ಹುಬ್ಬಳ್ಳಿಯಲ್ಲಿ ವರುಣನ ಅರ್ಭಟ.. ಮಳೆ ನೀರಿನಲ್ಲಿ ಕೊಚ್ಚಿ ಹೋದ ಬೈಕ್ಗಳು - ಮಹಾನಗರ ಪಾಲಿಕೆ ಸಹಾಯವಾಣಿ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-16610500-thumbnail-3x2-sefed.jpg)
ಹುಬ್ಬಳ್ಳಿ-ಧಾರವಾಡದಲ್ಲಿ ನಿನ್ನೆ ರಾತ್ರಿ ಸುರಿದ ಮಳೆ ಸಾಕಷ್ಟು ಅವಾಂತರ ಸೃಷ್ಟಿಸಿದೆ. ಮಳೆಯ ಹೊಡೆತಕ್ಕೆ ಹುಬ್ಬಳ್ಳಿ - ಧಾರವಾಡ ಅಲ್ಲೋಲ ಕಲ್ಲೋಲವಾಗಿದೆ. ರಸ್ತೆಗಳು ನೀರಿನಿಂದ ತುಂಬಿಹರಿದಿದ್ದು, ಹಲವು ಬಡಾವಣೆಗಳು ಜಲಾವೃತವಾಗಿವೆ. ಮನೆಗೆ ನುಗ್ಗಿದ ನೀರನ್ನು ಜನರು ಹೊರಹಾಕಲು ಹರಸಾಹಸಪಟ್ಟರು. ಸ್ಥಿತಿಗತಿ ಅರಿತ ಮಹಾನಗರ ಪಾಲಿಕೆ ಸಹಾಯವಾಣಿ ಆರಂಭಿಸಿದೆ. ವಿವಿಧ ಜೋನ್ಗೆ ಅಧಿಕಾರಿಗಳ ನೇಮಕ ಮಾಡಿದೆ. ಮಳೆಯಿಂದ ತೊಂದರೆ ಅನುಭವಿಸುತ್ತಿರುವವರಿಗೆ ಅಧಿಕಾರಗಳ ನಂಬರ್ ಕರೆ ಮಾಡುವಂತೆ ಮೇಯರ್ ಈರೇಶ್ ಅಂಚಟಗೇರಿ ಮನವಿ ಮಾಡಿದ್ದಾರೆ.
Last Updated : Feb 3, 2023, 8:29 PM IST