ಜಂಬೂಸವಾರಿಗೆ ದಿನಗಣನೆ: ಗಜಪಡೆ ಕ್ಯಾಪ್ಟನ್ ಅಭಿಮನ್ಯುಗೆ ಭಾರದ ತಾಲೀಮು - ಮರಳು ಮೂಟೆ ಹೊರೆಸಿ ತಾಲೀಮ
🎬 Watch Now: Feature Video

ವಿಶ್ವವಿಖ್ಯಾತ ಜಂಬೂಸವಾರಿಗೆ ದಿನಗಣನೆ ಆರಂಭವಾಗುತ್ತಿದ್ದು, ಇಂದಿನಿಂದ ಗಜಪಡೆ ಕ್ಯಾಪ್ಟನ್ ಅಭಿಮನ್ಯುಗೆ ಭಾರ ಹೊರುವ ತಾಲೀಮು ಆರಂಭಿಸಲಾಗಿದೆ. ಕ್ಯಾಪ್ಟನ್ ಅಭಿಮನ್ಯುಗೆ 300 ಕೆ.ಜಿ.ಮರಳು ಮೂಟೆ ಹೊರೆಸಿ ತಾಲೀಮ ಶುರು ಮಾಡಿಸಲಾಗಿದೆ. ಧನಂಜಯ, ಗೋಪಾಲಸ್ವಾಮಿ, ಮಹೇಂದ್ರ, ಭೀಮ ಆನೆಗಳಿಗೆ ಭಾರ ಹೊರುವ ತಾಲೀಮು ನಡೆಸಲಾಗುವುದು. ಮೊದಲ ದಿನ ಅಭಿಮನ್ಯುಗೆ 300 ಕೆ.ಜಿ.ಯಷ್ಟು ಮರಳು ಮೂಟೆ ಹೊರೆಸಿ ಅರಮನೆಯಿಂದ ಬನ್ನಿಮಂಟಪದವರೆಗೆ ತಾಲೀಮು ನೀಡಲಾಯಿತು. ಹಂತ ಹಂತವಾಗಿ 800 ಕೆ.ಜಿ.ವರೆಗೆ ಭಾರ ಹೊರಿಸಿ ಅಭ್ಯಾಸ ಮಾಡಿಸಲಾಗುವುದು. ಡಿಸಿಎಫ್ ಕರಿಕಾಳನ್ ನೇತೃತ್ವದಲ್ಲಿ ಗಜಪಡೆಗೆ ಭಾರ ಹೊರಿಸುವ ತಾಲೀಮು ಶುರುವಾಗಿದೆ.
Last Updated : Feb 3, 2023, 8:26 PM IST