ಚಿರಂಜೀವಿ... ಕಾರ್​ ಅಪಘಾತದಿಂದ ಕೂದಲೆಳೆ ಅಂತರದಲ್ಲಿ ಪಾರಾದ ಮಗು! ವಿಡಿಯೋ

By

Published : Jan 14, 2021, 7:49 PM IST

thumbnail
ಮಗುವೊಂದು ಕಾರ್​ ಅಪಘಾತದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿರುವ ರೋಚಕ ಘಟನೆ ತೆಲಂಗಾಣ ರಾಜ್ಯದ ರಂಗಾರೆಡ್ಡಿ ಜಿಲ್ಲೆಯ ರಾಜೇಂದ್ರನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ. ಇಲ್ಲಿನ ವಿಹಾರ್​ ನಗರದ 2 ನೇ ಹಂತದ ಅಪಾರ್ಟ್‌ಮೆಂಟ್‌ನಲ್ಲಿ ಮಗು ಆಟವಾಡುತ್ತಿತ್ತು. ಈ ವೇಳೆ ವಾಹನವೊಂದು ಮಗುವನ್ನು ಪಾರ್ಕಿಂಗ್ ಸ್ಥಳದಿಂದ ಹೊರಗಿರುವ ಗೇಟ್​ವರೆಗೂ ಎಳೆದೊಯ್ದಿದೆ. ಬಳಿಕ ಮಗು ಕಾರಿನ ಮಧ್ಯೆ ಸಿಲುಕಿರುವುದರಿಂದ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದೆ. ಇದನ್ನು ಗಮನಿಸಿದ ಸ್ಥಳೀಯರು ಪೋಷಕರಿಗೆ ಮಾಹಿತಿ ನೀಡಿದರು. ನಂತರ ಮಗುವನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ, ಅಪಾರ್ಟ್‌ಮೆಂಟ್‌ನಲ್ಲಿ ನೌಕರರನ್ನು ಇಳಿಸಲು ಬಂದ ವಾಹನದಿಂದ ಈ ಅವಘಡ ನಡೆದಿದೆ ಎಂಬುದರ ಬಗ್ಗೆ ಮಗುವಿನ ಪೋಷಕರು ಪೊಲೀಸರಿಗೆ ಮಾಹಿತಿ ನೀಡಿದರು. ಬುಧವಾರ ಮಧ್ಯಾಹ್ನ ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.