ಯೂತ್ ಕಾಂಗ್ರೆಸ್ ಮುಖಂಡನ ಮೇಲೆ ಕ್ರಿಕೆಟ್ ಬ್ಯಾಟ್ನಿಂದ ಮಾರಣಾಂತಿಕ ಹಲ್ಲೆ: ವಿಡಿಯೋ
ಯೂತ್ ಕಾಂಗ್ರೆಸ್ ಮುಖಂಡನೊಬ್ಬನ ಮೇಲೆ ಡಿಸಿಸಿ ಪ್ರಧಾನ ಕಾರ್ಯದರ್ಶಿ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಕೇರಳದ ತಿರುವನಂತಪುರಂನಲ್ಲಿ ನಡೆದಿದೆ. ಯುವ ಕಾಂಗ್ರೆಸ್ ಮುಖಂಡ ಜಯನ್ ಮೇಲೆ ಕ್ರಿಕೆಟ್ ಬ್ಯಾಟ್ನಿಂದ ಹಲ್ಲೆ ನಡೆಸಲಾಗಿದ್ದು, ಇದರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿವೆ. ಬೈಕ್ ಮೇಲೆ ಬಂದ ಡಿಸಿಸಿಇ ಅಧ್ಯಕ್ಷ ಹಾಗೂ ಮತ್ತೋರ್ವ ವ್ಯಕ್ತಿ ಈ ಕೃತ್ಯವೆಸಗಿದ್ದು, ಗಂಭೀರವಾಗಿ ಗಾಯಗೊಂಡಿರುವ ಅವರನ್ನ ತಿರುವನಂತಪುರಂನ ವೈದ್ಯಕೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬ್ಯಾಂಕ್ನಲ್ಲಿ ನಡೆದ ಅವ್ಯವಹಾರದ ಬಗ್ಗೆ ದೂರು ದಾಖಲು ಮಾಡಿದ್ದಕ್ಕಾಗಿ ಈ ಹಲ್ಲೆ ನಡೆಸಿದ್ದಾಗಿ ತಿಳಿದು ಬಂದಿದೆ.
Last Updated : Feb 14, 2020, 2:30 PM IST