'ಕಾಲಚಕ್ರ ಹೀಗೆಯೇ ಇರುವುದಿಲ್ಲ..' ಜಿಲ್ಲಾಧಿಕಾರಿ ವಿರುದ್ಧ ಜಿ.ಪರಮೇಶ್ವರ್ ಗರಂ - ಜಿಲ್ಲಾಧಿಕಾರಿ ವೈ ಎಸ್ ಪಾಟೀಲ್
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-16278401-thumbnail-3x2-prm.jpg)
ತುಮಕೂರು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ಅವರು ಕೊರಟಗೆರೆ ವಿಧಾನಸಭಾ ಕ್ಷೇತ್ರಕ್ಕೆ ಮಳೆ ಹಾನಿ ಕುರಿತ ಪರಿಶೀಲನೆಗೆ ಬಾರದೆ ನಿರ್ಲಕ್ಷ್ಯ ವಹಿಸಿದ್ದಾರೆ. ಕಾಲ ಹೀಗೆಯೇ ಇರುವುದಿಲ್ಲ, ಉರುಳುತ್ತದೆ. ಇದನ್ನು ಸೂಕ್ಷ್ಮವಾಗಿ ನಾನು ಗಮನಿಸುತ್ತಿದ್ದೇನೆ. ಸಮಯ ಬಂದೇ ಬರುತ್ತದೆ. ಜಿಲ್ಲಾಧಿಕಾರಿಗಳಿಗೆ ಇದು ಜ್ಞಾಪಕವಿರಲಿ. ಕೊರಟಗೆರೆ ತಾಲೂಕು ತಿರಸ್ಕೃತವಾಗಬಾರದು. ಜಿಲ್ಲೆಯ 10 ತಾಲೂಕುಗಳಲ್ಲಿ ಇದೂ ಒಂದು ಎಂದು ಪರಿಗಣಿಸಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅಸಮಾಧಾನ ವ್ಯಕ್ತಪಡಿಸಿದರು.
Last Updated : Feb 3, 2023, 8:27 PM IST