ ಬಸ್ ಪ್ರಯಾಣಿಕರು
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-16332509-thumbnail-3x2-sefed.jpg)
ಚಾಮರಾಜನಗರ: ನಡುರಸ್ತೆಯಲ್ಲಿ ನಿಂತಿದ್ದ ಆನೆಯೊಂದು ಎದುರಿಗೆ ಬಂದ ಬಸ್ ಕಿಟಕಿಗೆ ಸೊಂಡಿಲು ತೂರಿ ಆಹಾರ ಅರಸಿದ ಘಟನೆ ತಮಿಳುನಾಡಿನ ದಿಂಬಂ ಘಟ್ಟ ಪ್ರದೇಶದಲ್ಲಿ ನಡೆದಿದೆ. ಚಾಮರಾಜನಗರದಿಂದ ಸತ್ಯಮಂಗಲಂಗೆ ತೆರಳುತ್ತಿದ್ದ ಬಸ್ ಇದಾಗಿದ್ದು, ಆನೆ ಬರುತ್ತಿದ್ದಂತೆ ಚಾಲಕ ಸೀಟ್ ಬಿಟ್ಟು ಹಿಂದೆ ಸರಿದಿದ್ದಾರೆ. ಆನೆ ಸೊಂಡಿಲು ಒಳ ಹಾಕುತ್ತಿದ್ದಂತೆ ಪ್ರಯಾಣಿಕರು ಗಾಬರಿಗೊಂಡು ಕಿರುಚಾಡಿದ್ದಾರೆ. ಬಳಿಕ ಆನೆ ಬಸ್ನಿಂದ ಹಿಂದೆ ಸರಿಯಿತು. ನಡುರಸ್ತೆಯಲ್ಲಿ ಕಾಡಾನೆ ಆರ್ಭಟಕ್ಕೆ ಒಂದು ತಾಸಿಗೂ ಹೆಚ್ಚುಕಾಲ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.
Last Updated : Feb 3, 2023, 8:27 PM IST