ಅಯೋಧ್ಯೆ ಐತಿಹಾಸಿಕ ತೀರ್ಪು: ಸಂಸದ ಗೌತಮ್ ಗಂಭೀರ್ ಮೆಚ್ಚುಗೆ - ಬಿಜೆಪಿ ಸಂಸದ ಗೌತಮ್ ಗಂಭೀರ್
🎬 Watch Now: Feature Video

ಸುಪ್ರೀಂಕೋರ್ಟ್ ನೀಡಿರುವ ತೀರ್ಪನ್ನು ಎಲ್ಲರೂ ಸ್ವಾಗತಿಸಿ ದೇಶವನ್ನು ಮುನ್ನಡೆಸಿಕೊಂಡು ಹೋಗುವ ಕೆಲಸ ಮಾಡಬೇಕು. ಮನಸ್ಸು ಮಾಡಿದರೆ ಈ ಹಿಂದಿನ ಪಕ್ಷಗಳೇ ಈ ಕೆಲಸ ಮಾಡಬಹುದಿತ್ತು. ಆದರೆ ಇದೀಗ ಬಜೆಪಿ ಸರ್ಕಾರದ ವೇಳೆ ಇಂತಹ ತೀರ್ಪು ಹೊರಬಿದ್ದಿದೆ ಎಂದು ಭಾರತೀಯ ಕ್ರಿಕೆಟ್ ತಂಡದ ಮಾಜಿ ಕ್ರಿಕೆಟಿಗ ಹಾಗೂ ಸಂಸದ ಗೌತಮ್ ಗಂಭೀರ್ ಹೇಳಿದ್ರು.
ಈಗಾಗಲೇ ತ್ರಿವಳಿ ತಲಾಕ್, ಜಮ್ಮು ಕಾಶ್ಮೀರಕ್ಕೆ ನೀಡಲಾದ ವಿಶೇಷ ಸ್ಥಾನಮಾನವನ್ನು ಕೇಂದ್ರ ಸರ್ಕಾರ ರದ್ದುಪಡಿಸುವಂಥ ಮಹತ್ವದ ತೀರ್ಮಾನಗಳನ್ನು ತೆಗೆದುಕೊಂಡಿದ್ದು ಮೆಚ್ಚುವಂಥದ್ದು ಎಂದು ಅವರು ಅಭಿಪ್ರಾಯಪಟ್ಟರು.